ಸಾಲಮನ್ನಾದಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ: ವೆಂಕಯ್ಯ ನಾಯ್ಡು
ಬೆಂಗಳೂರು, ಜನವರಿ 7: "ಉಚಿತ ವಿದ್ಯುತ್ ಹಾಗೂ ಸಾಲಮನ್ನಾ ಯೋಜನೆಗಳಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ. ಇವು ತಾತ್ಕಾಲಿಕ ಪರಿಹಾರ ಅಷ್ಟೇ' ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, "ರೈತರ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಬೇಕಿಲ್ಲ. ರೈತರಿಗೆ ಬದುಕಿನ ಭದ್ರತೆ ನೀಡಿ, ಶಾಶ್ವತ ಪರಿಹಾರ ಕಲ್ಪಿಸಿ. ಇದರಿಂದ ರೈತ ಸ್ವಾವಲಂಬಿಯಾಗಿ ಬದುಕಲು ಅವಕಾಶ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ವಿಜ್ಞಾನದ ಹಾಗೂ ತಂತ್ರಜ್ಞಾನದ ಅಳವಡಿಕೆ ಆಗಬೇಕು. ಹಾಗಾದಾಗ ಅವರ ಬದುಕು ಅವರೇ ಕಟ್ಟಿಕೊಳ್ಳಲಿದ್ದಾರೆ' ಎಂದು ಹೇಳಿದರು.
"ದೇಶದ ವಿವಿಧ ಭಾಗದಿಂದ ವಿಜ್ಞಾನಿಗಳು, ಯುವ ವಿಜ್ಞಾನಿಗಳು, ಆಸಕ್ತರು ಕಳೆದ ಐದು ದಿನ ಉತ್ತಮ ಜ್ಞಾನವನ್ನು ವಿಜ್ಞಾನದ ಮೂಲಕ ನೀಡಿದ್ದಾರೆ. ಕೃಷಿ ದೇಶದ ಮೂಲ ಸಂಸ್ಕೃತಿಯಾಗಿದೆ. ಇದನ್ನು ಬುಳಿಸಿಕೊಂಡು ಸಾಗಬೇಕಿದೆ. ಇದರಿಂದ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆಯನ್ನು ಕೃಷಿ ವಿಚಾರದಲ್ಲಿ ಮಾಡಿ. ಗ್ರಾಮೀಣ ಭಾಗದ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ಪರಿಹಾರ ಕಲ್ಪಿಸಿ ಅವರ ಬದುಕು ಹಸನಾಗಿಸಬೇಕು' ಎಂದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, "ಐದು ದಿನದ ಕಾರ್ಯಕ್ರಮದಲ್ಲಿ ಮೊದಲ ದಿನದಿಂದಲೂ ಉತ್ತಮ ಆಸಕ್ತಿ ಕಂಡಿದ್ದೇನೆ. ವಿಜ್ಞಾನ, ತಂತ್ರಜ್ಞಾನದ ವಿಚಾರದಲ್ಲಿಕಾಣಿಸಿದ ಆಸಕ್ತಿ ಗಮನಿಸಿದ್ದೇನೆ. ಈ ಐದು ದಿನ ಸಾವಿರಾರು ವಿಜ್ಞಾನಿಗಳು, ಯುವಕರು ಪಾಲ್ಗೊಂಡು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಂಡಿದ್ದಾರೆ. ಜ್ಞಾನ ನಿಂತ ನೀರಾಗಬಾರದು. ವಿಜ್ಞಾನ, ತಂತ್ರಜ್ಞಾನ ಬೇರೆ ಬೇರೆ ಅಲ್ಲ. ಇವು ಒಂದಾಗಿ ಜನೋಪಕಾರಿಯಾಗಲು ಶ್ರಮಿಸಬೇಕು ಎಂದರು.
ಸಮಾರಂಭದಲ್ಲಿ ಕೋಲ್ಕತ್ತಾ ಐಎಸ್ಸಿಎ ಪ್ರಧಾನ ಅಧ್ಯಕ್ಷ ಫ್ರೊ. ಕೆ.ಎಸ್.ರಂಗಪ್ಪ, 2021ರ ಐಎಸ್ಸಿಎ ಕೋಲ್ಕತಾ ಚುನಾಯಿತ ಪ್ರಧಾನ ಅಧ್ಯಕ್ಷೆ ಪ್ರೋ. ವಿಜಯಲಕ್ಷ್ಮಿ ಸಕ್ಸೇನಾ, ಕೃಷಿ ವಿವಿ ಉಪಕುಲಪತಿ ಪ್ರೋ. ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಇಸ್ಕಾ ಪ್ರಶಸ್ತಿಯ ವಿವಿಧ ವಿಭಾಗದ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಫ್ರೊ. ಕೆ.ಎಸ್. ರಂಗಪ್ಪ ಅವರು ವಿಜ್ಞಾನ ಜ್ಯೋತಿಯನ್ನು 2021ರ ಐಎಸ್ಸಿಎ ಕೋಲ್ಕತಾ ಚುನಾಯಿತ ಪ್ರಧಾನ ಅಧ್ಯಕ್ಷೆ ಪ್ರೋ. ವಿಜಯಲಕ್ಷ್ಮಿ ಸಕ್ಸೇನಾ ಅವರಿಗೆ ಹಸ್ತಾಂತರ ಮಾಡಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications