ದಿಢೀರ್ ಏರಿಕೆಯಾಗಿದ್ದ ಜಮೀನು ಸರ್ವೆ ಶುಲ್ಕ ಶೇ.50ರಷ್ಟು ಇಳಿಕೆ
ಬೆಂಗಳೂರು, ಫೆ.11: ಕಳೆದು ತಿಂಗಳು ದಿಢೀರ್ ಮಾಡಲಾಗಿದ್ದ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರತಿ ಸರ್ವೆ ನಂಬರ್ಗೆ 35 ರೂ. ಇದ್ದ ಸರ್ವೆ ಶುಲ್ಕವನನ್ನು ರಾಜ್ಯ ಸರ್ಕಾರ 2021ರ ನವೆಂಬರ್ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತು ಬೆಳೆ ನಷ್ಟಗಳಿಂದ ಕಂಗಾಲಾಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ ಸದಸ್ಯ ದಿನೇಶ್ ಗೂಳಿಗೌಡ ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಂದಾಯ ಇಲಾಖೆಯ ಗಮನ ಸೆಳೆದು ಸರ್ವೆ ಶುಲ್ಕದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದ್ದರು. ಇದರ ಬೆನ್ನಲ್ಲೇ ಸರ್ವೆ ಶುಲ್ಕ ಪರಿಷ್ಕರಿಸಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಪರಿಷ್ಕೃತ ಆದೇಶದ ಪ್ರಕಾರ ಹದ್ದು ಬಸ್ತು ಅರ್ಜಿ ಶುಲ್ಕ ಗ್ರಾಮೀಣ ಭಾಗದಲ್ಲಿ ಎರಡು ಎಕರೆವರೆಗೂ 500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 300 ರೂಪಾಯಿಯಂತೆ ದರ ನಿಗದಿ ಮಾಡಿ ಆದೇಶಿಸಿದೆ. ಇನ್ನು ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2000 ರೂ. ಇದ್ದು, ನಂತರ ಪ್ರತಿ ಎಕರೆಗೆ 400 ರೂ. ನಿಗದಿ ಮಾಡಿ ಕಂದಾಯ ಇಲಾಖೆ (ಭೂಮಾಪನ) ಫೆ.9ರಂದು ಆದೇಶ ಹೊರಡಿಸಿದೆ.

11ಇ ನಕ್ಷೆ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿಗೆ ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆವರೆಗೂ 1500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 400 ರೂಪಾಯಿಯಂತೆ ದರ ನಿಗದಿಯಾಗಿದೆ. ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2500 ರೂ. ಇದ್ದು, ನಂತರ ಪ್ರತಿ ಎಕರೆಗೆ 1000 ರೂ.ಗೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.
ಏಕಾಏಕಿ ದರ ಏರಿಸಿದ್ದ ಸರ್ಕಾರ:
ಇದುವರೆಗೆ 35 ರೂಪಾಯಿಯಲ್ಲಿ ಆಗುತ್ತಿದ್ದ ಸರ್ವೇ ಕೆಲಸಕ್ಕೆ ಕಳೆದ ನವೆಂಬರ್ನಲ್ಲಿ ಸರ್ಕಾರ ಏಕಾಏಕಿ ಕಳೆದ ಜನವರಿಯಲ್ಲಿ ದರ ಏರಿಕೆ ಮಾಡಿತ್ತು. ಹದ್ದು ಬಸ್ತು ಅರ್ಜಿ ಶುಲ್ಕವನ್ನು ಗ್ರಾಮೀಣ ಪ್ರದೇಶದಲ್ಲಿ ಮೊದಲ ಎರಡು ಎಕರೆಗೆ 1500 ರೂ. ನಂತರ ಪ್ರತಿ ಎಕರೆಗೆ 300 ರೂ.ಗೆ ಹೆಚ್ಚಿಸಿತ್ತು. ನಗರ ಪ್ರದೇಶದಲ್ಲಿ ಮೊದಲ ಎರಡು ಎಕರೆಗೆ 2000 ರೂ. ಮತ್ತು ನಂತರ ಪ್ರತಿ ಎಕರೆಗೆ 400 ರೂ. ನಿಗದಿ ಮಾಡಿತ್ತು.

ದಿನೇಶ್ ಗೂಳಿಗೌಡ ಮನವಿ:
ಗ್ರಾಮೀಣ ಭಾಗದಲ್ಲಿ ಸರ್ವೇ ಮಾಡಲು ಎಕರೆಗೆ 35 ರೂ. ಇದ್ದ ಸರ್ವೇ ಶುಲ್ಕವನ್ನು ರಾಜ್ಯ ಸರ್ಕಾರವು ಇತ್ತೀಚೆಗೆ ದಿಢೀರನೆ 3500ರಿಂದ 4000 ರೂ. ಹಾಗೂ ನಗರ ಭಾಗಕ್ಕೆ 5 ಸಾವಿರ ರೂಪಾಯಿಗೆ ಏರಿಸಿ ಶುಲ್ಕವನ್ನು ವಿಧಿಸಿತ್ತು. ಸರ್ಕಾರದ ಈ ಕ್ರಮದಿಂದ ರಾಜ್ಯದ ರೈತರಿಗೆ ಬಹಳ ತೊಂದರೆ ಆಗುತ್ತಿದ್ದು, ಮತ್ತಷ್ಟು ಸಂಕಷ್ಟವನ್ನು ಅನುಭವಿಸುವ ಪರಿಸ್ಥಿತಿ ಬಂದೊದಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಶುಲ್ಕವನ್ನು ಇಳಿಸಬೇಕೆಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ರವರು ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ರವರು ಮನವಿ ಮಾಡಿದ ಬೆನ್ನಲ್ಲೆ ಎಚ್ಚೆತ್ತ ರಾಜ್ಯ ಸರ್ಕಾರವು ಸರ್ವೆ ಶುಲ್ಕ ಇಳಿಕೆ ಮಾಡಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications