Kodagu Coffee Mela : ಡಿಸೆಂಬರ್ 10, 11ರಂದು ಕೊಡಗು ಕಾಫಿ ಮೇಳ
ಮಡಿಕೇರಿ, ಡಿಸೆಂಬರ್ 06; ಕೊಡಗು ಕಾಫಿ ಮೇಳಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಮಡಿಕೇರಿಯ ರಾಜಾಸೀಟ್ನಲ್ಲಿ ಮೊದಲ ಬಾರಿಗೆ ಕೊಡಗು ಕಾಫಿ ಮೇಳ ನಡೆಯಲಿದೆ ಎಂದು ಕೊಡಗು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಮಾತನಾಡಿ, "ಡಿಸೆಂಬರ್ 10 ಮತ್ತು 11ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟ್ನಲ್ಲಿ ನಡೆಯಲಿದೆ" ಎಂದು ಹೇಳಿದರು.
ಕಾಫಿ ಮಂಡಳಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಎರಡನೇ ಶನಿವಾರ ಮತ್ತು ಭಾನುವಾರ ಗ್ರೇಟರ್ ರಾಜಸೀಟ್ನಲ್ಲಿ ಕೊಡಗು ಕಾಫಿ ಮೇಳವನ್ನು ಆಯೋಜಿಸಲಾಗಿದೆ" ಎಂದರು.

"ವಾರಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜಸೀಟ್ಗೆ ಭೇಟಿ ನೀಡುತ್ತಾರೆ. ಕಾಫಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವುದು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕೊಡಗು ಕಾಫಿ ಮೇಳ ಆಯೋಜಿಸಲಾಗಿದೆ" ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಉತ್ಕೃಷ್ಟ ಕಾಫಿ ಬೆಳೆ ಬೆಳೆಯುತ್ತಿದ್ದು, ಈ ಕಾಫಿ ಬೆಳೆಯಿಂದ ಕಾಫಿ ಉತ್ಪಾದನೆ ಮತ್ತು ಮಾರಾಟ, ಕಾಫಿ ಬೀಜದಿಂದ ಚಿಕೋರಿ ಬಳಸಿ ಕಾಫಿ ಪುಡಿ ಮಾಡುವುದು ಹೀಗೆ ಪ್ರತಿ ಹಂತದಲ್ಲಿ ವಿವರಿಸಲಾಗುತ್ತದೆ. ಕೊಡಗಿನ ಕಾಫಿಯನ್ನು ಎಲ್ಲಾ ಕಡೆ ಪರಿಚಯಿಸುವುದು ಈ ಮೇಳದ ಉದ್ದೇಶವಾಗಿದೆ.
ಒಂದು ಜಿಲ್ಲೆ, ಒಂದು ಉತ್ಪನ್ನ; ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೊಡಗು ಜಿಲ್ಲೆಗೆ ಕಾಫಿ ಬೆಳೆ ಆಯ್ಕೆಯಾಗಿದ್ದು, ಕಾಫಿ ಬೆಳೆಗೆ ಮತ್ತಷ್ಟು ಮಾರುಕಟ್ಟೆ ಒದಗಿಸಬೇಕಿದೆ. ಕಾಫಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಇದುವರೆಗೆ 12 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. 479 ರೈತರಿಗೆ ಕಾಫಿ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ.

ರಾಜಾಸೀಟ್ ಬಳಿ ಇರುವ ಕೂರ್ಗ್ ವಿಲೇಜ್ಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಕ್ಕಳ ಕ್ರೀಯಾಶೀಲ ಚಟುವಟಿಕೆಗೆ ಒತ್ತು ನೀಡಲಾಗುತ್ತದೆ. ನೆಹರು ಮಂಟದಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಕಾಫಿ ಮೇಳದಲ್ಲಿ ವಿವಿಧ ಬ್ರಾಂಡ್ಗಳ ಕಾಫಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳು ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇರಲಿವೆ. ಡಿಸೆಂಬರ್ 24 ಮತ್ತು 25ರಂದು ಜೇನುಮೇಳ ಹಾಗೂ ಜನವರಿ 2ನೇ ವಾರದಲ್ಲಿ ವೈನ್ ಮೇಳ ಸಹ ಆಯೋಜನೆ ಮಾಡಲು ಚಿಂತನೆ ನಡೆಸಲಾಗಿದೆ.
ಕೊಡಗು ಕಾಫಿ ಮೇಳದಲ್ಲಿ ಸ್ಟಾಲ್ ನಿರ್ಮಾಣಕ್ಕೆ ಸಹ ದರ ನಿಗದಿ ಮಾಡಲಾಗಿದೆ. ಕನಿಷ್ಠ 5 ರಿಂದ 15 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications