ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಲಕ್ಷಣ್ ಸವದಿ ನೇಮಕ
ಬೆಂಗಳೂರು, ಜೂನ್ 01 : ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಲಕ್ಷಣ್ ಸವದಿ ಅವರನ್ನು ನೇಮಕ ಮಾಡಲಾಗಿದೆ. 2018ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.
ಶುಕ್ರವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಲಕ್ಷಣ್ ಸವದಿ ಅವರನ್ನು ನೇಮಕ ಮಾಡಿದ್ದಾರೆ. ನೇಮಕಗೊಂಡಿರುವ ಪತ್ರವನ್ನು ಲಕ್ಷಣ್ ಸವದಿ ಅವರಿಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಹಸ್ತಾಂತರ ಮಾಡಿದರು.

2018ರ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲಕ್ಷಣ್ ಸಂಗಪ್ಪ ಸವದಿ 2331 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಈರಣ್ಣಗೌಡ ಕುಮಟಹಳ್ಳಿ ವಿರುದ್ಧ ಸೋಲು ಕಂಡಿದ್ದರು. ಚುನಾವಣೆಯಲ್ಲೂ ಸೋತರೂ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನೀಡಲಾಗಿದೆ.
ರಾಜ್ಯ ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಲಕ್ಷ್ಮಣ್ ಸವದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ನಾಡಿನ ರೈತ ಸಮುದಾಯ ಸಂಘಟಿತಗೊಂಡು, ಬಿಜೆಪಿಯು ತಳಮಟ್ಟದಲ್ಲಿ ಇನ್ನಷ್ಟು ಸದೃಢಗೊಳ್ಳಲಿದೆ ಎಂಬ ಸಂಪೂರ್ಣ ಭರವಸೆಯಿದೆ. pic.twitter.com/Rt7AUOLXMZ
— B.S. Yeddyurappa (@BSYBJP) June 1, 2018
2008ರ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಗೆದ್ದಿದ್ದ ಲಕ್ಷಣ್ ಸವದಿ ಅವರು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. 2013ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಅವರು ಸೋಲು ಕಂಡಿದ್ದಾರೆ.
2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಕ್ಷಣ್ ಸವದಿ ಅವರನ್ನು ರೈತ ಮೋರ್ಚಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಗಮನಹರಿಸಲು ಬಿಜೆಪಿ ತಂತ್ರ ರೂಪಿಸಿದೆ.












Click it and Unblock the Notifications