ಫಲ ಪುಷ್ಪ ಪ್ರದರ್ಶನಕ್ಕೆ ಲಾಲ್ ಬಾಗ್ ಸಿಂಗಾರ
ಬೆಂಗಳೂರು, ಜ.17: ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ಆಶ್ರಯದಲ್ಲಿ ನಗರದ ಲಾಲ್ ಬಾಗ್ ನಲ್ಲಿ ಜ.17 ರಿಂದ 26ರವರೆಗೆ 'ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ' ನಡೆಯಲಿದೆ. 350ಕ್ಕೂ ಅಧಿಕ ಗಿಡಗಳು ಈ ಬಾರಿಯ ಫಲ ಪುಷ್ಪ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿವೆ.
ಚಳಿಗಾಲದಲ್ಲಿ ಹೂ ಬಿಡುವ ಪೆಟೊನಿಯಾ, ಪಾಯಿನ್ ಸೀನಿಯಾ, ಇಂಪೇಷನ್ಸ್ ಇತ್ಯಾದಿ ಗಿಡಗಳು ವೀಕ್ಷಕರ ಹೃನ್ಮನಗಳನ್ನು ತಣಿಸಲಿವೆ. ಇದರೊಂದಿಗೆ ಊಟಿ, ನಂದಿ ಗಿರಿಧಾಮಗಳ ಅಪರೂಪದ ಹೂಗಳನ್ನೂ ಪ್ರದರ್ಶಿಸಲಾಗುತ್ತದೆ. ಉಗ್ರರ ಭೀತಿಯ ಹಿನ್ನೆಯಲ್ಲಿ ಫಲ ಪುಷ್ಪ ಪ್ರದರ್ಶನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ನಿರ್ದೇಶಕ ಡಾ.ಜಿ.ಕೆ.ವಸಂತಕುಮಾರ್ ತಿಳಿಸಿದ್ದಾರೆ.
ಜ.17ರ ಮಧ್ಯಾಹ್ನ 3 ಗಂಟೆಗೆ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಇಕೆಬಾನ, ತರಕಾರಿ ಕೆತ್ತನೆ, ಪುಷ್ಪ ಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್ ಆರ್ಟ್ಸ್, ಒಣ ಹೂವಿನ ಜೋಡಣೆ ಸ್ಪರ್ಧಾ ಪ್ರದರ್ಶನಕ್ಕೆ ಜ.18ರಂದು ಮಧ್ಯಾಹ್ನ 3 ಗಂಟೆಗೆ ಡಾ.ಎಂ.ಎಚ್.ಮರಿಗೌಡ ಸ್ಮಾರಕ ಭವನದಲ್ಲಿ ಚಾಲನೆ ನೀಡಲಾಗುತ್ತದೆ. ಜ. 24ರಂದು ಶಾಲಾ ಮಕ್ಕಳಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಫಲ ಪುಷ್ಪ ಪ್ರದರ್ಶನದ ಟಿಕೆಟ್ ಗಳು ಲಾಲ್ ಬಾಗ್ ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಲಭ್ಯವಿರುತ್ತವೆ. ಗಾಜಿನ ಮನೆಯೊಳಗಿನ ಫಲ ಪುಷ್ಪ ಪ್ರದರ್ಶನ ಸಂಜೆ 7ರವರೆಗೆ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ.
(ದಟ್ಸ್ ಕನ್ನಡ ವಾರ್ತೆ)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications