ಸ್ಸಾರಿ, ಶ್ರೀನಿವಾಸಪುರ ಮಾವು ಬಂದಿಲ್ಲರೀ. ..

ಮಾವಿನ ಫಸಲನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ರೈತ ಕುಟುಂಬಗಳ ಬದುಕು ಈ ಬಾರಿಯ ಕಡಿಮೆ ಫಸಲಿನಿಂದ ದುಸ್ಥರವಾಗಲಿದೆ. ಮಾವಿನ ಮರಗಳಲ್ಲಿ ಮಾರ್ಚ್ ವೇಳೆಗೆ ಹೂವುಬಿಡಬೇಕಾಗಿದ್ದು, ಬಿಸಿಲಿನ ಕೊರತೆಯಿಂದಾಗಿ ಈ ವರ್ಷ ನಿಧಾನವಾಗಿ ಹೂ ಬಿಟ್ಟಿತು. ನಂತರದ ದಿನಗಳಲ್ಲಿ ಕಂಡುಬಂದ ಬಿಸಿಲಿನ ಝಳಕ್ಕೆ ಪಿಂದಿಕಟ್ಟಿದ ಹೂಗಳು ಉದರತೊಡಗಿದವು. ಸುಮಾರು ಅರ್ಧದಷ್ಟು ಮರಗಳು ಹೂ ಬಿಡದೆ ಚಿಗರು ಬಂದುದರಿಂದ ಮೊದಲೇ ರೈತನಿಗೆ ಕಡಿಮೆ ಫಸಲಿನ ಮುನ್ಸೂಚನೆ ನೀಡಿತ್ತು.
ಉಳಿದ ಅಲ್ಪ ಸ್ವಲ್ಪ ಕಾಯಿಗಳು ಎರೆಡು-ಮೂರು ಬಾರಿ ಬಿದ್ದ ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಮಳೆಗೆ ಸಂಪೂರ್ಣವಾಗಿ ನೆಲ ಕಚ್ಚಿದವು. ಶ್ರೀನಿವಾಸಪುರದ ಮಾವಿನ ಹಣ್ಣು ದೇಶದೆಲ್ಲೆಡೆ ಪ್ರಸಿದ್ಧಿಯಾಗಿದ್ದು ಸೂಕ್ತ ಮಾರುಕಟ್ಟೆಯಿಲ್ಲದೆ ರೈತರು ನಷ್ಟವನ್ನು ಅನುಭಸುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಇದೆಯಾದರೂ ಅದು ಕೇವಲ ದಲ್ಲಾಳಿಗಳ ಪರವಾಗಿ ಕೆಲಸ ಮಾಡುವ ಸಮಿತಿಯಾಗಿದ್ದು ರೈತರಿಗೆ ಆಸರೆಯಾಗಿ ನಿಲ್ಲುವ ಸಂಸ್ಥೆಯಾಗಿ ಉಳಿದಿಲ್ಲ ಎಂದು ತಾಲೂಕು ಭಾರತೀಯ ಕಿಸಾನ್ ಸಂಘದ ಕಾರ್ಯದರ್ಶಿ ಕೊಳ್ತೂರು ಬಾಲಚಂದ್ರ ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳು ತಾಲೂಕಿನಲ್ಲಿ ಹಣ್ಣು ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿದ್ದರೂ ಇದುವರೆಗೆ ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಗಳು ಪ್ರಗತಿಯಲ್ಲಿಲ್ಲ. ಆದಷ್ಟು ಶೀಘ್ರವಾಗಿ ಘಟಕ ಸ್ಥಾಪನೆಯಾದರೆ ರೈತರಿಗೆ ತುಂಬಾ ಅನುಕೂಲವಾಗಿಲಿದ್ದು, ರೈತರ ಸಂಕಷ್ಟ ಪಾರಾದಂತಾಗುತ್ತದೆ ಎಂದು ತಿಳಿಸಿದರು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications