ಮಂಡ್ಯದಲ್ಲಿ ಕಣ್ಣೀರು ಹಾಕಿದ ಎಚ್.ಡಿ.ಕುಮಾರಸ್ವಾಮಿ
ಮಂಡ್ಯ, ಆಗಸ್ಟ್ 3 : ಜೆಡಿಎಸ್ ರಾಜ್ಯಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ ರೈತ ಕುಟುಂಬದ ಸ್ಥಿತಿ ಕಂಡು ಕಣ್ಣೀರು ಹಾಕಿದರು.
ಸೋಮವಾರ ಕುಮಾರಸ್ವಾಮಿ ಅವರು ಮಳವಳ್ಳಿ ತಾಲೂಕಿನ ಕರಳಕಟ್ಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಉಮೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರೈತನ ಕುಟುಂಬದ ಸ್ಥಿತಿ ನೋಡಿ ದುಖಃವಾಗಿದೆ ಎಂದು ಕಣ್ಣೀರು ಹಾಕಿದರು. [ಕಬ್ಬು ಬೆಳೆಗಾರರ ಆತ್ಮಹತ್ಯೆ ಸರಣಿಗೆ ಕೊನೆಯಿಲ್ಲ]

ರೈತನ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, 'ವಿರೋಧ ಪಕ್ಷಗಳು ಹೇಳುವಂತೆ ನಾನು ಮೊಸಳೆ ಕಣ್ಣೀರು ಸುರಿಸುತ್ತಿಲ್ಲ, ರಾಜಕೀಯ ಮಾಡಲು ನಾನು ಕಣ್ಣೀರು ಹಾಕುತ್ತಿಲ್ಲ. ರೈತರ ಕಷ್ಟ ಕಂಡು ದುಖಃವಾಗುತ್ತಿದೆ' ಎಂದರು. [ಮಂಡ್ಯಕ್ಕೆ ಭೇಟಿ ನೀಡಿದ ಮಾಜಿ ಸಂಸದೆ ರಮ್ಯಾ ಹೇಳಿದ್ದೇನು?]
ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ : 'ರೈತರ ಸಾಲ ಮತ್ತು ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಿದರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ' ಎಂದ ಸವಾಲು ಹಾಕಿದರು.
ಕಳೆದ ವಾರ ನಟಿ, ಮಾಜಿ ಸಂಸದೆ ರಮ್ಯಾ ಅವರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಮದ್ದೂರು ತಾಲೂಕು ಸಾದೊಳಲು ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶಿವಣ್ಣ, ಪಾಂಡವಪುರದಲ್ಲಿ ಆತ್ಮಹತ್ಯೆಗೆ ಶರಣಾದ ನಿಂಗೇಗೌಡರ ಮನೆಗಳಿಗೆ ಭೇಟಿ ನೀಡಿ 50 ಸಾವಿರ ರೂ. ಪರಿಹಾರ ನೀಡಿದ್ದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications