ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರೊಂದಿಗೆ ಒಂದು ದಿನ; ಭತ್ತ ನಾಟಿ ಮಾಡಿದ ಕೃಷಿ ಸಚಿವರು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 12: ರೈತರೊಂದಿಗೆ ಒಂದು ದಿನ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಕೃಷಿ ಸಚಿವ ಬಿ. ಸಿ. ಪಾಟೀಲ್ ದಾವಣಗೆರೆಯಲ್ಲಿ ಗೋ ಪೂಜೆ ಮಾಡಿದರು. ರೈತರ ಗದ್ದೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿಗೆ ಚಾಲನೆಯನ್ನು ನೀಡಿದರು.

ಮಂಗಳವಾರ ಕೃಷಿ ಸಚಿವರು ಹೊನ್ನಾಳಿ ತಾಲೂಕಿನ ಶ್ರೀನಿವಾಸ್ ಎಂಬುವರ ಹೊಲದಲ್ಲಿ ಪ್ರಗತಿಪರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 ಕೃಷಿ ಕಾಯ್ದೆ ವಾಪಸ್ ಪಡೆದರೆ ಮಾತ್ರ, ಮನೆಗೆ ವಾಪಸ್ ಎಂದ ರೈತ ಮುಖಂಡರು! ಕೃಷಿ ಕಾಯ್ದೆ ವಾಪಸ್ ಪಡೆದರೆ ಮಾತ್ರ, ಮನೆಗೆ ವಾಪಸ್ ಎಂದ ರೈತ ಮುಖಂಡರು!

ಕಮ್ಮಾರಗಟ್ಟೆಯಲ್ಲಿ ರೈತರೊಂದಿಗೆ ಒಂದು ದಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಗೋಪೂಜೆ ನೆರವೇರಿಸಿದರು. ಬಳಿಕ ರೈತರೊಂದಿಗೆ ಚರ್ಚೆ ನಡೆಸಿದರು. ಗೋಮೂತ್ರದಿಂದ ಜೀವಾಮೃತ ಮಾಡಿ ಅಡಿಕೆ ಮರಗಳಿಗೆ ಸಿಂಪರಣೆ ಮಾಡಿ. ರಾಸಾಯನಿಕ ಮುಕ್ತ ಬೆಳೆ ಬೆಳೆಯುವುದಕ್ಕೆ ಮತ್ತು ಸಾವಯವ ಬೆಳೆಗಳನ್ನು ಬೆಳೆಯುವುದಕ್ಕೆ ಉತ್ತೇಜನ ನೀಡಿದರು.

ತುಂಡು ಜಮೀನು, ವಿವಿಧ ಬೆಳೆ; ಮಾದರಿಯಾದ ಕೋಲಾರದ ರೈತ ತುಂಡು ಜಮೀನು, ವಿವಿಧ ಬೆಳೆ; ಮಾದರಿಯಾದ ಕೋಲಾರದ ರೈತ

Minister BC Patil Launched Rice Transplanter Machine

"ಸಾವಯವ ಕೃಷಿಯಲ್ಲಿ ಬೆಳೆದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಒಳ್ಳೆಯದು ಮತ್ತು ಗೋಮೂತ್ರದಿಂದ ಮಾಡಿದಂಥ ಔಷಧಿ ಸೇವಿಸಿದರೆ ಕೆಮ್ಮು, ಶೀತಜ್ವರ ಬರುವುದಿಲ್ಲ. ಗೋಮೂತ್ರ ಬೆಳೆಗಳಿಗೆ ಹಾಕುವುದರಿಂದ ರೋಗ ನಿರೋಧಕ ಶಕ್ತಿ ಬೆಳೆಗಳಿಗೆ ಬರುತ್ತದೆ, ಸಸ್ಯಗಳು ಬಲಿಷ್ಠವಾಗಿ ಆರೋಗ್ಯವಾಗಿ ಇಳುವರಿಯನ್ನು ಕೊಡುತ್ತವೆ" ಎಂದರು.

 ಕೇಂದ್ರ ಸಚಿವರ ಊಟದ ಆಹ್ವಾನ ತಿರಸ್ಕರಿಸದ ರೈತ ಮುಖಂಡರು: ನೀವು ನಿಮ್ಮ ಆಹಾರ ಸೇವಿಸಿ, ನಾವು ನಮ್ಮ ಆಹಾರ ತಿನ್ನುತ್ತೇವೆ! ಕೇಂದ್ರ ಸಚಿವರ ಊಟದ ಆಹ್ವಾನ ತಿರಸ್ಕರಿಸದ ರೈತ ಮುಖಂಡರು: ನೀವು ನಿಮ್ಮ ಆಹಾರ ಸೇವಿಸಿ, ನಾವು ನಮ್ಮ ಆಹಾರ ತಿನ್ನುತ್ತೇವೆ!

"ಭತ್ತ ನಾಟಿಯನ್ನು ಮಾಡಲು ಹೆಚ್ಚಿನ ಜನರು ಬೇಕಾಗಿತ್ತು. ಅತ್ಯಾಧುನಿಕ ಯಂತ್ರವನ್ನು ಉಪಯೋಗಿಸಿ ನಾಟಿ ಮಾಡಿದರೆ ಕಾರ್ಮಿಕ ಸಮಸ್ಯೆ ಪರಿಹಾರವಾಗುತ್ತದೆ. ಹೆಚ್ಚಿನ ಇಳುವರಿಯನ್ನು ಸಹ ಪಡೆಯಬಹುದಾಗಿದೆ" ಎಂದು ಬಿ. ಸಿ. ಪಾಟೀಲ್ ಹೇಳಿದರು.

Minister BC Patil Launched Rice Transplanter Machine

ರೈತರ ಜೊತೆ ಸಂವಾದ ನಡೆಸಿದ ಸಚಿವರು, ರೈತ ಶ್ರೀನಿವಾಸ್ ಅವರನ್ನು ಸನ್ಮಾನಿಸಿದರು. ಜಿಲ್ಲಾ ಉಸ್ತವಾರಿ ಸಚಿವರಾದ ಬೈರತಿ ಬಸವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಮಾ ರಮೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಆರ್. ಮಹೇಶ್ ಇತರರು ಜೊತೆಗಿದ್ದರು.

English summary
Agriculture minister B. C. Patil launched the rice transplanter machine in Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X