ಮಿಶ್ರಬೆಳೆಯಲ್ಲಿ ಯಶಸ್ಸು ಸಾಧಿಸಿ ತೋರಿಸಿದ ಲಕ್ಷ್ಮೀದೇವಮ್ಮ

ಮಂಡ್ಯ, ಫೆಬ್ರವರಿ 14: ಹೆಚ್ಚಿನ ರೈತರು ತಮ್ಮ ಜಮೀನಿನಲ್ಲಿ ಹಿರಿಯರು ಮಾಡಿಕೊಂಡು ಬಂದ ಕೃಷಿಯನ್ನೇ ಮುಂದುವರೆಸುವ ಮೂಲಕ ಒಂದೇ ಬೆಳೆಗೆ ಜೋತುಬಿದ್ದು ನಷ್ಟ ಮಾಡಿಕೊಳ್ಳುತ್ತಿದ್ದಾರೆ.

ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದ ರೈತ ಮಹಿಳೆ ಲಕ್ಷ್ಮೀದೇವಮ್ಮ ಮಿಶ್ರ ಬೆಳೆ ಬೆಳೆದು ಗಮನ ಸೆಳೆದಿದ್ದಾರೆ. ಇವರ ಕೃಷಿ ಕ್ರಮ ನೋಡಿದ ರೈತರು ಬೆರಗಾಗುತ್ತಿದ್ದಾರೆ. ಅವರ ಜಮೀನು ಹಲವು ಬೆಳೆಗಳ ಕಣಜವಾಗಿ ಮಾರ್ಪಾಡುಗೊಂಡಿದೆ.

ಲಕ್ಷ್ಮೀದೇವಮ್ಮ ಅವರ ಜಮೀನಿಗೆ ಕಾಲಿಟ್ಟರೆ ಹತ್ತು ಎಕರೆ ವಿಸ್ತಾರದಲ್ಲಿ ಬೆಳೆದಿರುವ ಬೆಳೆಗಳು ಅವರ ಯಶೋಗಾಥೆಯನ್ನು ಸಾರುತ್ತಿವೆ. ಅಡಿಕೆ, ತೆಂಗು, ಬಾಳೆ, ಹಿಪ್ಪುನೇರಳೆ, ಪಪ್ಪಾಯ, ಸೀಬೆ, ಚಕ್ಕೆ, ಲವಂಗ, ಜಾಯಿಕಾಯಿ, ಪತ್ರೆ, ಏಲಕ್ಕಿ ಹಾಗೂ ಮೆಕ್ಕೆಜೋಳ ಹಣ್ಣು-ತರಕಾರಿಗಳನ್ನು ಬೆಳೆಯುವುದರೊಂದಿಗೆ ಹೈನುಗಾರಿಕೆಯನ್ನು ಮಾಡುತ್ತಿದ್ದಾರೆ.

ಕೃಷಿ ಸಚಿವ ಬಿ. ಸಿ. ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣಗೌಡ ಅವರು ಸಹ ಲಕ್ಷ್ಮೀದೇವಮ್ಮ ಜಮೀನಿಗೆ ತೆರಳಿ ಕೃಷಿ ವಿಧಾನವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೃಷಿಯೊಂದಿಗೆ ಹೈನುಗಾರಿಕೆಗೂ ಒತ್ತು

ಕೃಷಿಯೊಂದಿಗೆ ಹೈನುಗಾರಿಕೆಗೂ ಒತ್ತು

ಲಕ್ಷ್ಮೀದೇವಮ್ಮ ಅವರು ಕೃಷಿಯಲ್ಲಿ ಸುಭಾಷ್ ಪಾಳೇಗಾರ್ ಅವರ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಕೃಷಿ ಜತೆಗೆ ಹೈನುಗಾರಿಕೆಗೆ ಒತ್ತು ನೀಡಿರುವ ಅವರು ಉತ್ತಮ ತಳಿಯ ಸೀಮೆ ಹಸು ಹಾಗೂ ನಾಡ ಹಸುಗಳನ್ನು ಸಾಕಿದ್ದು, ದಿನಕ್ಕೆ ನೂರಾರು ಲೀಟರ್ ಹಾಲನ್ನು ಪಡೆಯುತ್ತಿದ್ದಾರೆ. ಹಾಲನ್ನು ಮಾರಾಟ ಮಾಡಿದರೆ ಹಸುವಿನ ಸೆಗಣಿ ಮತ್ತು ಗಂಜಲವನ್ನು ಜಮೀನಿಗೆ ಗೊಬ್ಬರವಾಗಿ ಬಳಸಿಕೊಳ್ಳುತ್ತಿದ್ದಾರೆ. ಮನೆ ಬಳಕೆಗೆ ಬೇಕಾದ ಗ್ಯಾಸ್ ಕೂಡ ಸೆಗಣಿಯಿಂದಲೇ ಉತ್ಪತ್ತಿಯಾಗುತ್ತದೆ.

ಗಂಜಲ, ಸೆಗಣಿಯೇ ಬೆಳೆಗೆ ಜೀವಾಮೃತ

ಗಂಜಲ, ಸೆಗಣಿಯೇ ಬೆಳೆಗೆ ಜೀವಾಮೃತ

ಹಸುವಿನೊಂದಿಗೆ ಕೋಳಿ ಕುರಿಯನ್ನು ಕೂಡ ಸಾಕಣೆ ಮಾಡುತ್ತಿದ್ದಾರೆ. ಕೃಷಿ ಕಾರ್ಯಕ್ಕೆ ಬೇಕಾದ ಸಲಹೆಗಳನ್ನು ತಪ್ಪದೆ ಕೃಷಿ ತಜ್ಞರಿಂದ ಪಡೆದುಕೊಳ್ಳುತ್ತಿದ್ದಾರೆ. ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ಸಾವಯವ ಕೃಷಿಗೆ ಒತ್ತು ನೀಡುತ್ತಿದ್ದಾರೆ. ಹಸುವಿಗೆ ಮೇವಾಗಿ ಆಜೋಲವನ್ನು ಬೆಳೆಯುತ್ತಿದ್ದಾರೆ. ಕ್ರಿಮಿನಾಶಕ ಸಿಂಪಡಣೆ ಮಾಡುವ ಬದಲು ದನಗಳ ಗಂಜಲ ಮತ್ತು ಸೆಗಣಿಯನ್ನು ಬಳಸಿಕೊಂಡು ಜೀವಾಮೃತ ತಯಾರಿಸಿ ಸಿಂಪಡಣೆ ಮಾಡುವ ಮೂಲಕ ಬೆಳೆಗಳನ್ನು ಕೀಟ ಹಾಗೂ ರೋಗಗಳಿಂದ ರಕ್ಷಿಸಿಕೊಳ್ಳುತ್ತಿದ್ದಾರೆ.

ಕೃಷಿಗೆ ಆಧುನಿಕ ಯಂತ್ರಗಳ ಬಳಕೆ

ಕೃಷಿಗೆ ಆಧುನಿಕ ಯಂತ್ರಗಳ ಬಳಕೆ

ಇನ್ನು ಸಂಪ್ರದಾಯ ಕೃಷಿ ಜತೆಗೆ ಆಧುನಿಕ ಕೃಷಿ ಕಡೆಗೂ ಒಲವು ತೋರಿರುವ ಅವರು ಆಧುನಿಕ ಯಂತ್ರಗಳನ್ನು ಬಳಸಿ ಕೃಷಿ ಮಾಡುತ್ತಿದ್ದಾರೆ. ಇದರಿಂದ ಕೂಲಿ ಖರ್ಚಿನ ವೆಚ್ಛವನ್ನು ತಗ್ಗಿಸಿದ್ದಾರೆ. ಬೇಸಾಯವೆಂದರೆ ಗ್ರಾಮೀಣ ಪ್ರದೇಶದಲ್ಲಿ ನೀ ಸಾಯ, ನಾ ಸಾಯ ಎಂಬ ಮಾತಿದೆ. ಆದರೆ ಶ್ರಮಪಟ್ಟು ದುಡಿಯುವುದರೊಂದಿಗೆ ಜತೆಗೆ ಮಿಶ್ರ ಕೃಷಿ ಮಾಡುವ ಮೂಲಕ ಆ ಮಾತನ್ನು ಸುಳ್ಳಾಗಿಸಿದ್ದಾರೆ. ಅಷ್ಟೇ ಅಲ್ಲದೆ ಕೃಷಿ ಸಹವಾಸವೇ ಬೇಡವೆಂದು ಕೈಚೆಲ್ಲಿ ಕುಳಿತವರಿಗೆ ಭೂಮಿ ತಾಯಿಯನ್ನು ನಂಬಿದರೆ ಯಾವತ್ತೂ ಆಕೆ ಕೈಬಿಡುವುದಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ನೂರಾರು ಕೃಷಿಕರಿಗೆ ಮಾರ್ಗದರ್ಶನ

ನೂರಾರು ಕೃಷಿಕರಿಗೆ ಮಾರ್ಗದರ್ಶನ

ರೈತರು ಸಾಮಾನ್ಯವಾಗಿ ಭತ್ತ ಮತ್ತು ಕಬ್ಬನ್ನು ಹೊರತುಪಡಿಸಿದರೆ ಬೇರೆ ಯಾವುದೇ ಬೆಳೆ ಬೆಳೆಯಲು ಹಿಂದೇಟು ಹಾಕುತ್ತಾರೆ. ಹೀಗಿರುವಾಗ ಧೈರ್ಯ ಮಾಡಿ ಮಿಶ್ರವಾಗಿ ವಾಣಿಜ್ಯ ಬೆಳೆಯನ್ನು ಬೆಳೆಯುವ ಮೂಲಕ ಇತರೆ ರೈತರಿಗೆ ಯಶಸ್ಸಿನ ಮಾರ್ಗವನ್ನು ತೋರಿಸಿಕೊಟ್ಟಿದ್ದಾರೆ. ಕೃಷಿಯಲ್ಲಿ ಸಾಧನೆಯನ್ನು ಮಾಡಿರುವ ಅವರನ್ನು ಹಲವು ರೈತರು ಹುಡುಕಿಕೊಂಡು ಬರುತ್ತಿದ್ದು ಮಾರ್ಗದರ್ಶನ ಪಡೆದುಕೊಂಡು ತೆರಳುತ್ತಿದ್ದಾರೆ. ಇವರ ಸಾಧನೆಯನ್ನು ತಿಳಿದ ಕೃಷಿಸಚಿವ ಬಿ. ಸಿ. ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣಗೌಡ ಅವರು ಜಮೀನಿಗೆ ತೆರಳಿ ಕೃಷಿ ವಿಧಾನವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ವಿಶೇಷವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+