ಲಾಲ್ ಬಾಗ್ ಗೆ ರಾಕ್ ಗಾರ್ಡನ್, ಸಂಗೀತ ಕಾರಂಜಿ

ಬೆಂಗಳೂರು ನಗರವಾಸಿಗಳಿಗೆ ಉತ್ತಮ ಪರಿಸರ ನಿರ್ಮಿಸಿಕೊಡುವ ಉದ್ದೇಶದಿಂದ ಲಾಲ್ಬಾಗ್ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ, ಬಿಡಿಎ ಮತ್ತು ಬಿಬಿಎಂಪಿ ಜಂಟಿಯಾಗಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಲಾಲ್ಬಾಗ್ನ ಸಿದ್ದಾಪುರ ಭಾಗದಲ್ಲಿರುವ ಬೃಹತ್ ಬಂಡೆಯಲ್ಲಿ 30 ಕೋಟಿ ರೂ.ವೆಚ್ಚದಲ್ಲಿ ರಾಕ್ ಗಾರ್ಡನ್ ನಿರ್ಮಿಸಲಾಗುವುದು. ಈ ಯೋಜನೆ ತಮ್ಮ ರಾಜಕೀಯ ಗುರುಗಳಾದ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆಯವರ ಕನಸಿನ ಕೂಸು. ಈ ಮೂಲಕ ಅವರ ಋಣ ತೀರಿಸುವುದಾಗಿ ಹೇಳಿದರು.
ಹೆಗಡೆಯವರ ಅವಧಿಯಲ್ಲೇ ಈ ಯೋಜನೆಯ ಸಮೀಕ್ಷೆ ನಡೆಸಿ ನೀಲನಕ್ಷೆಯನ್ನೂ ಸಿದ್ಧಪಡಿಸಲಾಗಿತ್ತು. ಬೃಹತ್ ಬಂಡೆಯ ಮೇಲೆ ಲಾನ್ ಬೆಳೆಸುವಿಕೆ, ಕಲ್ಲು ಬೆಂಚುಗಳ ನಿರ್ಮಾಣ ಸೇರಿದಂತೆ ಬಂಡೆಯ ಮೇಲೆ ಉತ್ತಮ ವಾತಾವರಣ ಕಲ್ಪಿಸಲಾಗುವುದು. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು. ಲಾಲ್ಬಾಗ್ನ ಕೆರೆ ಬಳಿ ಸುಮಾರು 35 ಕೋಟಿ ರೂ.ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಿಸಲಾಗುವುದು. ಈ ಯೋಜನೆ ಸಂಬಂಧ ಪ್ರಾಥಮಿಕ ಹಂತದ ಚರ್ಚೆ ನಡೆದಿದ್ದು, ತಂತ್ರಜ್ಞರನ್ನು ಇನ್ನೂ ನೇಮಕ ಮಾಡಲಾಗಿಲ್ಲ ಎಂದು ಸಚಿವರು ಹೇಳಿದರು.
ಸುವರ್ಣ ಕರ್ನಾಟಕ ಯೋಜನೆಯ ಅನುದಾನ, ಲಾಲ್ಬಾಗ್ ನರ್ಸರಿಯಿಂದ ಗಳಿಸಿರುವ ಆದಾಯ ಹಾಗೂ ಲಾಲ್ಬಾಗ್ನ ಸ್ವಲ್ಪ ಜಾಗವನ್ನು ಮೆಟ್ರೋ ರೈಲು ಕಾಮಗಾರಿಗೆ ಬಳಸಿಕೊಂಡಿರುವುದರಿಂದ ದೊರೆತಿರುವ ಪರಿಹಾರದ ಹಣದಲ್ಲಿ ಈ ಎರಡೂ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ಲಾಲ್ಬಾಗ್ ಕೆರೆಗೆ ಚರಂಡಿ ನೀರು ಸೇರ್ಪಡೆಯಾಗುತ್ತಿದೆ. ಇದನ್ನು ತಡೆಗಟ್ಟಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ, ನೀರಿನ ನಿರ್ವಹಣೆ ವಿಚಾರ ಪಾಲಿಕೆಗೆ ಸೇರಿದ್ದು ಎಂದು ತಿಳಿಸಿದರು.
ತರಕಾರಿ ಬೆಲೆ ಹೆಚ್ಚಳ ನಿಯಂತ್ರಣ ಕಷ್ಟ. ಬೆಂಗಳೂರಿಗೆ ಪ್ರತಿ ದಿನ ಒಂದು ಸಾವಿರ ಟನ್ ತರಕಾರಿ ಬೇಕು. ಆದರೆ, ನಮ್ಮಲ್ಲಿರುವ ಹಾಪ್ಕಾಮ್ಸ್ ಮಳಿಗೆಗಳಿಂದ 70ರಿಂದ 140 ಟನ್ ಪೂರೈಸಲು ಮಾತ್ರ ಸಾಧ್ಯ. ನೂರು ಹೊಸ ಮಳಿಗೆ ಆರಂಭಕ್ಕೆ ಜಾಗ ಗುರುತಿಸಿದ್ದು, ಸ್ಥಳ ನೀಡುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications