ರಾಜಸೀಟ್ ಫಲಪುಷ್ಪ ಪ್ರದರ್ಶನ ನಡೆಯುವುದೇ?
ಮಡಿಕೇರಿ, ಮೇ 29 : ಮಡಿಕೇರಿಯ ರಾಜಸೀಟ್ ನಲ್ಲಿ ಜೂನ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲು ತೋಟಗಾರಿಕೆ ಇಲಾಖೆ ಚಿಂತನೆ ನಡೆಸಿದೆ. ಒಂದು ಬಾರಿ ಮುಂದೂಡಲಾಗಿರುವ ಈ ಪ್ರದರ್ಶನ ಜೂನ್ ನಲ್ಲಿ ನಡೆಯದಿದ್ದರೆ ಮಡಿಕೇರಿ ದಸರಾದೊಂದಿಗೆ ನಡೆಯುವುದು ಖಚಿತವಾಗಿದೆ.
ಪ್ರತಿವರ್ಷ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ರಾಜಸೀಟ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಫಲಪುಷ್ಪ ಪ್ರದರ್ಶನ ವಿಳಂಬವಾಗಿದೆ. ಮೇ 9ರಿಂದ 11ರವೆರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಅನಿವಾರ್ಯ ಕಾರಣದಿಂದಾಗಿ ಅದನ್ನು ಸಹ ಮುಂದೂಡಲಾಯಿತು.

ಜೂನ್ ತಿಂಗಳಿನಲ್ಲಿ ಪ್ರದರ್ಶನ ಆಯೋಜಿಸಲು ತೋಟಗಾರಿಕಾ ಇಲಾಖೆ ಪ್ರಯತ್ನ ನಡೆಸುತ್ತಿದೆ. ಆದರೆ, ರಾಜಸೀಟ್ ನಲ್ಲಿ ಹೂಗಳು ಬಾಡಿ ಹೋಗಿವೆ. ಆದ್ದರಿಂದ ಕೇವಲ 20 ದಿನದಲ್ಲಿ ಹೂ ಬಿಡುವ ತಳಿಯನ್ನು ತಂದು ಬೆಳೆಯಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬೆಂಗಳೂರಿನ ಇಂಡೋ ಅಮೆರಿಕನ್ ಹೈಬ್ರಿಡ್ ಸಂಸ್ಥೆಗೆ ಪತ್ರ ಬರೆಯಲಾಗಿದ್ದು, ತಳಿಯನ್ನು ಸರಬರಾಜು ಮಾಡುವಂತೆ ಕೋರಿದೆ.[ಲಾಲ್ ಬಾಗ್ ಪ್ಲವರ್ ಶೋ ಚಿತ್ರಗಳು]
ಜಿಲ್ಲಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ತೆರಳಿ ಹೂ ಗಿಡ ವಿತರಣಾ ಕಂಪೆನಿಗಳಿಗೆ ಭೇಟಿ ನೀಡಿ ಗಿಡಗಳನ್ನು ತರುವ ಬಗ್ಗೆ ಪ್ರಯತ್ನ ನಡೆಸಿದ್ದಾರೆ. ಆದರೆ, ಫಲಪುಷ್ಪ ಪ್ರದರ್ಶನದ ದಿನಾಂಕ ಮಾತ್ರ ನಿಗದಿಯಾಗಿಲ್ಲ. ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾದರೆ, ಪ್ರದರ್ಶನ ಸ್ಥಗಿತಗೊಳ್ಳಲಿದೆ.
ಜೂನ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲು ಸಾಧ್ಯವಾಗದಿದ್ದರೆ ಮಡಿಕೇರಿಯ ದಸರಾದೊಂದಿಗೆ ಆಯೋಜಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಚುನಾವಣೆ ಬಂದಿದ್ದರಿಂದ ಮಡಿಕೇರಿಯ ಜನರ ಅಚ್ಚುಮೆಚ್ಚಿನ ಫಲಪುಷ್ಪ ಪ್ರದರ್ಶನವನ್ನು ಈ ಬಾರಿ ವಿಳಂಬವಾಗುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications