ತೆಂಗಿನಮರ ಏರುವವರಿಗೆ ವಿಮಾ ಸೌಲಭ್ಯ: ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ
ಮಂಡ್ಯ, ಜನವರಿ 22: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೇರಾ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ಸದ್ಯ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ (ಸಿಡಿಬಿ), ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಿದೆ. ಇದರಿಂದ ದೇಶದಲ್ಲಿ ತೆಂಗು ಬೆಳೆಗೆ ಪ್ರೋತ್ಸಾಹ ನೀಡಿದಂತಾಗುತ್ತಿದೆ.
ಈ ವಿಮಾ ಯೋಜನೆಯಲ್ಲಿ ತೆಂಗಿನ ಮರಗಳನ್ನು ಏರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನಕಾಯಿ ಕೊಯ್ದು ಮಾಡುವವರಿಗೆ, ಹೈಬ್ರಿಡೋನೇಶನ್ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್ ಪಿ (ಪ್ರಾತ್ಯಕ್ಷಿತೆ ಹಾಗೂ ಬೀಜ ಉತ್ಪಾದನೆ) ಫಾರ್ಮ್ ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್ಸಿಟಿ (ಫ್ರೆಂಡ್ಸ್ ಆಫ್ ಕೋಕೋನಟ್ ಟೀ) ಕೌಶಲ್ಯ-ತರಭೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ. ಹೀಗಾಗಿ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರು ತಿಳಿಯಬೇಕಾಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಈ ಯೋಜನೆಯಡಿ ವಿಮೆಯ ಮೊತ್ತವು ವಾರ್ಷಿಕ ರೂ 956/- ಆಗಿದ್ದು, ಶೇ.75:25ರಂತೆ ಇದರಲ್ಲಿ ರೂ.717/- ಕಂತಿನ ಮೊತ್ತವನ್ನು ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಪಾವತಿ ಮಾಡಲಾಗುವುದು ಹಾಗೂ ಉಳಿದ ರೂ 239/- ಕಂತಿನ ಮೊತ್ತವನ್ನು ಪಾಲಿಸಿದಾರರು ಪಾವತಿಸಬೇಕಾಗಿರುತ್ತದೆ. ಪ್ರತಿ ವರ್ಷವು ಈ ವಿಮಾ ಯೋಜನೆಯನ್ನು ಪಾಲಿಸಿದಾರರು ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಈ ಯೋಜನೆಯಡಿ ಪಾಲಿಸಿದಾರರು ಅಪಘಾತಕ್ಕೊಳಗಾಗಿ ಮರಣ ಹೊಂದಿದ್ದಲ್ಲಿ 7 ಲಕ್ಷ ರೂಪಾಯಿ, ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದ್ದಲ್ಲಿ 3.50 ಲಕ್ಷ ರೂಪಾಯಿ, ಆಸ್ಪತ್ರೆ ವೆಚ್ಚ (24ಗಂಟೆ ಐಪಿ) ಗರಿಷ್ಠ 2 ಲಕ್ಷ ರೂಪಾಯಿ, ತಾತ್ಕಲಿಕ ಅಂಗವಿಕಲತೆ ಹೊಂದುವವರಿಗೆ ಪ್ರತಿ ವಾರ ರೂ.3500/-ರಂತೆ ಗರಿಷ್ಠ ರೂ 21,000/-, ಆಂಬ್ಯುಲೆನ್ಸ್ ಖರ್ಚು 3500 ರೂಪಾಯಿ ಹಾಗೂ ಪಾಲಿಸಿದಾರರು ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5500 ರೂಪಾಯಿ ನೀಡಲಾಗುತ್ತದೆ.

ತೆಂಗು ಅಭಿವೃದ್ಧಿ ಮಂಡಳಿಯಿಂದ ನಿಗದಿತ ಅರ್ಜಿ ನಮೂನೆಗೆ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೇರಾ ಸುರಕ್ಷಾ ವಿಮಾ ಯೋಜನೆಯ ಕುರಿತು ಜಾಲತಾಣದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಮಂಡ್ಯ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕೆ.ಎನ್ ರೂಪಶ್ರೀ ತಿಳಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications