ಮಹದಾಯಿ ತೀರ್ಪಿಗೆ ಮೇಲ್ಮನವಿ, ತಜ್ಞರ ಜತೆ ಸಿಎಂ ಸಮಾಲೋಚನೆ
ಬೆಂಗಳೂರು, ಆಗಸ್ಟ್ 16: ಮಹದಾಯಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ ನೀಡಿರುವ ತೀರ್ಪಿನ ಪರಾಮರ್ಶೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ತಜ್ಞರು ಹಾಗೂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ನ್ಯಾಯಾಧಿಕರಣದ ಅಂತಿಮ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ 13.42 ಟಿಎಂಸಿ ಅಡಿ , ಗೋವಾಕ್ಕೆ 24 ಟಿಎಂಸಿ ಮತ್ತು ಮಹರಾಷ್ಟ್ರಕ್ಕೆ 1.30 ಟಿಎಂಸಿ ನೀರು ದೊರೆಯಲಿದೆ. ಈ ಕುರಿತು ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿದ್ದು ಈ ಕುರಿತು ಚರ್ಚೆ ನಡೆಸಲು ಗುರುವಾರ ಕುಮಾರಸ್ವಾಮಿ ಸಭೆ ಕರೆದಿದ್ದಾರೆ.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ರಾಜ್ಯ ಸರ್ಕಾರ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಲಿದ್ದಾರೆ.ರಾಜ್ಯ ಸರ್ಕಾರವು ಮಹದಾಯಿ ಜಲಾನಯನ ಪ್ರದೇಶದಿಂದ ತಮಗೆ 36.558 ಟಿಎಂಸಿ ಅಡಿ ನೀರು ಬೇಕೆಂದು ಮನವಿ ಮಾಡಿತ್ತು. ಆದರೆ ಸಿಕ್ಕಿರುವುದು 13.42 ಟಿಎಂಸಿ ಅಡಿ ಮಾತ್ರ. ಈ ನೀರನ್ನು ಯಾವುದಕ್ಕೆ ಬಳಸಿಕೊಳ್ಳಬೇಕು ಎಂದು ನ್ಯಾಯಾಧಿಕರಣ ಹೇಳಿದೆ.

ಮಹದಾಯಿ ಜಲಾನಯನ ಪ್ರದೇಶದಿಂದ ನೀರನ್ನು ಹರಿಸಿಕೊಂಡು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ 13.08 ಟಿಎಂಸಿ ಅಡಿ ನೀರಿನ ಬೇಡಿಕೆ ಇಟ್ಟಿತ್ತು.
ಕಳಸಾ ನಾಲೆಗೆ 3.56 ಟಿಎಂಸಿ ಅಡಿ, ಬಂಡೂರಾ ನಾಲೆಗೆ 4 ಟಿಎಂಸಿ ಮತ್ತು ಕಾಳಿ ನದಿಗೆ ಹರಿಸಿ ಕೆಎಚ್ಪಿಇ ಯೋಜನೆ ಮೂಲಕ ವಿದ್ಯುತ್ ಉತ್ಪಾದನೆ ಮಾಡಲು 5.52 ಟಿಎಂಸಿ ಅಡಿ ನೀರಿನ ಬೇಡಿಕೆ ಇಟ್ಟಿತ್ತು. ನ್ಯಾಯಾಧಿಕರಣವು 3.90 ಟಿಎಂಸಿ ಅಡಿ ನೀರು ಮಾತ್ರ ನೀಡಿದ್ದು, ಕಾಳಿ ನದಿಗೆ ಹರಿಸುವ ನೀರಿನ ಬೇಡಿಕೆಯನ್ನು ತಳ್ಳಿ ಹಾಕಿದೆ. ಹೀಗಾಗಿ ಈ ಕುರಿತು ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಬೆಂಗಳೂರಿನ ಸೋಂಪುರ ಕೆರೆ ಉಳಿವಿಗೆ ಜಲಮಂಡಳಿ ಮಾಸ್ಟರ್ ಪ್ಲಾನ್, ಸಂಸ್ಕರಣಾ ಘಟಕಕ್ಕೆ ಕಲುಷಿತ ನೀರು -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications