ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದಲ್ಲಿ ಕಬ್ಬು ಕಟಾವು; ಜೆಡಿಎಸ್ ಶಾಸಕರಿಂದ ಜಿಲ್ಲಾಧಿಕಾರಿ ಭೇಟಿ

|
Google Oneindia Kannada News

ಮಂಡ್ಯ, ಮೇ 13 : ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಕಟಾವಿಗೆ ಬಂದಿದೆ. ಅದನ್ನು ಕಟಾವು ಮಾಡಿ, ನುರಿಸಲು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದೆ.

ಬುಧವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿ. ಎಸ್. ಪುಟ್ಟರಾಜು, "ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದೆವು. "ನಮ್ಮ ಮನವಿ ಮೇರೆಗೆ ಆಹಾರ, ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ" ಎಂದರು.

 ಚಾಮರಾಜನಗರಕ್ಕೆ ಬಂತು ಕಬ್ಬು ಕಟಾವು ಯಂತ್ರ: ರೈತರಿಗೆ ತಂತು ಖುಷಿ ಚಾಮರಾಜನಗರಕ್ಕೆ ಬಂತು ಕಬ್ಬು ಕಟಾವು ಯಂತ್ರ: ರೈತರಿಗೆ ತಂತು ಖುಷಿ

"ಸರ್ಕಾರವೇ ಕಬ್ಬು ಸಾಗಣೆ ವೆಚ್ಚ ಬರಿಸಬೇಕು. ಸಾಗಣೆ ವೆಚ್ಚದ ಬಾಕಿ ನಾಲ್ಕೂವರೆ ಕೋಟಿ ಬರಬೇಕಿದೆ. ತಕ್ಷಣ ಅದನ್ನು ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ಈ ಸಲ ಜಿಲ್ಲೆಯಲ್ಲಿ ಕಾರ್ಖಾನೆ ಆರಂಭವಾಗುವುದು ಅನುಮಾನವಾಗಿದೆ. ಹೀಗಾಗಿ ಪಕ್ಕದ ಜಿಲ್ಲೆಯ ಕಾರ್ಖಾನೆಗಳಿಗೆ ಕಬ್ಬು ಹಂಚಿಕೆ ಮಾಡಲಿ" ಎಂದು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

Mandya JDS MLAs Meet DC Demand To Allow Sugar Cane Cutting

ಸರ್ಕಾರದ ವಿರುದ್ಧ ಆಕ್ರೋಶ : ಜೆಡಿಎಸ್ ಶಾಸಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಜನಪ್ರತಿನಿಧಿಗಳನ್ನು ಕತ್ತಲೆಯಲ್ಲಿಟ್ಟು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿದೆ. ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ" ತೆಗೆದುಕೊಂಡಿದೆ ಎಂದು ಸಿ. ಎಸ್. ಪುಟ್ಟರಾಜು ಆರೋಪಿಸಿದರು.

ದೆಹಲಿಗೂ ಪಪ್ಪಾಯ ಕಳಿಸಿ ಮಾದರಿಯಾದ ಕೊಪ್ಪಳದ ರೈತ ದೆಹಲಿಗೂ ಪಪ್ಪಾಯ ಕಳಿಸಿ ಮಾದರಿಯಾದ ಕೊಪ್ಪಳದ ರೈತ

ಕಬ್ಬು ನಾಶ ಮಾಡಿದ ರೈತ : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿಯ ರೈತ ಚಂದನ್ ಬೆಳೆದು ನಿಂತ ಕಬ್ಬಿನ ಬೆಳೆಯನ್ನು ನಾಶ ಮಾಡಿದ್ದಾನೆ. ಬೆಳೆದು ನಿಂತ ಕಬ್ಬು ಬೆಳೆ ಕಟಾವು ಮಾಡಲು ಆಗಲಿಲ್ಲ ಎಂದು ಸಂಕಷ್ಟಕ್ಕೆ ಸಿಲುಕಿ ಟ್ರ್ಯಾಕ್ಟರ್ ಮೂಲಕ‌ ಬೆಳೆ ನಾಶ ಮಾಡಿದ್ದ.

ಮಂಡ್ಯದಲ್ಲಿ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಮೈಷುಗರ್ ಕಾರ್ಖಾನೆ‌ ಆರಂಭವಾಗಿಲ್ಲ‌. ಸರ್ಕಾರ ರೈತರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾನೆ.‌ ಒಂದು ಎಕರೆಯಲ್ಲಿ ಬೆಳೆದ ಕಬ್ಬು ಬೆಳೆ ನಾಶ‌ಮಾಡುವ ಮೂಲಕ ರೈತನ ಅಸಮಧಾನ ಹೊರಹಾಕಿದ್ದಾನೆ.

English summary
Mandya JD(S) MLAs met the deputy commissioner and urged him to allow for sugar cane cutting and said district farmers in crisis after announcement of lock down.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X