krishi mela 2024: ನಾಳೆಯಿಂದ ಧಾರವಾಡ ಕೃಷಿ ಮೇಳ, ಈ ಕಾರಣಕ್ಕೆ ಮಿಸ್ ಮಾಡ್ಬೇಡಿ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಂತೆಯೇ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ನಾಳೆಯಿಂದ ಅಂದರೆ, ಸೆಪ್ಟೆಂಬರ್ 21ರಿಂದ ಪ್ರಾರಂಭವಾಗಲಿದ್ದು, ನಾಲ್ಕು ದಿನ ಈ ಕೃಷಿ ಮೇಳ ನಡೆಯಲಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 24ರ ವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ ಮೇಳ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಬಾರಿಯ ಕೃಷಿ ಮೇಳದ ವಿಶೇಷತೆಗಳೇನು, ಕೃಷಿ ಮೇಳದಲ್ಲಿ ಏನೆಲ್ಲ ಇರಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ -2024 ಈ ಬಾರಿ ರೈತರಿಗೆ ವಿಶೇಷವಾಗಿ ಹವಾಮಾನ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಾಮುಖ್ಯತೆ ಪಡೆದುಕೊಂಡಿದೆ. "ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು" ಎನ್ನುವ ಘೋಷಾವಾಕ್ಯದೊಂದಿಗೆ ಈ ಬಾರಿ ಕೃಷಿ ಮೇಳ ನಡೆಯುತ್ತಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕೃಷಿ ಮೇಳ ನಡೆಯಲಿದೆ. ಧಾರವಾಡದ ಕೃಷಿ ಮೇಳವನ್ನು ರೈತರ ಜಾತ್ರೆ ಎಂದೇ ಹೇಳಲಾಗುತ್ತದೆ. ಈ ಕೃಷಿ ಮೇಳಕ್ಕೆ ಪ್ರತಿ ವರ್ಷವೂ ಲಕ್ಷಾಂತರ ಜನ ಬಂದು ಸೇರುತ್ತಾರೆ. ಕೃಷಿ ಮೇಳದಲ್ಲಿ ಕೃಷಿ ಪದಾರ್ಥಗಳ ಮಾರಾಟ ಹಾಗೂ ಪ್ರದರ್ನ ನಡೆಯುತ್ತದೆ. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡುವ ಆವಿಷ್ಕಾರವನ್ನು ಸಹ ಇಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲದೇ ವಿವಿಧ ಬೆಳೆಗಳು, ಅದನ್ನು ಬೆಳೆಯುವ ವಿಧಾನ, ಜಾನುವಾರುಗಳು, ಹೂವು ಸೇರಿದಂತೆ ಕೃಷಿ ಹಾಗೂ ಉಪ ಕಸುಬಿನ ಅನಾವರಣವೇ ಕೃಷಿ ಮೇಳದಲ್ಲಿ ಆಗುತ್ತದೆ. 2023ನೇ ಸಾಲಿನಲ್ಲಿ ನಡೆದ ಧಾರವಾಡ ಕೃಷಿ ಮೇಳಕ್ಕೆ ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದರು. ಈ ಬಾರಿಯೂ ಲಕ್ಷಾಂತರ ಜನ ಕೃಷಿ ಮೇಳಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.

ಧಾರವಾಡ ಕೃಷಿ ಮೇಳ -2024 ಈ ಬಾರಿಯ ವಿಶೇಷವೇನು ?
ಈ ಬಾರಿ ಹಲವು ಕಾರಣಗಳಿಂದ ಧಾರವಾಡ ಕೃಷಿ ಮೇಳ ಪ್ರಸಿದ್ಧಿ ಗಳಿಸಿದೆ. ಅದರಲ್ಲಿ ಹವಾಮಾನ ವೈಪರೀತ್ಯ ನಿರ್ವಹಣೆ ಮಾಡುವುದು ಹಾಗೂ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದು ಪ್ರಮುಖವಾಗಿದೆ. ಈ ಬಾರಿಯ ಪ್ರಮುಖ ಆಕರ್ಷಣೆಗಳು ಈ ರೀತಿ ಇವೆ.
* ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿ.
* ಕೃಷಿಗೆ ಪೂರಕ ಪರಿಕರಗಳ ಮಾರಾಟ ಹಾಗೂ ಪ್ರದರ್ಶನ ನಡೆಯಲಿದೆ.
* ನೀರಾವರಿ ಸಾಧನಗಳ ಪ್ರದರ್ಶನ ಹಾಗೂ ಮಾರಾಟ
* ಮೌಲ್ಯಯುತವಾದ ಕೃಷಿ ಉತ್ಪನ್ನಗಳು ಇಲ್ಲಿ ಲಭ್ಯವಿರಲಿವೆ.
* ರೈತ ವಿಜ್ಞಾನಿಗಳೊಂದಿಗೆ ಸಂವಾದ ನಡೆಯಲಿದೆ.
* ಪರಿಕರಗಳ (ಕೃಷಿಯಲ್ಲಿ ಬಳಸುವ ಮೆಷನ್ಗಳು) ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಉತ್ಪನ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹೇಗೆ ಬಳಸುವುದು ಎನ್ನುವುದನ್ನು ತಿಳಿಸಲಾಗುತ್ತದೆ. ಅಲ್ಲದೇ ಎರಡನೇ ಹಂತದ ಕೃಷಿಯ ಬಗ್ಗೆಯೂ ಈ ಮೇಳದಲ್ಲಿ ರೈತರಿಗೆ ಮಾಹಿತಿ ನೀಡಲಾಗುತ್ತದೆ.
* ಬರ ನಿರ್ವಹಣೆ ಮಾಡುವುದು ಹೇಗೆ, ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡುವುದು ಹೇಗೆ ಎಂದು ತಿಳಿಸಲಾಗುತ್ತದೆ.
* ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳ ಬಗ್ಗೆ ತಿಳಿಸಲಾಗುತ್ತದೆ.
* ಎಣ್ಣೆಕಾಳು ಹಾಗೂ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಿಸಲು ಅಗತ್ಯ ಕೃಷಿ ತಾಂತ್ರಿಕಗಳ ಪರಿಚಯ ಇರಲಿದೆ.
* ಆಧುನಿಕ ಕೃಷಿ ಪದ್ಧತಿ ಹಾಗೂ ನವೋದ್ಯಮಿ, ಯುವಕರ (ಯುವ ಪೀಳಿಗೆ) ಪಾತ್ರದ ಬಗ್ಗೆಯೂ ಚರ್ಚೆ, ಸಂವಾದಗಳು ನಡೆಯಲಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications