ಮೆಣಸಿನಕಾಯಿ ಬೆಳೆಯಲ್ಲಿ ಸೊರಗು ರೋಗ, ಕರಿಹೇನು ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಿ
ಬಳ್ಳಾರಿ,ನ ನವೆಂಬರ್ 11: ಸಿರುಗುಪ್ಪ ತಾಲೂಕಿನಲ್ಲಿ ಅಕ್ಟೋಬರ್ ಮಾಹೆಯಲ್ಲಿ ಸುರಿದ ಮಳೆಯ ತೇವಾಂಶದಿಂದ ಮೆಣಸಿನಕಾಯಿ ಬೆಳೆಯಲ್ಲಿ ಸೊರಗು ರೋಗ ಮತ್ತು ಕರಿಹೇನಿನ ಹಾವಳಿ ಜಾಸ್ತಿಯಿದ್ದು, ಹೋಗಲಾಡಿಸುವುದಕ್ಕೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಹಲವು ಸಲಹೆ ನೀಡಿದ್ದಾರೆ.
ಈ ರೋಗವು ಪ್ಯುಜೆರಿಯಂ ಎಂಬ ಶೀಲಿಂಧ್ರದಿಂದ ಮೆಣಸಿಕಾಯಿ ಗಿಡಕ್ಕೆ ಬರುತ್ತದೆ. ಭೂಮಿಗೆ ಹೊಂದಿಕೊಂಡಂತೆ ಇರುವ ಕಾಂಡದ ಭಾಗದಲ್ಲಿ ಬಿಳಿ ಹತ್ತಿಯ ದಾರದಂತೆ ಕಾಣುವ ಶಿಲೀಂಧ್ರ ಕಾಣಿಸುತ್ತದೆ. ಇದರಿಂದ ಎಲೆ ಮತ್ತು ಕಾಂಡಗಳಿಗೆ ಬೇರುಗಳಿಂದ ಆಹಾರ ಮತ್ತು ನೀರು ಸರಬರಾಜು ಆಗುವುದು ನಿಂತು ಹೋಗುತ್ತದೆ, ಪರಿಣಾಮವಾಗಿ ಗಿಡ ಬಾಡುತ್ತ ಕ್ರಮೇಣ ಒಣಗುತ್ತದೆ.
ಸೊರಗು ರೋಗದ (ವಿಲ್ಟ್) ನಿರ್ವಹಣೆ ಕ್ರಮಗಳು
ಹೊಲಗಳಲ್ಲಿ ನೀರು ನಿಲ್ಲದಂತೆ ಬಸಿ ಕಾಳುವೆಗಳನ್ನು ತೆಗೆದು ಸಂಪೂರ್ಣ ನೀರು ಹೊರಹೋಗುವಂತೆ ಮಾಡಬೇಕು. ಸೋಡೋಮೋನಸ್ ಪ್ಲೋರೋಸೆಸ್ಸ್ (ಜೈವಿಕ ಬ್ಯಾಕ್ಟಿರಿಯಾ) 5 ml ಪ್ರತಿ ಲೀಟರ್ ನೀರಿನೊಂದಿಗೆ ಸೇರಿಸಿ ಸಿಂಪಡಣೆ ಮಾಡುವುದು ಮತ್ತು ಗಿಡಗಳ ಬುಡಕ್ಕೆ ಬಿಡುವುದು. ಟಾಟಾ ಮಾಸ್ಟರ್ (ಮೆಟಲ್ಯಾಕ್ಸಿಲ್ ಶೇ.8 ಜೊತೆಗೆ ಮ್ಯಾಂಕೋಜೆಬ್ ಶೇ.64) 2ml ಪ್ರತಿ ಲೀಟರ್ ನೀರಿಗೆ ಹಾಕಿ ಸಿಂಪಡಣೆ ಮಾಡುವುದು ಮತ್ತು ಗಿಡಗಳ ಬುಡಕ್ಕೆ ಬಿಡಬೇಕು. 19:19:19 (ಎನ್ಪಿಕೆ) 5 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಲಿಬರಲ್ (ಲಘು ಪೋಷಕಾಂಶಗಳ ಮಿಶ್ರಿತ) 1 ಗ್ರಾಂ ಅನ್ನು ಪ್ರತಿ ಲೀಟರ್ ನೀರಿಗೆ ಹಾಕಿ ಸಿಂಪಡಣೆ ಮಾಡಬೇಕು ಎಂದು ಮಾಹಿತಿ ನಿಡಿದ್ದಾರೆ.

ಕರಿಹೇನು ನಿರ್ವಹಣೆ (Black Thrips)ನಿರ್ವಹಣೆ ಕ್ರಮಗಳು
ಗಿಡದಿಂದ ಗಿಡಕ್ಕೆ ಸೂಕ್ತ ಅಂತರ ಕಾಪಾಡುವುದು ಅತ್ಯಗತ್ಯ. ಬೇವೆರಿಯ ಬೇಸಿಯಾನ ಜೈವಿಕ ಕೀಟನಾಶಕವನ್ನು 5 ರಿಂದ 10 ಗ್ರಾಂ ಪ್ರತಿ ಲೀಟರ್ ನೀರಿಗೆ ಬೇರೆಸಿ ಸಿಂಪಡಿಸುವುದು. ಬದುಗಳ ಸುತ್ತ ಜೋಳ ಅಥವಾ ಸಜ್ಜೆಯಂತಹ ಬೆಳೆಗಳನ್ನು ಬೆಳೆಯುವುದರಿಂದ ಕೀಟಪಸರಿಸುವುದನ್ನು ತಡೆಗಟ್ಟಬಹುದು. Movento OD 2ml + Alanto 1.5 ml + ಬೇವಿನ ಹೆಣ್ಣೆ 5 ಮಿಲಿಗ್ರಾಂ ಅನ್ನು ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು.
ನಾಲ್ಕು ದಿನದ ನಂತರ Spinosad 0.3ml + Sivanto 2ml ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡಬೇಕು. ಒಂದು ವಾರದ ನಂತರ Movento OD 2ml + Sivanto 2ml ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುಬೇಕು. Dinatefuron(Token) 0.4 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಣೆ ಮಾಡುವುದು. (Tracer) 0.3ml ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಣೆ ಮಾಡಬೇಕು. Spinotoram(Delegate) 0.5ml ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು.
ರೈತರ ಮೆಣಸಿನ ಕಾಯಿ ತೋಟದಲ್ಲಿ ಹೆಚ್ಚಿನ ಕರಿಹೇನು ಕೀಟ ಬಾಧೆ ಕಂಡುಬಂದಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಸಿರುಗುಪ್ಪ ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯ ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಿರುಗುಪ್ಪ ತಾಲೂಕಿಗೆ 2000 ಎಕರೆ ಪ್ರದೇಶಗಳಲ್ಲಿ ಅನುಷ್ಠಾನ ಗಳಿಸಲು ಗುರಿಯನ್ನು ನಿಗದಿಪಡಿಸಲಾಗಿದೆ. ಇದುವರೆಗೆ ಸಿರುಗುಪ್ಪ ತಾಲೂಕಿನ 117 ಫಲಾನುಭವಿಗಳ ಪೈಕಿ ಕೇವಲ 547 ಎಕರೆ ಪ್ರದೇಶದಲ್ಲಿ ಮಾತ್ರ ಹನಿ ನೀರಾವರಿಯನ್ನು ಆಳವಡಿಕೊಂಡಿದ್ದು, ಇನ್ನೂ 1453 ಎಕರೆ ಪ್ರದೇಶದಲ್ಲಿ ಹನಿ ನೀರಾವರಿ ಆಳವಡಿಸಿದಂತಹ ರೈತರಿಗೆ ಸಹಾಯಧನ ನೀಡಲು ಅವಕಾಶವಿದೆ.
ರೈತರು ಕಡ್ಡಾಯವಾಗಿ ಕೊಳವೆ ಬಾವಿ ಅಥವಾ ನೀರಾವರಿ ಸೌಲಭ್ಯವನ್ನು ಹೊಂದಿರಬೇಕು. ಸಾಮಾನ್ಯ ರೈತರಿಗೆ ಶೇ.75ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08396-222066 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications