RCEP ಒಪ್ಪಂಕ್ಕೆ ಒಲ್ಲೆ ಎಂದ ಮೋದಿ ಕ್ರಮವನ್ನು ಶ್ಲಾಘಿಸಿದ ಭಾರತ
ನವದೆಹಲಿ, ನವೆಂಬರ್ 04: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಭಾರತದ ಹಲವು ನಾಯಕರು ಸ್ವಾಗತಿಸಿದ್ದಾರೆ.
ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಆಸಿಯಾನ್ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, "ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವುದರಿಂದ ಭಾರತದ ರೈತರಿಗೆ, ವ್ಯಾಪಾರಿಗಳಿಗೆ ನಷ್ಟವಾಗುತ್ತದೆ. ಆದ್ದರಿಂದ ಅವರ ಹಿತಾಸಕ್ತಿಯ ದೃಷ್ಟಿಯಿಂದ ಈ ಒಪ್ಪಂದಕ್ಕೆ ಸಹಿ ಹಾಕಲು ನಾನು ಇಷ್ಟಪಡುವುದಿಲ್ಲ. ಅದಕ್ಕೆ ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲ" ಎಂದರು.
ಆರ್ ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದ್ದೇ ಆದರೆ ಚೀನಾ, ಜಪಾನ್ ಸೇರಿದಂತೆ 16 ದೇಶಗಳ ಮೇಲೆ ಅದು ಯಾವುದೇ ರೀತಿಯ ಆಮದು ಸುಂಕ ಹಾಕಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ ಬೇರೆ ದೇಶಗಳ ಸಾಮಗ್ರಿಗಳು ಸುಲಭವಾಗಿ ಭಾರತೀಯ ಮಾರುಕಟ್ತೆ ಪ್ರವೇಶಿಸಲು ಅವಕಾಶವಾಗುತ್ತಿತ್ತು. ಇದರಿಂದ ಭಾರತೀಯ ರೈತರು, ವ್ಯಾಪಾರಿಗಳಿಗೆ ಭಾರೀ ನಷ್ಟವಾಗುತ್ತಿತ್ತು.
ಈ ಒಪ್ಪಂದಕ್ಕೆ ಸಹಿ ಹಾಕದ ನರೇಂದ್ರ ಮೋದಿ ಅವರ ನಡೆಯನ್ನು ದೇಶದಾದ್ಯಂತ ಹಲವು ನಾಯಕರು ಸ್ವಾಗತಿಸಿದ್ದಾರೆ.

ರಣದೀಪ್ ಸಿಂಗ್ ಸುರ್ಜೇವಾಲಾ
ಮೋದಿ ಸರ್ಕಾರ ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಮಾಡದೆ ರಾಷ್ಟ್ರೀಯ ಹಿತಾಸಕ್ತಿಯನ್ನು ಸಮರ್ಥಿಸಿಕೊಂಡಿದ್ದು ಒಂದು ವಿಜಯ. ಸರ್ಕಾರ ಈ ರೀತಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ರೈತರು ಮತ್ತು ಕಾಂಗ್ರೆಸ್ ಪಕ್ಷದ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುಂಗ್ ಸುರ್ಜೇವಾಲಾ ಹೇಳಿದ್ದಾರೆ.

ದೇಶ ಮೊದಲು
ಎಂದಿಗೂ ದೇಶ ಮೊದಲು ಎಂಬುದನ್ನು ಪ್ರತಿಪಾದಿಸುತ್ತಿರುವ ನೀವು, ಆರ್ ಸಿಇಪಿಗೆ ಸಹಿ ಮಾಡದೆ ಭಾರತೀಯರ ನಿಲುವನ್ನು ಸಮರ್ಥಿಸಿದ್ದೀರಿ, ನಿಮಗೆ ಧನ್ಯವಾದಗಳು. ಭಾರತೀಯ ಜವಳಿ ಉದ್ಯಮ ನಿಮಗೆ ಎಂದಿಗೂ ಋಣಿಯಾಗಿರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.

ಮೋದಿಯವರ ಗಟ್ಟಿ ನಾಯಕತ್ವದ ಪರಿಣಾಮ
ಭಾರತ ಆರ್ ಸಿಇಪಿಗೆ ಸಹಿ ಮಾಡದೆ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗಟ್ಟಿ ನಾಯಕತ್ವಕ್ಕೆ ಸಾಕ್ಷಿ. ಅವರು ಎಂದಿಗೂ ತಮಗೆ ರಾಷ್ಟ್ರದ ಹಿತಾಸಕ್ತಿ ಎಲ್ಲಕ್ಕಿಂತಲೂ ಮುಖ್ಯ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಒತ್ತಡದ ನಡುವೆಯೂ ಪಟ್ಟು ಬಿಡದ ಮೋದಿ
ಆರ್ ಸಿಇಪಿಗೆ ಸಹಿ ಮಾಡದೆ ಉಳಿಯುವ ಮೂಲಕ ಪ್ರಧಾನಿ ನರೇಂದ್ರ ಮೊದಿ ದೇಶದ ಹಿತಾಸಕ್ತಿಯೇ ಎಲ್ಲಕ್ಕಿಂತ ಮುಖ್ಯ ಎಂಬುದನ್ನು ತೋರಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡವಿದ್ದರೂ ಅವರು ತಮ್ಮ ಪತ್ತನ್ನು ಬಿಟ್ಟುಕೊಡಲಿಲ್ಲ ಎಂದು ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಟ್ವೀಟ್ ಮಾಡಿದ್ದಾರೆ.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications