'ಕಾಂಗ್ರೆಸ್ಗಿಂತಲೂ ಬಿಜೆಪಿಯಿಂದ ರೈತರ ಶೋಷಣೆ 4 ಪಟ್ಟು ಹೆಚ್ಚು'
ಚಂಡೀಗಡ, ಸೆಪ್ಟೆಂಬರ್ 25: ಕೇಂದ್ರ ಸರ್ಕಾರದ ಕೃಷಿ ಸಂಬಂಧಿ ಮಸೂದೆಗಳ ವಿರುದ್ಧ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ವಿವಿಧ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಕೆಲವು ರಾಜ್ಯಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆದಿವೆ.
ಕಾಂಗ್ರೆಸ್ಗಿಂತಲೂ ಭಾರತೀಯ ಜನತಾ ಪಕ್ಷವು ರೈತನ್ನು ನಾಲ್ಕು ಪಟ್ಟು ಹೆಚ್ಚು ಶೋಷಣೆ ಮಾಡುತ್ತಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಹರಿಯಾಣ ಅಧ್ಯಕ್ಷ ಗುರ್ನಮ್ ಸಿಂಗ್ ಚಾರುಣಿ ಆರೋಪಿಸಿದರು.
ಹರಿಯಾಣ ಪಂಚಕುಳದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜತೆ ತಮ್ಮ ಸಂಸ್ಥೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳೆರಡೂ ರೈತರನ್ನು ಶೋಷಿಸಿವೆ. ಆದರೆ ಇದುವರೆಗೂ ಬಿಜೆಪಿ ಮಾಡುತ್ತಿರುವ ಕೆಲಸಗಳು ಕಾಂಗ್ರೆಸ್ಗಿಂತಲೂ ನಾಲ್ಕು ಪಟ್ಟು ಹೆಚ್ಚು ಶೋಷಣೆ ಮಾಡುತ್ತಿದೆ. ಸರ್ಕಾರವು ದೊಡ್ಡ ಕಾರ್ಪೊರೇಟ್ಗಳ ಅನುಕೂಲತೆಗಾಗಿ ಕಾನೂನುಗಳನ್ನು ಮಾಡುತ್ತಿದೆ. ರೈತರ ಸಂಕಷ್ಟಗಳನ್ನು ಕೇಳಿಸಿಕೊಳ್ಳುವ ಮನಸ್ಥಿತಿ ಇಲ್ಲ ಎಂದು ಟೀಕಿಸಿದರು.

ಜನರು ಹಾಗೂ ರಾಜ್ಯಸಭೆಯ ಜನಪ್ರತಿನಿಧಿಗಳ ವಿರೋಧದ ನಡುವೆಯೂ ಸರ್ಕಾರವು ಮುಂದುವರಿದು ಹೊಸ ಕಾನೂನುಗಳನ್ನು ಮಾಡುತ್ತಿದೆ. ಜನರ ಅಹವಾಲುಗಳನ್ನೂ ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ. ಅವರು ಯಾರಿಗಾಗಿ ಕಾನೂನುಗಳನ್ನು ಮಾಡುತ್ತಿದ್ದಾರೆ? ದೊಡ್ಡ ಕಾರ್ಪೊರೇಟ್ ಕಂಪೆನಿಗಳಿಂದ ಚುನಾವಣೆಯ ದೇಣಿಗೆ ರೂಪದಲ್ಲಿ ಹಣ ಪಡೆಯುತ್ತಾರೆ ಮತ್ತು ಅವರಿಗೆ ಅನುಕೂಲವಾಗುವಂತೆ ಕಾನೂನುಗಳನ್ನು ಮಾಡುತ್ತಾರೆ ಎಂದು ಆರೋಪಿಸಿದರು.
ಹರಿಯಾಣದಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕುರುಕ್ಷೇತ್ರದಲ್ಲಿ ಕೆಲವೆಡೆ ರಸ್ತೆ ತಡೆ ನಡೆದವು. ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅಡ್ಡಿಯಾಗದೆ ಹೋದರೂ, ಕೆಲವು ಜಿಲ್ಲೆಗಳಲ್ಲಿ ಆಹಾರ ಮಾರುಕಟ್ಟೆಗಳು ಖಾಲಿ ಹೊಡೆಯುತ್ತಿದ್ದವು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications