ಕೆಆರ್ ನಗರದಲ್ಲಿ ತಾತ್ಕಾಲಿಕವಾಗಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು
ಮೈಸೂರು, ಜನವರಿ 31: ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇನಗೊಳಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘ, ರೈತ ಮುಖಂಡರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಮನವಿ ಮೇರೆಗೆ ತಾತ್ಕಾಲಿಕವಾಗಿ ಕೈ ಬಿಡಲಾಯಿತು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ 13 ದಿನಗಳಿಂದ ನಡೆಯುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಬೇಕೆಂದು ಮನವಿ ಮಾಡಿದ ಪುಟ್ಟಣ್ಣಯ್ಯ, ಕಾರ್ಖಾನೆ ವಿಚಾರವಾಗಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ, ಕಾರ್ಖಾನೆ ಪುನಶ್ಚೇತನ ಮಾಡಲು ಕನಿಷ್ಠ 25 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುತ್ತದೆ ಎಂದರು.[ರಾಮನಗರ: ರೈತರ ಬದುಕು ಬರಡಾಗಿಸಿದ ಕಾಡಾನೆಗಳು]

ಇದಕ್ಕೆ ಸರ್ಕಾರ ಒಪ್ಪದೇ ಇದ್ದಾಗ ಪ್ರತಿಭಟನೆಯನ್ನು ಮತ್ತೊಮ್ಮೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರಿಗೆ ಸ್ಥಳೀಯ ಶಾಸಕರು, ಸಂಸದರು ನೈತಿಕ ಬೆಂಬಲ ನೀಡಿ ಅವರು ಸಹ ಹೋರಾಟದಲ್ಲಿ ಭಾಗಿಯಾಗಬೇಕಾಗಿತ್ತು. ಆದರೆ ರಾಜಕೀಯ ಕಾರಣಗಳಿಂದ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳದೆ ರೈತರಿಗೆ ದ್ರೋಹ ಮಾಡಿದ್ದಾರೆ. ರೈತರ ವಿಚಾರದಲ್ಲಿ ಯಾವ ಪಕ್ಷದವರೂ ರಾಜಕೀಯ ಮಾಡದೆ ಬೆಂಬಲ ನೀಡಬೇಕಿತ್ತು ಎಂದರು.
ಮದ್ಯ ಮಾರಾಟಗಾರರು, ವೈದ್ಯರು ಸೇರಿದಂತೆ ಯಾವುದೇ ಸಂಘಟನೆಗಳು ಹೋರಾಟ ಮಾಡಿದ ಸಂದರ್ಭದಲ್ಲಿ ಸರಕಾರ ಮತ್ತು ಜನಪ್ರತಿನಿಧಿಗಳು ಅವರನ್ನು ಆಹ್ವಾನಿಸಿ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಆದರೆ ಸ್ಥಗಿತಗೊಂಡಿರುವ ಸಹಕಾರ ಕ್ಷೇತ್ರದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ 13 ದಿನಗಳಿಂದ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಜಿಲ್ಲಾ ಮಂತ್ರಿಗಳಾಗಲಿ, ಅಧಿಕಾರಿಗಳಾಗಲಿ ಬಾರದಿರುವುದು ರೈತರ ಬಗ್ಗೆ ಇರುವ ನಿರ್ಲಕ್ಷ್ಯ ತೋರಿಸುತ್ತದೆ ಎಂದರು.[ಜಾನುವಾರುಗಳಿಗಾಗಿ ಒಂದೂವರೆ ರುಗೆ ಒಂದು ಕೆಜಿ ಮೇವು: ಸಿದ್ದು]
ಚುಂಚನಕಟ್ಟೆಯ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡಿಸಿ ಖಾಸಗಿಯವರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅಧಿಕಾರಿಗಳು, ಕಾರ್ಖಾನೆ ಆರಂಭಿಸಲು ಸಾಧ್ಯವಿಲ್ಲ ಎಂಬ ತಪ್ಪು ವರದಿಯನ್ನು ಸರಕಾರಕ್ಕೆ ನೀಡಿರುವುದರಿಂದ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿ, ಕಾರ್ಖಾನೆ ಪುನಶ್ಚೇತನಗೊಳಿಸಲು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications