ದೇಶದ 75,000 ಹೆಕ್ಟೇರ್ ಭೂಮಿಯಲ್ಲಿ ಔಷಧೀಯ ಸಸ್ಯಗಳ ಕೃಷಿ

ಪುಣೆ: ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿ (ಎನ್ ಎಮ್ ಪಿ ಬಿ) ಆಯುಷ್ ಸಚಿವಾಲಯವು ''ಆಜಾ಼ದಿ ಕಾ ಅಮೃತ್ ಮಹೋತ್ಸವದ'' ಅಂಗವಾಗಿ ದೇಶದಲ್ಲಿ ಔಷಧೀಯ ಸಸ್ಯಗಳ ಕೃಷಿಯನ್ನು ಉತ್ತೇಜಿಸಲು ರಾಷ್ಟ್ರೀಯ ಅಭಿಯಾನವನ್ನು ಆರಂಭಿಸಿದೆ. ಇದು ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಹಸಿರು ಭಾರತದ ಕನಸನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ. ಈ ಅಭಿಯಾನದ ಅಡಿಯಲ್ಲಿ, ದೇಶಾದ್ಯಂತ ಮುಂದಿನ ಒಂದು ವರ್ಷದಲ್ಲಿ 75,000 ಹೆಕ್ಟೇರ್ ಭೂಮಿಯಲ್ಲಿ ಔಷಧೀಯ ಸಸ್ಯಗಳ ಕೃಷಿಯನ್ನು ಮಾಡಲಾಗುತ್ತದೆ. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಸಹರಾನ್ ಪುರ್ ಮತ್ತು ಮಹಾರಾಷ್ಟ್ರದ ಪುಣೆಯಿಂದ ಆರಂಭಿಸಲಾಗಿದೆ. ಆಯುಷ್ ಸಚಿವಾಲಯವು 'ಆಜಾ಼ದಿ ಕಾ ಅಮೃತ್ ಮಹೋತ್ಸವ'ದ ಅಡಿಯಲ್ಲಿ ಆಯೋಜಿಸುತ್ತಿರುವ ಕಾರ್ಯಕ್ರಮಗಳ ಸರಣಿಯಲ್ಲಿ ಈ ಕಾರ್ಯಕ್ರಮವು ಎರಡನೆಯದಾಗಿದೆ.

ಪುಣೆಯಲ್ಲಿ ಔಷಧೀಯ ಸಸ್ಯಗಳನ್ನು ರೈತರಿಗೆ ವಿತರಿಸಲಾಯಿತು. ಈಗಾಗಲೇ ಔಷಧೀಯ ಸಸ್ಯಗಳನ್ನು ಬೆಳೆಸುತ್ತಿರುವವರನ್ನು ಸನ್ಮಾನಿಸಲಾಯಿತು. ಅಹ್ಮದ್ ನಗರ ಜಿಲ್ಲೆಯ ಪರ್ನರ್ ಶಾಸಕರಾದ ನಿಲೇಶ್ ಲಂಕೆ, ಯುನಾನಿ ಔಷಧಿಯ ಕೇಂದ್ರೀಯ ಸಂಶೋಧನಾ ಮಂಡಳಿ (ಸಿಸಿಆರ್ ಯುಎಂ)ಯ ಡಿ ಜಿ, ಡಾ.ಅಸಿಂ ಅಲಿ ಖಾನ್, ಮತ್ತು ಎನ್ ಎನ್ ಎಂಪಿಬಿಯ ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಚಂದ್ರ ಶೇಖರ್ ಸಾಂವಲ್ ಅವರು ವಿವಿಧ ಸ್ಥಳಗಳಿಂದ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.

ಡಾ. ಸಾಂವಲ್ "ಈ ಪ್ರಯತ್ನವು ದೇಶದಲ್ಲಿ ಔಷಧೀಯ ಸಸ್ಯಗಳ ಪೂರೈಕೆಗೆ ಹೆಚ್ಚಿನ ಉತ್ತೇಜನ ನೀಡುತ್ತದೆ" ಎಂದು ಹೇಳಿದರು. ಈ ಸಂದರ್ಭದಲ್ಲಿ 75 ರೈತರಿಗೆ ಒಟ್ಟು 7500 ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. 75 ಸಾವಿರ ಸಸಿಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.

Medicinal plants to be Cultivated on 75-thousand-hectares of land in the Country

ಸಹರಾನ್ ಪುರದಲ್ಲಿ, ಉತ್ತರ ಪ್ರದೇಶ ಸರ್ಕಾರದ ಆಯುಷ್ ರಾಜ್ಯ ಸಚಿವರಾದ ಧರಂ ಸಿಂಗ್ ಸೈನಿ ಮತ್ತು ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿ (ಎನ್ ಎಮ್ ಪಿ ಬಿ)ಯ ಸಂಶೋಧನಾ ಅಧಿಕಾರಿ, ಸುನಿಲ್ ದತ್ ಮತ್ತು ಆಯುಷ್ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದ್ದರು. ಔಷಧೀಯ ಸಸ್ಯಗಳನ್ನು ಬೆಳೆಸುವ ರೈತರನ್ನು ಉತ್ತರ ಪ್ರದೇಶದ ಆಯುಷ್ ರಾಜ್ಯ ಸಚಿವರಾದ ಧರಂ ಸಿಂಗ್ ಸೈನಿ ಅವರು ಸನ್ಮಾನಿಸಿದರು. ಸಮೀಪದ ಹಲವು ಜಿಲ್ಲೆಗಳಿಂದ ಬಂದ 150 ರೈತರಿಗೆ ಔಷಧೀಯ ಸಸ್ಯಗಳನ್ನು ಉಚಿತವಾಗಿ ವಿತರಿಸಲಾಯಿತು. ಇವುಗಳಲ್ಲಿ ಮುಖ್ಯವಾಗಿ 5 ಜಾತಿಯ ಈ ಸಸ್ಯಗಳು ಸೇರಿವೆ - ಪಾರಿಜಾತ, ಗೋಲ್ಡನ್ ಆಪಲ್ (ಬೆಲ್), ಬೇವಿನ, ಭಾರತೀಯ ಜಿನ್ಸೆಂಗ್ (ಅಶ್ವಗಂಧ) ಮತ್ತು ಇಂಡಿಯನ್ ಬ್ಲ್ಯಾಕ್ ಬೆರಿ (ಜಾಮೂನ್). 750 ಜಾಮೂನ್ ಸಸಿಗಳನ್ನು ರೈತರಿಗೆ ಪ್ರತ್ಯೇಕವಾಗಿ ವಿತರಿಸಲಾಗಿದೆ.

ಕೇಂದ್ರ ಆಯುಷ್ ಸಚಿವರಾದ ಸರ್ಬಾನಂದ ಸೋನೊವಾಲ್ ದೇಶವು ಔಷಧೀಯ ಸಸ್ಯಗಳ ಕ್ಷೇತ್ರದಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ ಮತ್ತು 75000 ಹೆಕ್ಟೇರ್ ಭೂಮಿಯಲ್ಲಿ ಔಷಧೀಯ ಸಸ್ಯಗಳ ಕೃಷಿಯು ದೇಶದಲ್ಲಿ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸುತ್ತದೆ ಮತ್ತು ಇದು ರೈತರಿಗೆ ದೊಡ್ಡ ಆದಾಯದ ಮೂಲವಾಗಿದೆ ಎಂದು ಹೇಳಿದರು. ಇದು ಔಷಧಿ ಕ್ಷೇತ್ರದಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಕಳೆದ 1.5 ವರ್ಷಗಳಲ್ಲಿ, ಗಮನಾರ್ಹವಾಗಿ, ಔಷಧೀಯ ಸಸ್ಯಗಳ ಮಾರುಕಟ್ಟೆ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ದೊಡ್ಡ ರೀತಿಯಲ್ಲಿ ಹೆಚ್ಚಾಗಿದೆ. ಈ ಕಾರಣದಿಂದಾಗಿ ಅಶ್ವಗಂಧವು ಅಮೆರಿಕದಲ್ಲಿ ಮೂರನೆಯ ಅತಿ ಹೆಚ್ಚು ಮಾರಾಟವಾದ ಉತ್ಪನ್ನವಾಗಿದೆ.

'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಡಿಯಲ್ಲಿ ನಡೆಯುತ್ತಿರುವ ಮುಂದಿನ ಕಾರ್ಯಕ್ರಮಗಳಲ್ಲಿ ವೈ ಬ್ರೇಕ್ ಆ್ಯಪ್ ಬಿಡುಗಡೆ, ರೋಗನಿರೋಧಕ ಆಯುಷ್ ಔಷಧಗಳ ವಿತರಣೆ,' ʼಆಯುಷ್ ಆಪ್ಕೆ ದ್ವಾರ್' ಕಾರ್ಯಕ್ರಮ ಮತ್ತು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ಸರಣಿಗಳು ಸೇರಿವೆ. ವೈ ಬ್ರೇಕ್ ಆ್ಯಪ್‌ನಲ್ಲಿ ಉಪನ್ಯಾಸ ಸರಣಿ ಮತ್ತು ವೆಬಿನಾರನ್ನು ಸೆಪ್ಟೆಂಬರ್ 5 ರಂದು ಆಯೋಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+