ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 4700ರೂ

ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು, ಒಟ್ಟಾರೆ ದೇಶದಲ್ಲಿ 25 ಬಗೆಯ ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿದೆ. ಎಫ್ಎಸಿ ಜಾತಿಯ ಕೊಬ್ಬರಿಯ ಪ್ರತಿ ಕ್ವಿಂಟಾಲ್ಗೆ 2008ರಲ್ಲಿ ನಿಗದಿಪಡಿಸಲಾಗಿದ್ದ ಕನಿಷ್ಠ ಬೆಂಬಲ ಬೆಲೆಗಿಂತ ಈ ಬಾರಿ 790 ರೂ.ಗಳಷ್ಟು ಜಾಸ್ತಿ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ ಮತ್ತು 2009ನೇ ಸಾಲಿಗೆ ನಾರು ಸುಲಿದ ತೆಂಗಿನ ಪ್ರತಿ ಕ್ವಿಂಟಾಲ್ಗೆ 1200 ರೂ.ಗಳ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಅವರು ಉತ್ತರದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮನವಿಯ ಮೇರೆಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ಮೂಲಕ ಪ್ಲಾಂಟೇಷನ್ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಕೊಳ್ಳುತ್ತದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು, ಅದರಲ್ಲೂ ಬೇಗ ಕೊಳೆತುಹೋಗುವ ಬೆಳೆಗಳನ್ನು ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಕೊಂಡುಕೊಳ್ಳುತ್ತದೆ. ಒಳ್ಳೆಯ ಬೆಳೆ ಬಂದ ಸಂದರ್ಭದಲ್ಲಿ ಬೆಳೆಗಾರರಿಗೆ ನಷ್ಟವಾಗದಿರಲಿ ಎಂಬ ಉದ್ದೇಶದಿಂದ ಈ ರೀತಿಯ ಯೋಜನೆಯಡಿಯಲ್ಲಿ ಬೆಳೆದ ಉತ್ಪನ್ನಗಳನ್ನು ಕೊಂಡುಕೊಳ್ಳಲಾಗುತ್ತದೆ. ಒಂದುವೇಳೆ ಇದರಲ್ಲಿ ಯಾವುದಾದರೂ ನಷ್ಟ ಉಂಟಾದರೆ, ಅದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50-50ಆಧಾರದಲ್ಲಿ (ಪೂರ್ವಾಂಚಲ ರಾಜ್ಯಗಳಿಗೆ 75-25) ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಈ ವರ್ಷ ಮಾಡಿಕೊಂಡ ಮನವಿಯಂತೆ 6 ಸಾವಿರ ಮೆಟ್ರಿಕ್ ಟನ್ ಬಿಳಿ ಅಡಿಕೆ ಮತ್ತು 4 ಸಾವಿರ ಮೆ.ಟನ್ ಕೆಂಪು ಅಡಿಕೆಯನ್ನು ಪ್ರತಿ ಕ್ವಿಂಟಾಲ್ಗೆ ಕ್ರಮವಾಗಿ6,900ರೂ.ಗಳು ಮತ್ತು 8,900 ರೂ.ಗಳ ಬೆಲೆಯಲ್ಲಿ ದಿನಾಂಕ 1-03-2009ರಿಂದ 30-06-2009ರ ಅವಧಿಯಲ್ಲಿ ಕೊಂಡುಕೊಳ್ಳಲಾಗಿದೆ ಎಂದು ತಮ್ಮ ಪವಾರ್ ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಭತ್ತ, ಜೋಳ, ಬಾಜ್ರಾ, ಗೋವಿನ ಜೋಳ, ರಾಗಿ, ಗೋಧಿ, ಬಾರ್ಲಿ, ಹೆಸರು, ಅವರೆ, ತೊಗರಿ, ಉದ್ದು, ಹತ್ತಿ, ಶೇಂಗಾ, ಸೆಣಬು, ಸೋಯಾ ಅವರೆ, ಸೂರ್ಯಕಾಂತಿ, ಸ್ಯಾಫ್ ಫ್ಲವರ್, ತಂಬಾಕು, ಕೊಬ್ಬರಿ, ಸಿಪ್ಪೆ ಸುಲಿದ ತೆಂಗು, ಎಳ್ಳು ಸೇರಿದಂತೆ ಒಟ್ಟು 25 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
(ಎಜೆನ್ಸೀಸ್)
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications