ಜಾಗತಿಕ ಆರೋಗ್ಯ ಸಮಸ್ಯೆ ನೀಗಿಸುವ ಶಕ್ತಿ ರಾಗಿಗೆ ಇದೆ: ಪಿಯುಷ್ ಗೋಯಲ್
ಬೆಂಗಳೂರು, ಡಿಸೆಂಬರ್ 06: ಅಪೌಷ್ಠಿಕತೆಯ ಜಾಗತಿಕ ಸಮಸ್ಯೆಯನ್ನು ಪರಿಹರಿಸಲು ಮತ್ತು ಆಹಾರ ಭದ್ರತೆ ಸಮಸ್ಯೆಗಳನ್ನು ಎದುರಿಸುತ್ತಿರುವ ವಿಶ್ವದ ಭಾಗಗಳಿಗೆ ಕೈಗೆಟುಕುವ ಆಹಾರವನ್ನು ಕೊಂಡೊಯ್ಯಲು ರಾಗಿ ಸಹಾಯ ಮಾಡುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ತಿಳಿಸಿದರು.
ವಿಶ್ವಸಂಸ್ಥೆಯು 2023 ವರ್ಷವನ್ನು 'ಅಂತಾರಾಷ್ಟ್ರೀಯ ರಾಗಿ ವರ್ಷ' ಎಂದು ಗೊತ್ತುಪಡಿಸಿದೆ. ಈ ಪ್ರಯುಕ್ತ ನಡೆದ ಪೂರ್ವಭಾವಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ರಾಗಿಯನ್ನು ಜಾಗತಿಕ ಮಾರುಕಟ್ಟೆ ಹೇರಳವಾಗಿ ಮಾರಾಟ ಮಾಡುವ ವಿಚಾರವನ್ನು ಉದ್ಯಮಿಗಳು, ವರ್ತಕರ ಮುಂದೆ ಪ್ರಸ್ತಾಪಿಸಿದ್ದಾರೆ. ಹೊಸ ಮಾರುಕಟ್ಟೆಗಳಲ್ಲಿ ರಾಗಿ ಮಾರಾಟ ವಿಸ್ತರಿಸುವ ಮೂಲಕ ರಾಗಿ ಕೃಷಿಯನ್ನು ಸುಸ್ಥಿರವಾಗಿಸಬೇಕು ಎಂದರು.
ಭಾರತವು ಜಾಗತಿಕ ಮಟ್ಟದಲ್ಲಿ ಶೇ.20ರಷ್ಟು ಭಾರತದ ಮಟ್ಟಿಗೆ ಎಲ್ಲ ಕೃಷಿ ಉತ್ಪಾದನೆಗಳ ಪೈಕಿ ಶೇ.5ರಷ್ಟು ರಾಗಿ ಉತ್ಪಾದಿಸುತ್ತದೆ. ಈ ರಾಗಿಯು ಅಪೌಷ್ಟಿಕತೆಯ ಜಾಗತಿಕ ಸಮಸ್ಯೆ ಪರಿಹರಿಸಲು ಶಕ್ತಿ ಹೊಂದಿದೆ. ಅಷ್ಟೇ ಅಲ್ಲದೇ ಆಹಾರ ಭದ್ರತೆ ಸಮಸ್ಯೆಗಳನ್ನು ಎದುರಿಸುತ್ತಿರುವ ವಿಶ್ವದ ಭಾಗಗಳಿಗೆ ಕೈಗೆಟುಕುವ ಆಹಾರ ಧಾನ್ಯವಾಗಿದೆ. ಮುಖ್ಯವಾಗಿ ರಾಗಿ ಆರೋಗ್ಯಕರವಾದ ಕೃಷಿ ಉತ್ಪನ್ನವಾಗಿದೆ. ವರ್ಷ ಮಧ್ಯಂತರ ಬೆಳೆಯು ಆಗಿರುವ ರಾಗಿಯ ಹುಲ್ಲು ಜಾನುವಾರುಗಳಿಗೆ ಮೇವಾಗಿ ಲಾಭ ನೀಡಲಿದೆ ಎಂದು ಸಚಿವರು ವಿವರಿಸಿದರು.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ರಿಸರ್ಚ್ ಸಂಸ್ಥೆಯು ರಾಗಿ ಉತ್ಪನ್ನಗಳಿಗೆ ಪೂರಕವಾದ 250 ಸ್ಟಾರ್ಟ್ಅಪ್ಗಳಿಗೆ ಬೆಂಬಲ ನೀಡುತ್ತಿದೆ ಎಂದರು.
ಅತ್ಯಧಿಕ ರಾಗಿ ರಫ್ತಿಗೆ ಗುರಿ ಹೊಂದಿರುವ ಭಾರತ
ಇದೇ ಸಮಾರಂಭದಲ್ಲಿ ಮಾತನಾಡಿದ ವಾಣಿಜ್ಯ ಕಾರ್ಯದರ್ಶಿ ಸುನಿಲ್ ಬರ್ತ್ವಾಲ್ ಅವರು, ಭಾರತದ ರಾಗಿ ರಫ್ತು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಸಕ್ತದಲ್ಲಿ 15 ಮಿಲಿಯನ್ ಡಾಲರ್ನಷ್ಟು ರಫ್ತಾಗುತ್ತಿರುವ ರಾಗಿಯನ್ನು ಮುಂದಿನ ದಿನಗಳಲ್ಲಿ ಭಾರತ 100 ಮಿಲಿಯನ್ ಡಾಲರ್ ನಷ್ಟು ರಾಗಿ ರಫ್ತಿಗೆ ಗುರಿ ಹೊಂದಿದೆ. ಭಾರತ ಮುಂದಿನ 2-3 ವರ್ಷಗಳಲ್ಲಿ ಈ ಗುರಿಯನ್ನು ಸುಲಭವಾಗಿ ತಲುಪಲಿದೆ ಎಂದು ತಿಳಿಸಿದೆ.

ಭಾರತದ ರಾಗಿ ಉತ್ಪಾದಕರು ಭಾಗವಹಿಸುವ 16 ಅಂತಾರಾಷ್ಟ್ರೀಯ ಮೇಳಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಗುರುತಿಸಿದೆ. ಜಾಗತಿಕ ಮಾರುಕಟ್ಟೆಗೆ ರಾಗಿ ತಲುಪಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ಬಾರ್ತ್ವಾಲ್ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications