ಸರಕಾರಿ ನೌಕರರ ಬೆನ್ನು ತಟ್ಟಿದ ಕಟ್ಟಾ

ಶನಿವಾರ ಭೂಮಾಪನ ಕಂದಾಯದ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಭೂಮಿಗೂ ಮತ್ತು ಕೃಷಿಕರಿಗೂ ಅತ್ಯಂತ ಹತ್ತಿರ ಸಂಬಂಧವಿದೆ. ಕೃಷಿಕರ ಒಂದು ಇಂಚು ಭೂಮಿ ನಷ್ಟವಾದರೂ ಸಹಿಸುವುದಿಲ್ಲ. ಭೂಮಾಪಕರು ಅತ್ಯಂತ ಜವಾಬ್ದಾರಿ ಸ್ಥಾನ ಅಲಂಕರಿಸಿದ್ದಾರೆ. ಆ ಜವಾಬ್ದಾರಿಗೆ ತಕ್ಕಂತೆ ಅವರು ನಡೆದುಕೊಳ್ಳವುದು ಅವಶ್ಯಕವೆಂದರು. ಭೂಮಿ ಇಡೀ ದೇಶಕ್ಕೆ ಒಂದು ಮಾದರಿ ಕಾರ್ಯಕ್ರಮ. ಈ ಸಾಧನೆ ಭೂಮಾಪಕರಿಗೆ ಸಲ್ಲುತ್ತದೆ. ಆದರೆ ಹಿರಿಯ ಅಧಿಕಾರಿಗಳು ಮಾಡಿದ ಲೋಪದೋಷಗಳಿಂದಾಗಿ ನೆಮ್ಮದಿ ಕೇಂದ್ರಗಳು ಜನರ ನೆಮ್ಮದಿ ಕೆಡಿಸಿದೆ. ನಾವು ಎಡವಿದ್ದೇವೆ ಎಂದ ಸಚಿವರು, ಈ ತಪ್ಪನ್ನು ಸರಿಪಡಿಸಲಾಗುವುದೆಂದರು.
ರಾಜ್ಯದಲ್ಲಿ ಸುಮಾರು 140 ವರ್ಷಗಳ ಹಿಂದೆ ತಯಾರಿಸಿದ ಸರ್ವೆ ದಾಖಲೆಗಳು ಶಿಥಿಲವಾಗಿರುವ ಕಾರಣ ಅವುಗಳನ್ನು ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ 26 ತಾಲ್ಲೂಕುಗಳಲ್ಲಿ ಸ್ಕ್ಯಾನಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಉಳಿದ 150 ತಾಲ್ಲೂಕುಗಳಲ್ಲಿ ಈ ಕಾರ್ಯವನ್ನು ಮಾಡಲಾಗುವುದೆಂದು ಭೂ ಮಾಪನ ಇಲಾಖೆ ಆಯುಕ್ತ ಕೆ.ಎಸ್. ಪ್ರಭಾಕರ್ ಅವರು ತಿಳಿಸಿದರು.
12ನೇ ಹಣಕಾಸು ಆಯೋಗದ ಶಿಫಾರಸಿನನ್ವಯ ವಿವಿಧ ಗ್ರಾಮ/ಪಟ್ಟಣಗಳಲ್ಲಿ ನಗರ ಮಾಪನ ಕೆಲಸ ಜಾರಿಗೊಳಿಸಬೇಕೆಂಬ ಹಾಗೂ ತರಬೇತಿಯನ್ನು ಬಲಪಡಿಸಬೇಕೆಂಬ ಹಿನ್ನೆಲೆಯಲ್ಲಿ, ಸುಮಾರು 27 ಸ್ಥಳಗಳಲ್ಲಿ ನಗರ ಮಾಪನ ಕೆಲಸವನ್ನು ಕೈಗೊಂಡು ನಿರ್ವಹಣಾ ಕೆಲಸವನ್ನು ಅನುಷ್ಠಾನಕ್ಕೆ ತರಲಾಗಿದೆ. ಇದರ ಜೊತೆಗೆ ಸುಮಾರು 1000 ನೌಕರರಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಪ್ರಾದೇಶಿಕ ಆಯುಕ್ತ ಜಿ.ಎಂ. ಧನಂಜಯ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕೆ. ವಿಶ್ವನಾಥರೆಡ್ಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ, ಗೌರವಾಧ್ಯಕ್ಷ ಎಂ.ವಿ. ರಾಜಶೇಖರಯ್ಯ ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications