ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 4700ರೂ

ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು, ಒಟ್ಟಾರೆ ದೇಶದಲ್ಲಿ 25 ಬಗೆಯ ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿದೆ. ಎಫ್ಎಸಿ ಜಾತಿಯ ಕೊಬ್ಬರಿಯ ಪ್ರತಿ ಕ್ವಿಂಟಾಲ್ಗೆ 2008ರಲ್ಲಿ ನಿಗದಿಪಡಿಸಲಾಗಿದ್ದ ಕನಿಷ್ಠ ಬೆಂಬಲ ಬೆಲೆಗಿಂತ ಈ ಬಾರಿ 790 ರೂ.ಗಳಷ್ಟು ಜಾಸ್ತಿ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ ಮತ್ತು 2009ನೇ ಸಾಲಿಗೆ ನಾರು ಸುಲಿದ ತೆಂಗಿನ ಪ್ರತಿ ಕ್ವಿಂಟಾಲ್ಗೆ 1200 ರೂ.ಗಳ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಅವರು ಉತ್ತರದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮನವಿಯ ಮೇರೆಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ಮೂಲಕ ಪ್ಲಾಂಟೇಷನ್ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಕೊಳ್ಳುತ್ತದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು, ಅದರಲ್ಲೂ ಬೇಗ ಕೊಳೆತುಹೋಗುವ ಬೆಳೆಗಳನ್ನು ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಕೊಂಡುಕೊಳ್ಳುತ್ತದೆ. ಒಳ್ಳೆಯ ಬೆಳೆ ಬಂದ ಸಂದರ್ಭದಲ್ಲಿ ಬೆಳೆಗಾರರಿಗೆ ನಷ್ಟವಾಗದಿರಲಿ ಎಂಬ ಉದ್ದೇಶದಿಂದ ಈ ರೀತಿಯ ಯೋಜನೆಯಡಿಯಲ್ಲಿ ಬೆಳೆದ ಉತ್ಪನ್ನಗಳನ್ನು ಕೊಂಡುಕೊಳ್ಳಲಾಗುತ್ತದೆ. ಒಂದುವೇಳೆ ಇದರಲ್ಲಿ ಯಾವುದಾದರೂ ನಷ್ಟ ಉಂಟಾದರೆ, ಅದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50-50ಆಧಾರದಲ್ಲಿ (ಪೂರ್ವಾಂಚಲ ರಾಜ್ಯಗಳಿಗೆ 75-25) ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಈ ವರ್ಷ ಮಾಡಿಕೊಂಡ ಮನವಿಯಂತೆ 6 ಸಾವಿರ ಮೆಟ್ರಿಕ್ ಟನ್ ಬಿಳಿ ಅಡಿಕೆ ಮತ್ತು 4 ಸಾವಿರ ಮೆ.ಟನ್ ಕೆಂಪು ಅಡಿಕೆಯನ್ನು ಪ್ರತಿ ಕ್ವಿಂಟಾಲ್ಗೆ ಕ್ರಮವಾಗಿ6,900ರೂ.ಗಳು ಮತ್ತು 8,900 ರೂ.ಗಳ ಬೆಲೆಯಲ್ಲಿ ದಿನಾಂಕ 1-03-2009ರಿಂದ 30-06-2009ರ ಅವಧಿಯಲ್ಲಿ ಕೊಂಡುಕೊಳ್ಳಲಾಗಿದೆ ಎಂದು ತಮ್ಮ ಪವಾರ್ ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಭತ್ತ, ಜೋಳ, ಬಾಜ್ರಾ, ಗೋವಿನ ಜೋಳ, ರಾಗಿ, ಗೋಧಿ, ಬಾರ್ಲಿ, ಹೆಸರು, ಅವರೆ, ತೊಗರಿ, ಉದ್ದು, ಹತ್ತಿ, ಶೇಂಗಾ, ಸೆಣಬು, ಸೋಯಾ ಅವರೆ, ಸೂರ್ಯಕಾಂತಿ, ಸ್ಯಾಫ್ ಫ್ಲವರ್, ತಂಬಾಕು, ಕೊಬ್ಬರಿ, ಸಿಪ್ಪೆ ಸುಲಿದ ತೆಂಗು, ಎಳ್ಳು ಸೇರಿದಂತೆ ಒಟ್ಟು 25 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
(ಎಜೆನ್ಸೀಸ್)
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications