ಕಾನೂನು ಚೌಕಟ್ಟಿನಲ್ಲಿ ಸಿಲುಕಿದ ಮಹದಾಯಿ ಹೋರಾಟಗಾರರು
ಬೆಂಗಳೂರು, ಆಗಸ್ಟ್ 11 : ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಬಂಧಿತರಾಗಿರುವ ರೈತರನ್ನು ತಕ್ಷಣ ಬಿಡುಗಡೆ ಮಾಡುವುದಿಲ್ಲ. ಬಂಧಿತ ರೈತರು ಜಾಮೀನು ಪಡೆಯಲು ಸಹಕಾರ ನೀಡುವುದಾಗಿ ಸರ್ಕಾರ ಹೇಳಿದೆ.
ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಬಂಧಿತರಾಗಿರುವ 187 ರೈತರ ಮೇಲೆ ದಾಖಲಾಗಿರುವ ಪ್ರಕರಣಗಳ ಬಗ್ಗೆ ಚರ್ಚೆ ನಡೆಯಿತು. ಕಾನೂನಿನ ತೊಡಕುಗಳು ಇರುವುದರಿಂದ ರೈತರನ್ನು ತಕ್ಷಣ ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ತೀರ್ಮಾನಿಸಲಾಯಿತು.[ಮಹದಾಯಿ ಹೋರಾಟ : ರೈತರ ಬಿಡುಗಡೆ ಶೀಘ್ರ]

ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಪ್ರತಿಭಟನೆ ನಡೆಸಿದ ಕುರಿತು 25 ಎಫ್ಐಆರ್ ದಾಖಲಾಗಿದೆ. 187 ಜನರನ್ನು ಬಂಧಿಸಲಾಗಿದೆ. ಇವುಗಳಲ್ಲಿ 7 ಜಾಮೀನುರಹಿತ ಮೊಕದ್ದಮೆಗಳು. ಸಿಆರ್ಪಿಸಿ 321ನೇ ಸೆಕ್ಷನ್ ಪ್ರಕಾರ, ಇಂತಹ ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದೇ ಯಾವುದೇ ಪ್ರಕ್ರಿಯೆ ಮುಂದುವರಿಸುವಂತಿಲ್ಲ' ಎಂದು ಹೇಳಿದರು.[ಮಹದಾಯಿ: ಸರ್ವಪಕ್ಷಗಳ ಸಭೆ ತೆಗೆದುಕೊಂಡ ನಿರ್ಧಾರವೇನು?]
ಆಕ್ಷೇಪಣೆ ಸಲ್ಲಿಸುವುದಿಲ್ಲ : ಬಂಧಿತರಾಗಿರುವ ರೈತರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದಾಗ ಸರ್ಕಾರ ಆಕ್ಷೇಪಣೆ ಸಲ್ಲಿಸುವುದಿಲ್ಲ. ಈ ಕುರಿತು ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರಿಗೆ ವಹಿಸಲಾಗಿದೆ.
ಹಲವು ರೈತರ ಮೇಲೆ ಗಲಭೆ, ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಈ ಕುರಿತು ತನಿಖೆ ನಡೆದು, ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾದ ಬಳಿಕ ಅವುಗಳನ್ನು ವಾಪಸ್ ಪಡೆಯಬಹುದು. ಎಲ್ಲಾ ರೈತರು ಸದ್ಯ, ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ, ಮೊದಲು ಕೋರ್ಟ್ನಲ್ಲಿ ಅವರ ವಿಚಾರಣೆ ನಡೆಯಬೇಕು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications