ದಿಢೀರ್ ಏರಿಕೆಯಾಗಿದ್ದ ಜಮೀನು ಸರ್ವೆ ಶುಲ್ಕ ಶೇ.50ರಷ್ಟು ಇಳಿಕೆ
ಬೆಂಗಳೂರು, ಫೆ.11: ಕಳೆದು ತಿಂಗಳು ದಿಢೀರ್ ಮಾಡಲಾಗಿದ್ದ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರತಿ ಸರ್ವೆ ನಂಬರ್ಗೆ 35 ರೂ. ಇದ್ದ ಸರ್ವೆ ಶುಲ್ಕವನನ್ನು ರಾಜ್ಯ ಸರ್ಕಾರ 2021ರ ನವೆಂಬರ್ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತು ಬೆಳೆ ನಷ್ಟಗಳಿಂದ ಕಂಗಾಲಾಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ ಸದಸ್ಯ ದಿನೇಶ್ ಗೂಳಿಗೌಡ ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಂದಾಯ ಇಲಾಖೆಯ ಗಮನ ಸೆಳೆದು ಸರ್ವೆ ಶುಲ್ಕದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದ್ದರು. ಇದರ ಬೆನ್ನಲ್ಲೇ ಸರ್ವೆ ಶುಲ್ಕ ಪರಿಷ್ಕರಿಸಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಪರಿಷ್ಕೃತ ಆದೇಶದ ಪ್ರಕಾರ ಹದ್ದು ಬಸ್ತು ಅರ್ಜಿ ಶುಲ್ಕ ಗ್ರಾಮೀಣ ಭಾಗದಲ್ಲಿ ಎರಡು ಎಕರೆವರೆಗೂ 500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 300 ರೂಪಾಯಿಯಂತೆ ದರ ನಿಗದಿ ಮಾಡಿ ಆದೇಶಿಸಿದೆ. ಇನ್ನು ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2000 ರೂ. ಇದ್ದು, ನಂತರ ಪ್ರತಿ ಎಕರೆಗೆ 400 ರೂ. ನಿಗದಿ ಮಾಡಿ ಕಂದಾಯ ಇಲಾಖೆ (ಭೂಮಾಪನ) ಫೆ.9ರಂದು ಆದೇಶ ಹೊರಡಿಸಿದೆ.

11ಇ ನಕ್ಷೆ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿಗೆ ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆವರೆಗೂ 1500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 400 ರೂಪಾಯಿಯಂತೆ ದರ ನಿಗದಿಯಾಗಿದೆ. ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2500 ರೂ. ಇದ್ದು, ನಂತರ ಪ್ರತಿ ಎಕರೆಗೆ 1000 ರೂ.ಗೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.
ಏಕಾಏಕಿ ದರ ಏರಿಸಿದ್ದ ಸರ್ಕಾರ:
ಇದುವರೆಗೆ 35 ರೂಪಾಯಿಯಲ್ಲಿ ಆಗುತ್ತಿದ್ದ ಸರ್ವೇ ಕೆಲಸಕ್ಕೆ ಕಳೆದ ನವೆಂಬರ್ನಲ್ಲಿ ಸರ್ಕಾರ ಏಕಾಏಕಿ ಕಳೆದ ಜನವರಿಯಲ್ಲಿ ದರ ಏರಿಕೆ ಮಾಡಿತ್ತು. ಹದ್ದು ಬಸ್ತು ಅರ್ಜಿ ಶುಲ್ಕವನ್ನು ಗ್ರಾಮೀಣ ಪ್ರದೇಶದಲ್ಲಿ ಮೊದಲ ಎರಡು ಎಕರೆಗೆ 1500 ರೂ. ನಂತರ ಪ್ರತಿ ಎಕರೆಗೆ 300 ರೂ.ಗೆ ಹೆಚ್ಚಿಸಿತ್ತು. ನಗರ ಪ್ರದೇಶದಲ್ಲಿ ಮೊದಲ ಎರಡು ಎಕರೆಗೆ 2000 ರೂ. ಮತ್ತು ನಂತರ ಪ್ರತಿ ಎಕರೆಗೆ 400 ರೂ. ನಿಗದಿ ಮಾಡಿತ್ತು.

ದಿನೇಶ್ ಗೂಳಿಗೌಡ ಮನವಿ:
ಗ್ರಾಮೀಣ ಭಾಗದಲ್ಲಿ ಸರ್ವೇ ಮಾಡಲು ಎಕರೆಗೆ 35 ರೂ. ಇದ್ದ ಸರ್ವೇ ಶುಲ್ಕವನ್ನು ರಾಜ್ಯ ಸರ್ಕಾರವು ಇತ್ತೀಚೆಗೆ ದಿಢೀರನೆ 3500ರಿಂದ 4000 ರೂ. ಹಾಗೂ ನಗರ ಭಾಗಕ್ಕೆ 5 ಸಾವಿರ ರೂಪಾಯಿಗೆ ಏರಿಸಿ ಶುಲ್ಕವನ್ನು ವಿಧಿಸಿತ್ತು. ಸರ್ಕಾರದ ಈ ಕ್ರಮದಿಂದ ರಾಜ್ಯದ ರೈತರಿಗೆ ಬಹಳ ತೊಂದರೆ ಆಗುತ್ತಿದ್ದು, ಮತ್ತಷ್ಟು ಸಂಕಷ್ಟವನ್ನು ಅನುಭವಿಸುವ ಪರಿಸ್ಥಿತಿ ಬಂದೊದಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಶುಲ್ಕವನ್ನು ಇಳಿಸಬೇಕೆಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ರವರು ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ರವರು ಮನವಿ ಮಾಡಿದ ಬೆನ್ನಲ್ಲೆ ಎಚ್ಚೆತ್ತ ರಾಜ್ಯ ಸರ್ಕಾರವು ಸರ್ವೆ ಶುಲ್ಕ ಇಳಿಕೆ ಮಾಡಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications