ಲಾಕ್ಡೌನ್ ಎಫೆಕ್ಟ್: ಮಲ್ಲಿಗೆ ಬೆಳೆದರೂ 'ಹೂವಿನ'ಹಡಗಲಿ ರೈತರ ಜೀವನ ಘಮಿಸುತ್ತಿಲ್ಲ
ವಿಜಯನಗರ, ಮೇ 11: ಮಲ್ಲಿಗೆ ಹೂವು ಅಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ, ಘಮಘಮಿಸೋ ಹೂವಿನ ಸುವಾಸನೆ ಅದೆಷ್ಟು ಸುಮಧುರ. ಮಲ್ಲಿಗೆ ಹೂ ಬೆಳೆಯೋ ರೈತರ ಬದುಕಲ್ಲಿ ಮಾತ್ರ ಮಲ್ಲಿಗೆ ಹೂವಿನ ಪರಿಮಳವೇ ಇಲ್ಲದಂತಾಗಿದೆ.
ಕೊರೊನಾ ಲಾಕ್ಡೌನ್ ಹೊಡೆತಕ್ಕೆ ಮಲ್ಲಿಗೆ ನಾಡಿನ ಹೂವಿನ ಬೆಳೆಗಾರರು ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಹೌದು. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಲ್ಲಿಯೇ ಮಲ್ಲಿಗೆ ಹೂವು ಬೆಳೆಯುವುದಕ್ಕೆ ಹೆಸರಾಗಿರುವ ಹೂವಿನಹಡಗಲಿಯನ್ನು ಮಲ್ಲಿಗೆ ನಾಡು ಎಂದು ಕರೆಯುತ್ತಾರೆ.
ವಿಜಯನಗರ ಜಿಲ್ಲೆಯ ಪಶ್ಚಿಮ ತಾಲ್ಲೂಕುಗಳಲ್ಲಿ ಒಂದಾದ ಹೂವಿನಹಡಗಲಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಲ್ಲಿಗೆ ಹೂವನ್ನು ಬೆಳೆಯಲಾಗುತ್ತದೆ.

Array
ಮಲ್ಲಿಗೆನಾಡು ಎಂದು ಹೆಸರುವಾಸಿಯಾಗಿರುವ ಹೂವಿನಹಡಗಲಿ ತಾಲ್ಲೂಕಿನಲ್ಲಿ ಬರೋಬ್ಬರಿ 500 ಎಕರೆಗಿಂತಲೂ ಹೆಚ್ಚು ಪ್ರದೇಶದಲ್ಲಿ ಮಲ್ಲಿಗೆ ಹೂವನ್ನು ಮಿರಾಕೊರನಹಳ್ಳಿ, ಮುದೇನೂರ, ಹನಕನಹಳ್ಳಿ, ತಮಲಾಪುರ, ಕೊಳಚಿ, ಕಗ್ಗಲ್ಗಟ್ಟಿ ತಾಂಡ, ಮಾಗಳ, ಹೀಗೆ ವಿವಿಧ ಗ್ರಾಮಗಳಲ್ಲಿ ಈಗ ನಿತ್ಯ ನೂರಾರು ಕ್ವಿಂಟಾಲ್ ಹೂ ಇಳುವರಿ ಬರುತ್ತಿದೆ.

ಬೇರೆ ಬೇರೆ ಜಿಲ್ಲೆಗಳಲ್ಲಿ ಬೇಡಿಕೆ
ಹೌದು. ಹೂವಿನಹಡಗಲಿ ತಾಲ್ಲೂಕಿನಲ್ಲಿ ಹೆಚ್ಚಾಗಿ ಕೆಂಪು ಮಣ್ಣನ್ನು ಹೊಂದಿರುವ ಪ್ರದೇಶವಾಗಿದೆ ಹಾಗಾಗಿ ಹೂವು ಬೆಳೆಯುವುದಕ್ಕೆ ಹೇಳಿಮಾಡಿಸಿದಂತಿದೆ. ಸಾಮಾನ್ಯವಾಗಿ ಹೂವಿನಹಡಗಲಿ ಮಲ್ಲಿಗೆಗೆ ಎಲ್ಲಿಲ್ಲದ ಬೇಡಿಕೆ. ಹುಬ್ಬಳ್ಳಿ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ ಚಿತ್ರದುರ್ಗ ಭಾಗಗಳಲ್ಲಿ ಈ ಹೂವಿನಹಡಗಲಿಯ ಹೂವಿಗೆ ಭಾರೀ ಬೇಡಿಕೆ ಇದೆ.

ಮಲ್ಲಿಗೆ ಹೂವಿನ ದರ ಕುಸಿತ
ಕೊರೊನಾ 2ನೇ ಅಲೆಯಿಂದ ರಾಜ್ಯ ಸರ್ಕಾರ ಇಡೀ ರಾಜ್ಯವನ್ನು ಲಾಕ್ಡೌನ್ ಘೋಷಣೆ ಮಾಡಿರುವ ಹಿನ್ನಲೆ ಮದುವೆ ಮತ್ತು ಶುಭಸಮಾರಂಭಗಳು ಸಹ ನಡೆಯುತ್ತಿಲ್ಲ. ಜೊತೆಗೆ ಗ್ರಾಹಕರು ಬೀದಿಗಳಿಗೆ ಬರುವ ಹಾಗಿಲ್ಲ. ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಪ್ರತಿ ಕ್ವಿಂಟಾಲ್ಗೆ 400 ರಿಂದ 500 ರೂ. ವರೆಗೆ ಬೇಡಿಕೆ ಇತ್ತು. ಈಗ ಲಾಕ್ಡೌನ್ನಿಂದಾಗಿ ಪ್ರತಿ ಕ್ವಿಂಟಾಲ್ಗೆ 100 ರೂ. ಸಹ ಕೇಳುವವರಿಲ್ಲವಾಗಿದೆ. ಮಲ್ಲಿಗೆ ಬೆಳೆಗಾರರು ಕೊರೊನಾ ಎರಡನೇ ಅಲೆಗೆ ತತ್ತರಿಸಿ ಹೋಗಿದ್ದಾರೆ. ಬೆಳೆಗೆ ಬೆಂಬಲ ಬೆಲೆ ಸಿಗದೇ ಅಡಕತ್ತರಿಯಲ್ಲಿ ಸಿಲುಕಿಕೊಂಡಿದ್ದಾರೆ.

ಕಳೆದ ವರ್ಷದ ಪರಿಹಾರ ಬಂದಿಲ್ಲ
ಕಳೆದ ವರ್ಷದ ಲಾಕ್ಡೌನ್ ಸಂದರ್ಭದಲ್ಲಿ ಆದ ನಷ್ಟವನ್ನು ರೈತರಿಗೆ ಇನ್ನು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬಾರದಂಥಹ ಪರಿಸ್ಥಿತಿ ಇತ್ತು. ಹೊಲದಲ್ಲಿ ಅರಳಿದ್ದ ಮಲ್ಲಿಗೆ ಹೂ ದರವಿಲ್ಲದೇ ಬಾಡಿ ಹೋಗಿದ್ದವು. ಕಳೆದ ಬಾರಿ ಲಾಕ್ಡೌನ್ ನಲ್ಲಿ ಕೈ ಸುಟ್ಟುಕೊಂಡಿದ್ದ ರೈತರಿಗಿನ್ನು ಪರಿಹಾರ ಬಂದಿಲ್ಲ.

64 ಜನ ರೈತರಿಗೆ ಮಾತ್ರ ಪರಿಹಾರ
ಕಳೆದ ಬಾರಿ ಹೂವಿನ ಬೆಳೆಗಾರರಿಗೆ ಸರಕಾರ ಪರಿಹಾರ ಘೋಷಣೆ ಮಾಡಿತ್ತು. ಒಂದು ವರ್ಷದವಾದರೂ 300 ರೈತರಿಗೆ ಬಿಡಿಗಾಸು ದೊರೆತ್ತಿಲ್ಲ. ನೆಪ ಮಾತ್ರಕ್ಕೆ 64 ಜನ ರೈತರಿಗೆ ಮಾತ್ರ ಪರಿಹಾರವನ್ನು ವಿತರಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಅಧಿಕಾರಿಗಳು ಬೆಳೆ ನಷ್ಟವನ್ನು ಜಿಪಿಎಸ್ ಮೂಲಕ ಸಂಗ್ರಹಿಸಿದ್ದಾರೆ. ಆದರೆ, ಇಲ್ಲಿಯವರೆಗೂ ರೈತರಿಗೆ ಪರಿಹಾರ ವಿತರಣೆ ಮಾಡುವಂತಹ ಕೆಲಸವಾಗಿಲ್ಲ. ಕೂಡಲೇ ಸರಕಾರ ರೈತರ ನೆರವಿಗೆ ಧಾವಿಸಬೇಕೆಂದು ರೈತರ ಒತ್ತಾಯವಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications