ಕಬ್ಬಿನ ದರ ಪುನರ್ ಪರಿಶೀಲಿಸಿ : ಕುರುಬೂರ್ ಶಾಂತ ಕುಮಾರ್
ಹುಬ್ಬಳ್ಳಿ, ಜೂನ್ 29 : 'ಕಬ್ಬಿನ ಬೆಳೆಗೆ ನೀಡುತ್ತಿರುವ ನ್ಯಾಯಸಮ್ಮತ ಮತ್ತು ಮೌಲ್ಯಾಧಾರಿತ ಬೆಲೆಯನ್ನು (ಎಫ್ಆರ್ಪಿ) ಪ್ರತಿ ಟನ್ಗೆ 2,300 ರೂ. ನಿಂದ 3,800ಕ್ಕೆ ಏರಿಸಬೇಕು. ಇಲ್ಲವಾದಲ್ಲಿ ಕಬ್ಬು ಬೆಳೆಯದೇ ರಜಾ ವರ್ಷ ಮಾಡಲಾಗುವುದು' ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಒನ್ ಇಂಡಿಯಾ ಜೊತೆ ಮಾತನಾಡಿದ ಕುರುಬೂರ್ ಶಾಂತಕುಮಾರ್ ಅವರು,'ಸಕ್ಕರೆ ಬೆಲೆ ಏರಿಕೆಯಾಗಿದೆ, ಕಬ್ಬಿನ ಉತ್ಪಾದನಾ ವೆಚ್ಚವೂ ಹೆಚ್ಚಿದೆ ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಿಂದಿನ ವರ್ಷ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಎಫ್ಆರ್ಪಿ ದರವನ್ನು ಹೆಚ್ಚಿಸಬೇಕು' ಎಂದು ಆಗ್ರಹಿಸಿದರು. [ಕಬ್ಬು ಬೆಳೆ ಇಳಿಕೆ, ಸಕ್ಕರೆ ಬೆಲೆ ಭಾರೀ ಏರಿಕೆ ಸಂಭವ]

'ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 5 ರಂದು ಮೈಸೂರಿನಲ್ಲಿ ರಾಜ್ಯ ರೈತರ ಸಮಾವೇಶದಲ್ಲಿ ಎರಡು ವರ್ಷಗಳವರೆಗೆ ಕಬ್ಬು ಬೆಳೆಯದಿರುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆ ಎರಡು ವರ್ಷ ಬೇರೆ ಬೆಳೆಗಳನ್ನು ಬೆಳೆಯುತ್ತೇವೆ' ಎಂದು ಹೇಳಿದರು. [ಆನ್ ಲೈನ್ ಮಾರುಕಟ್ಟೆಯಲ್ಲಿ ಮಂಡ್ಯದ ಸಿಹಿ ಬೆಲ್ಲ]
ಬಿಜೆಪಿ ಮುಖಂಡರಿಗೆ ತರಾಟೆ : ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು, 'ರಾಜ್ಯದ ಬಿಜೆಪಿ ಮುಖಂಡರು ತೆಂಗು ಹಾಗೂ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ. ಬಿಜೆಪಿಯವರಿಗೆ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು ಕಾಣುತ್ತಿಲ್ಲವೇಕೆ?' ಎಂದು ಪ್ರಶ್ನಿಸಿದರು. [ಕಾರ್ಖಾನೆ'ಸಕ್ಕರೆ' ಕಾಯಿಲೆಗೆ ಸರ್ಕಾರದ ಮದ್ದು]
'ಕೇಂದ್ರ ಸರ್ಕಾರ 41 ಬೆಳೆಗಳನ್ನು ಪ್ರಧಾನಿ ಫಸಲ್ ಭೀಮಾ ಯೋಜನೆಗೆ ಒಳಪಡಿಸಿದೆ. ಆದರೆ ಕಬ್ಬು ಮತ್ತು ರೇಷ್ಮೆ ಬೆಳೆಯನ್ನು ಕೈಬಿಟ್ಟಿದ್ದೇಕೆ? ಎಂದು ಪ್ರಶ್ನಿಸಿದ ಅವರು, ಈ ಎರಡೂ ಬೆಳೆಗಳನ್ನು ಭೀಮಾ ಯೋಜನೆಗೆ ಒಳಪಡಿಸಬೇಕು' ಎಂದು ಒತ್ತಾಯಿಸಿದರು.
'20 ಲಕ್ಷ ರೈತರಿಗೆ ಅನುಕೂಲವಾಗುವ ಬೆಳೆಸಾಲ ನೀತಿಯನ್ನು ಬದಲಾಯಿಸಬೇಕು. ಬೆಳೆ ಸಾಲದಲ್ಲಿ ರಿಯಾಯಿತಿ ಬಡ್ಡಿ ಸಾಲ ಯೋಜನೆಯಲ್ಲಿ ಕಬ್ಬು ಮತ್ತು ಬಾಳೆಯನ್ನು ಸೇರಿಸಿಕೊಳ್ಳಬೇಕು ಮತ್ತು ಸಾಲ ಮರುಪಾವತಿ ಅವಧಿಯನ್ನು 18 ತಿಂಗಳಿಗೆ ವಿಸ್ತರಿಸಬೇಕು' ಎಂದು ಆಗ್ರಹಿಸಿದರು.
'ಕಬ್ಬಿನ ಉತ್ಪನ್ನಗಳ ಲಾಭವನ್ನು ಅಂದಾಜಿಸಿ ಎಸ್ಎಪಿ ದರದಂತೆ ರೈತರಿಗೆ ನೀಡಬೇಕಾದ ಅಂತಿಮ ಕಂತಿನ ಹಣವನ್ನು ಕೂಡಲೇ ನೀಡಲು ಸಕ್ಕರೆ ಸಚಿವರು ಕ್ರಮಕೈಗೊಳ್ಳಬೇಕು. ಜೊತೆಗೆ ಎಫ್ಆರ್ಪಿ ದರವನ್ನು 2,300 ರಿಂದ 3,800ಕ್ಕೆ ಏರಿಸಬೇಕೆಂದರು' ಎಂದು ಒತ್ತಾಯಿಸಿದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications