ಸರಕಾರಿ ನೌಕರರ ಬೆನ್ನು ತಟ್ಟಿದ ಕಟ್ಟಾ

ಶನಿವಾರ ಭೂಮಾಪನ ಕಂದಾಯದ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಭೂಮಿಗೂ ಮತ್ತು ಕೃಷಿಕರಿಗೂ ಅತ್ಯಂತ ಹತ್ತಿರ ಸಂಬಂಧವಿದೆ. ಕೃಷಿಕರ ಒಂದು ಇಂಚು ಭೂಮಿ ನಷ್ಟವಾದರೂ ಸಹಿಸುವುದಿಲ್ಲ. ಭೂಮಾಪಕರು ಅತ್ಯಂತ ಜವಾಬ್ದಾರಿ ಸ್ಥಾನ ಅಲಂಕರಿಸಿದ್ದಾರೆ. ಆ ಜವಾಬ್ದಾರಿಗೆ ತಕ್ಕಂತೆ ಅವರು ನಡೆದುಕೊಳ್ಳವುದು ಅವಶ್ಯಕವೆಂದರು. ಭೂಮಿ ಇಡೀ ದೇಶಕ್ಕೆ ಒಂದು ಮಾದರಿ ಕಾರ್ಯಕ್ರಮ. ಈ ಸಾಧನೆ ಭೂಮಾಪಕರಿಗೆ ಸಲ್ಲುತ್ತದೆ. ಆದರೆ ಹಿರಿಯ ಅಧಿಕಾರಿಗಳು ಮಾಡಿದ ಲೋಪದೋಷಗಳಿಂದಾಗಿ ನೆಮ್ಮದಿ ಕೇಂದ್ರಗಳು ಜನರ ನೆಮ್ಮದಿ ಕೆಡಿಸಿದೆ. ನಾವು ಎಡವಿದ್ದೇವೆ ಎಂದ ಸಚಿವರು, ಈ ತಪ್ಪನ್ನು ಸರಿಪಡಿಸಲಾಗುವುದೆಂದರು.
ರಾಜ್ಯದಲ್ಲಿ ಸುಮಾರು 140 ವರ್ಷಗಳ ಹಿಂದೆ ತಯಾರಿಸಿದ ಸರ್ವೆ ದಾಖಲೆಗಳು ಶಿಥಿಲವಾಗಿರುವ ಕಾರಣ ಅವುಗಳನ್ನು ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ 26 ತಾಲ್ಲೂಕುಗಳಲ್ಲಿ ಸ್ಕ್ಯಾನಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಉಳಿದ 150 ತಾಲ್ಲೂಕುಗಳಲ್ಲಿ ಈ ಕಾರ್ಯವನ್ನು ಮಾಡಲಾಗುವುದೆಂದು ಭೂ ಮಾಪನ ಇಲಾಖೆ ಆಯುಕ್ತ ಕೆ.ಎಸ್. ಪ್ರಭಾಕರ್ ಅವರು ತಿಳಿಸಿದರು.
12ನೇ ಹಣಕಾಸು ಆಯೋಗದ ಶಿಫಾರಸಿನನ್ವಯ ವಿವಿಧ ಗ್ರಾಮ/ಪಟ್ಟಣಗಳಲ್ಲಿ ನಗರ ಮಾಪನ ಕೆಲಸ ಜಾರಿಗೊಳಿಸಬೇಕೆಂಬ ಹಾಗೂ ತರಬೇತಿಯನ್ನು ಬಲಪಡಿಸಬೇಕೆಂಬ ಹಿನ್ನೆಲೆಯಲ್ಲಿ, ಸುಮಾರು 27 ಸ್ಥಳಗಳಲ್ಲಿ ನಗರ ಮಾಪನ ಕೆಲಸವನ್ನು ಕೈಗೊಂಡು ನಿರ್ವಹಣಾ ಕೆಲಸವನ್ನು ಅನುಷ್ಠಾನಕ್ಕೆ ತರಲಾಗಿದೆ. ಇದರ ಜೊತೆಗೆ ಸುಮಾರು 1000 ನೌಕರರಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಪ್ರಾದೇಶಿಕ ಆಯುಕ್ತ ಜಿ.ಎಂ. ಧನಂಜಯ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕೆ. ವಿಶ್ವನಾಥರೆಡ್ಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ, ಗೌರವಾಧ್ಯಕ್ಷ ಎಂ.ವಿ. ರಾಜಶೇಖರಯ್ಯ ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications