ಕಳೆನಾಶಕದಿಂದ ರೈತನಿಗೆ ಕ್ಯಾನ್ಸರ್: ಮಾನ್ಸೆಂಟೊಗೆ $289 ಮಿಲಿಯನ್ ದಂಡ
ಸ್ಯಾನ್ ಫ್ರಾನ್ಸಿಸ್ಕೊ, ಆಗಸ್ಟ್ 11: ಕಳೆನಾಶಕ ಸಿಂಪಡಿಸಿ ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವ ವ್ಯಕ್ತಿಗೆ $289 ಮಿಲಿಯನ್ ಪರಿಹಾರ ನೀಡುವಂತೆ ಕೃಷಿ ಕ್ಷೇತ್ರದ ಬೃಹತ್ ಉದ್ಯಮ ಮಾನ್ಸೆಂಟೊಗೆ ಸೂಚಿಸಲಾಗಿದೆ.
ಮಾನ್ಸೆಂಟೊದ ಹರ್ಬಿಸೈಡ್ ಕಳೆನಾಶಕ ಔಷಧದಲ್ಲಿ ಆರೋಗ್ಯದ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ನೀಡಿರಲಿಲ್ಲ. ತಮ್ಮ ಹೊಲದಲ್ಲಿ ಅದನ್ನು ಪ್ರಯೋಗಿಸಿದ್ದರಿಂದ ತಾವು ಕ್ಯಾನ್ಸರ್ಗೆ ತುತ್ತಾಗಿದ್ದಾಗಿ ಡೆವೇಯ್ನ್ ಜಾನ್ಸನ್ (46) ಎಂಬುವವರು ಆರೋಪಿಸಿದ್ದರು.
ಇದನ್ನು ಕಂಪೆನಿಯ ನಿರ್ಲಕ್ಷ್ಯದ ಹೊಣೆಗಾರಿಕೆ ಎಂದು ತೀರ್ಮಾನಿಸಿದ ನ್ಯಾಯಾಧೀಶರ ತಂಡ, ಮಾನ್ಸೆಂಟೊಗೆ ಭಾರಿ ಮೊತ್ತದ ದಂಡ ವಿಧಿಸಿತು.

ನ್ಯಾಯಾಧೀಶರ ತೀರ್ಪು ಯಾವು ಹೂಡಿದ್ದ ದಾವೆಗಿಂತಲೂ ದೊಡ್ಡದನ್ನೇ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿರುವ ಜಾನ್ಸನ್, ಕಂಪೆನಿ ವಿರುದ್ಧ ಈ ರೀತಿ ಬಾಕಿ ಉಳಿದಿರುವ ಸಾವಿರಾರು ದಾವೆಗಳಿಗೆ ಜೀವ ಬಂದಂತಾಗಿದೆ. ಜತೆಗೆ ಇದರ ಬಗ್ಗೆ ರಾಷ್ಟ್ರಮಟ್ಟದ ಗಮನ ಸೆಳೆಯಲು ಸಾಧ್ಯವಾಗಿದೆ ಎಂದಿದ್ದಾರೆ.
ಸುಮಾರು ಒಂದೂವರೆ ತಿಂಗಳು ಸತತವಾಗಿ ನಡೆದ ವಿಚಾರಣೆಯಲ್ಲಿ, ತನ್ನ ಔಷಧವು ಸುರಕ್ಷಿತವಾಗಿದ್ದು, ಅದರಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ಮಾನ್ಸೆಂಟೊ ವಾದಿಸಿತ್ತು.
ಗ್ಲಿಫೋಸೇಟ್ ಅಂಶವು ಮನುಷ್ಯರಲ್ಲಿ ಕ್ಯಾನರ್ ಉಂಟುಮಾಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆಯು ತಿಳಿಸಿದೆ.
ಆದರೆ, ಗ್ಲಿಫೋಸೇಟ್ ಕ್ಯಾನ್ಸರ್ಕಾರಕವಲ್ಲ ಎಂದು ಮಾನ್ಸೆಂಟೊ ವಾದಿಸಿದೆ. ಹಾಗೂ ಜಾನ್ಸನ್ ಅವರಿಗೆ ಅದರಿಂದ ಕ್ಯಾನ್ಸರ್ ಬಂದಿಲ್ಲ. ಈ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದೇವೆ ಎಂದು ಅದು ತಿಳಿಸಿದೆ.
ಮಾನ್ಸೆಂಟೊದ ಹರ್ಬಿಸೈಡ್ ಅನ್ನು 130 ದೇಶಗಳು ನೋಂದಣಿ ಮಾಡಿಕೊಂಡಿದ್ದು, 100ಕ್ಕೂ ಹೆಚ್ಚು ಬೆಳೆಗಳಿಗೆ ಬಳಸಲು ಅನುಮತಿ ನೀಡಲಾಗಿದೆ.
ಭಾರತದಲ್ಲಿಯೂ ಕುಲಾಂತರಿ ತಳಿಗಳನ್ನು ಪರಿಚಯಿಸುವ ಮಾನ್ಸೆಂಟೊ ಕಂಪೆನಿಯ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿದೆ. ಅದರ ಕೀಟನಾಶಕ ಔಷಧಗಳು ಜೀವಕ್ಕೆ ಅಪಾಯಕಾರಿ ಎಂದು ಸಾವಯವ ಕೃಷಿ ಹೋರಾಟಗಾರರು, ಅನೇಕ ವಿಜ್ಞಾನಿಗಳು ಧ್ವನಿ ಎತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications