ಕೊಡಗಿನಲ್ಲಿ ವಿಯೆಟ್ನಾಂನ ಕಳಪೆ ಗುಣಮಟ್ಟದ ಕರಿಮೆಣಸು ಮಾರಾಟ
ಮಡಿಕೇರಿ, ಸೆಪ್ಟೆಂಬರ್ 6: ವಿಯೆಟ್ನಾಂನ ಕಳಪೆ ಕರಿಮೆಣಸನ್ನು ಆಮದು ಮಾಡಿಕೊಂಡು, ಅದರೊಂದಿಗೆ ಕೊಡಗಿನ ಕರಿಮೆಣಸನ್ನು ಬೆರೆಸಿ ಮಾರಾಟ ಮಾಡಲಾಗುತ್ತಿದ್ದು, ಸ್ಥಳೀಯ ಕರಿಮೆಣಸಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೊಡೆತ ಬಿದ್ದಿದೆ. ದರ ಕುಸಿತಕ್ಕೂ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ.
ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆಯೊಳಗೆ ಕಳಪೆ ಮಟ್ಟದ ವಿಯೆಟ್ನಾಂನ ಕರಿಮೆಣಸು ದಾಸ್ತಾನು ಇರಿಸಲಾಗಿದೆ ಎಂದು ಬೆಳೆಗಾರರು ಆರೋಪ ಮಾಡಿದ್ದಾರೆ. ವ್ಯಾಪಾರಿಯೊಬ್ಬ ಕರಿಮೆಣಸನ್ನು ಆಮದು ಮಾಡಿದ್ದು, ಅದರೊಂದಿಗೆ ಕೊಡಗಿನ ಕರಿಮೆಣಸನ್ನು ಬೆರೆಸಿ ಮಾರಾಟ ಮಾಡುವ ಹುನ್ನಾರ ನಡೆದಿದೆ. ಇದರಿಂದ ಕೊಡಗಿನ ಕರಿಮೆಣಸನ್ನು ಅನುಮಾನದಿಂದ ನೋಡುವಂತಾಗಿದೆ ಎಂಬುದು ಆರೋಪ.

ಜತೆಗೆ ಗುಣಮಟ್ಟ ಹೊಂದಿದ ಭಾರತದ ಕರಿಮೆಣಸಿಗೆ ಧಕ್ಕೆ ತರುವ ಕೆಲಸವಾಗಿದೆ. ಜತೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದರ ಕುಸಿತಕ್ಕೂ ಕಾರಣವಾಗಿದೆ. ಹೊರಗಿನಿಂದ ಕರಿಮೆಣಸನ್ನು ತಂದು ಮಾರಾಟ ಮಾಡುವುದನ್ನು ತಡೆಗಟ್ಟಬೇಕೆಂದು ಆಗ್ರಹಿಸಿರುವ ಬೆಳೆಗಾರರು ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಸುರೇಶ್ ಪ್ರಭು ಅವರಿಗೆ ಟ್ವೀಟ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಒಳಗೆ ವಿಯೆಟ್ನಾಂ ದೇಶದ ಬೃಹತ್ ಪ್ರಮಾಣದಲ್ಲಿ ಕಳಪೆ ಮಟ್ಟದ ಕರಿಮೆಣಸು ದಾಸ್ತಾನಿರುವ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕೆಲವು ಸದಸ್ಯರೇ ಮಾಧ್ಯಮದ ಮೂಲಕ ವಿಚಾರವನ್ನು ಬಹಿರಂಗಪಡಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಸಂಬಂಧ ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications