ಲಾಲ್ ಬಾಗ್ ಗೆ ರಾಕ್ ಗಾರ್ಡನ್, ಸಂಗೀತ ಕಾರಂಜಿ

ಬೆಂಗಳೂರು ನಗರವಾಸಿಗಳಿಗೆ ಉತ್ತಮ ಪರಿಸರ ನಿರ್ಮಿಸಿಕೊಡುವ ಉದ್ದೇಶದಿಂದ ಲಾಲ್ಬಾಗ್ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ, ಬಿಡಿಎ ಮತ್ತು ಬಿಬಿಎಂಪಿ ಜಂಟಿಯಾಗಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಲಾಲ್ಬಾಗ್ನ ಸಿದ್ದಾಪುರ ಭಾಗದಲ್ಲಿರುವ ಬೃಹತ್ ಬಂಡೆಯಲ್ಲಿ 30 ಕೋಟಿ ರೂ.ವೆಚ್ಚದಲ್ಲಿ ರಾಕ್ ಗಾರ್ಡನ್ ನಿರ್ಮಿಸಲಾಗುವುದು. ಈ ಯೋಜನೆ ತಮ್ಮ ರಾಜಕೀಯ ಗುರುಗಳಾದ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆಯವರ ಕನಸಿನ ಕೂಸು. ಈ ಮೂಲಕ ಅವರ ಋಣ ತೀರಿಸುವುದಾಗಿ ಹೇಳಿದರು.
ಹೆಗಡೆಯವರ ಅವಧಿಯಲ್ಲೇ ಈ ಯೋಜನೆಯ ಸಮೀಕ್ಷೆ ನಡೆಸಿ ನೀಲನಕ್ಷೆಯನ್ನೂ ಸಿದ್ಧಪಡಿಸಲಾಗಿತ್ತು. ಬೃಹತ್ ಬಂಡೆಯ ಮೇಲೆ ಲಾನ್ ಬೆಳೆಸುವಿಕೆ, ಕಲ್ಲು ಬೆಂಚುಗಳ ನಿರ್ಮಾಣ ಸೇರಿದಂತೆ ಬಂಡೆಯ ಮೇಲೆ ಉತ್ತಮ ವಾತಾವರಣ ಕಲ್ಪಿಸಲಾಗುವುದು. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು. ಲಾಲ್ಬಾಗ್ನ ಕೆರೆ ಬಳಿ ಸುಮಾರು 35 ಕೋಟಿ ರೂ.ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಿಸಲಾಗುವುದು. ಈ ಯೋಜನೆ ಸಂಬಂಧ ಪ್ರಾಥಮಿಕ ಹಂತದ ಚರ್ಚೆ ನಡೆದಿದ್ದು, ತಂತ್ರಜ್ಞರನ್ನು ಇನ್ನೂ ನೇಮಕ ಮಾಡಲಾಗಿಲ್ಲ ಎಂದು ಸಚಿವರು ಹೇಳಿದರು.
ಸುವರ್ಣ ಕರ್ನಾಟಕ ಯೋಜನೆಯ ಅನುದಾನ, ಲಾಲ್ಬಾಗ್ ನರ್ಸರಿಯಿಂದ ಗಳಿಸಿರುವ ಆದಾಯ ಹಾಗೂ ಲಾಲ್ಬಾಗ್ನ ಸ್ವಲ್ಪ ಜಾಗವನ್ನು ಮೆಟ್ರೋ ರೈಲು ಕಾಮಗಾರಿಗೆ ಬಳಸಿಕೊಂಡಿರುವುದರಿಂದ ದೊರೆತಿರುವ ಪರಿಹಾರದ ಹಣದಲ್ಲಿ ಈ ಎರಡೂ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ಲಾಲ್ಬಾಗ್ ಕೆರೆಗೆ ಚರಂಡಿ ನೀರು ಸೇರ್ಪಡೆಯಾಗುತ್ತಿದೆ. ಇದನ್ನು ತಡೆಗಟ್ಟಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ, ನೀರಿನ ನಿರ್ವಹಣೆ ವಿಚಾರ ಪಾಲಿಕೆಗೆ ಸೇರಿದ್ದು ಎಂದು ತಿಳಿಸಿದರು.
ತರಕಾರಿ ಬೆಲೆ ಹೆಚ್ಚಳ ನಿಯಂತ್ರಣ ಕಷ್ಟ. ಬೆಂಗಳೂರಿಗೆ ಪ್ರತಿ ದಿನ ಒಂದು ಸಾವಿರ ಟನ್ ತರಕಾರಿ ಬೇಕು. ಆದರೆ, ನಮ್ಮಲ್ಲಿರುವ ಹಾಪ್ಕಾಮ್ಸ್ ಮಳಿಗೆಗಳಿಂದ 70ರಿಂದ 140 ಟನ್ ಪೂರೈಸಲು ಮಾತ್ರ ಸಾಧ್ಯ. ನೂರು ಹೊಸ ಮಳಿಗೆ ಆರಂಭಕ್ಕೆ ಜಾಗ ಗುರುತಿಸಿದ್ದು, ಸ್ಥಳ ನೀಡುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications