ಹೆಚ್ಚಾಯಿತು ಮಳೆ: ಈರುಳ್ಳಿ ಬೆಳೆಯ ರೋಗ, ಕೀಟಗಳ ನಿರ್ವಹಣಾ ಕ್ರಮಗಳು
ಚಿತ್ರದುರ್ಗ, ಆಗಸ್ಟ್ 20: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಮಳೆ ರೈತರಿಗೆ ಸಂತಸದ ಜೊತೆ ಸಂಕಷ್ಟ ತಂದಿದೆ. ಕೆಲವು ಬೆಳೆಗಳಿಗೆ ಮಳೆ ಅನುಕೂಲವಾಗಿದ್ದರೆ ಇನ್ನೂ ಕೆಲವು ಬೆಳಗಳಿಗೆ ರೋಗ, ಕೀಟದ ಬಾಧೆ ಕಾಡುತ್ತಿದೆ. ಕೆಲವು ಬೆಳೆಗಳು ಕೊಳೆತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ ಬೆಳೆಗೂ ರೋಗ ಬಾಧೆ ಕಂಡು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಜಿಲ್ಲೆಯಲ್ಲಿ ಈರುಳ್ಳಿ ಬೆಳೆಗಳಿಗೆ ರೋಗ, ಕೀಟ ಬಾಧೆ ಕಂಡುಬಂದ ಕುರಿತು ಮಾಹಿತಿ ಸಂಗ್ರಹ ಮಾಡಿದ್ದಾರೆ. ಈರುಳ್ಳಿ ಜಿಲ್ಲೆಯ ಪ್ರಮುಖ ಬೆಳೆಯಾಗಿರುತ್ತದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9,461 ಹೆಕ್ಟೇರ್, ಚಳ್ಳಕೆರೆ 11,299 ಹೆಕ್ಟೇರ್, ಹೊಳಲ್ಕೆರೆ 1,777 ಹೆಕ್ಟೇರ್, ಹಿರಿಯೂರು 5,991 ಹೆಕ್ಟೇರ್, ಹೊಸದುರ್ಗ 3,300 ಹೆಕ್ಟೇರ್, ಮೊಳಕಾಲ್ಮೂರು 819 ಹೆಕ್ಟೇರ್ ಒಟ್ಟಾರೆ ಜಿಲ್ಲೆಯಲ್ಲಿ 32,646 ಹೆಕ್ಟೇರ್ನಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜಿಟಿಜಿಟಿ ಮಳೆಯಿಂದಾಗಿ ಹೊಸದುರ್ಗ ತಾಲ್ಲೂಕಿನಲ್ಲಿ ಮಣ್ಣಿನ ತೇವಾಂಶ ಹೆಚ್ಚಾಗಿ ಈರುಳ್ಳಿ ಬೆಳೆಗಳಿಗೆ ಥ್ರಿಪ್ಸ್ ನುಶಿ ಕೀಟ ಮತ್ತು ನೇರಳೆ ಎಲೆ ಮಚ್ಚೆ ರೋಗ ಬಾಧೆ ಹೆಚ್ಚಾಗಿದ್ದು, ರೋಗ ಮತು ಕೀಟ ಬಾಧೆಯಿಂದ ಬೆಳೆಯನ್ನು ರಕ್ಷಿಸಲು, ರೋಗ ನಿರ್ವಹಣೆ ಮಾಡಲು ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ.
ಈರುಳ್ಳಿ ಬೆಳೆ ರಕ್ಷಣೆ: ಈರುಳ್ಳಿ ಬೆಳೆಗೆ ಥ್ರಿಪ್ಸ್ ನುಶಿಗಳು ಎಲೆಯ ಮೇಲೆ ಹೆಚ್ಚಾಗಿ ಕಂಡುಬರುತ್ತದೆ. ಎಲೆಗಳ ಸುಳಿಯಲ್ಲಿ ಮತ್ತು ಎಲೆಗಳ ಕೆಳಗೆ ಕುಳಿತು ರಸ ಹೀರುತ್ತವೆ. ಎಲೆಗಳ ಮೇಲೆ ಬಿಳಿ ಬಿಳಿಯಾದ ಮಚ್ಚೆಗಳು ಕಾಣಿಸುತ್ತವೆ, ನಂತರ ಗಿಡ ತುದಿಯಿಂದ ಒಣಗುತ್ತವೆ.
ಥ್ರಿಪ್ಸ್ ನುಶಿ ನಿರ್ವಹಣೆಗೆ ಬಿತ್ತಿದ 3 ವಾರಗಳ ನಂತರ ಬೆಳೆಗೆ 0.25 ಮಿಲಿ ಇಮಿಡಾಕ್ಲೋಪ್ರಿಡ್ ಅಥವಾ 1.7 ಮಿ.ಲೀ ಡೈಮಿಥೋಯೇಟ್ 30 ಇ.ಸಿ ಅಥವಾ 0.5 ಮಿ.ಲೀ ಫಾಸ್ಪಾಮಿಡಾನ್ 85 ಡಬ್ಲ್ಯು ಎಸ್.ಸಿ ಅಥವಾ 1.3 ಮಿ.ಲೀ ಆಕ್ಸಿಡೆಮೆಟಾನ್ ಮಿಥೈಲ್ 1 ಲೀ. ನೀರಿನಲ್ಲಿ ಕರಗಿಸಿ ಸಿಂಪಡಿಸಬೇಕು.
ಬಿತ್ತನೆಯಾದ 6 ವಾರಗಳ ನಂತರ ಕ್ರಮಾಂಕ 1ರಲ್ಲಿ ಸೂಚಿಸಲಾದ ಸಿಂಪಡನೆಯನ್ನು ಮತ್ತೆ ಮಾಡಬೇಕು, ಪ್ರತಿ ಹೆಕ್ಟೇರಿಗೆ 360 ಲೀ.ಸಿಂಪಡಣಾ ದ್ರಾವಣ ಬಳಸಬೇಕು. ಬಿತ್ತನೆಯಾದ 9 ಮತ್ತು 11 ವಾರಗಳ ನಂತರ ಕ್ರಮಾಂಕ 1ರಲ್ಲಿ ಸೂಚಿಸಿಲಾದ ದ್ರಾವಣವನ್ನೇ ಪ್ರತಿ ಹೆಕ್ಟೇರಿಗೆ 450 ಲೀ. ಸಿಂಪಡಿಸಬೇಕು.
ನೇರಳೆ ಎಲೆ ಮಚ್ಚೆ ರೋಗವು ಮೊದಲಿಗೆ ಬಿಳಿ ಭಾಗದಿಂದ, ನೇರಳೆ ಭಾಗಕ್ಕೆ ಪರಿವರ್ತನೆಗೊಂಡು, ಆಮೇಲೆ ಎಲೆಗಳು ಒಣಗುತ್ತವೆ. ನೇರಳೆ ಎಲೆ ಮಚ್ಚೆ ರೋಗ ನಿರ್ವಹಣೆಗೆ ಬೀಜವನ್ನು ಪಾದರಸ ಸಂಯುಕ್ತ ವಸ್ತು ಅಥವಾ ಕ್ಯಾಪ್ಟಾನ್ (2 ಗ್ರಾಂ ಪ್ರತಿ ಕಿ.ಗ್ರಾಂ ಬೀಜಕ್ಕೆ)ದಿಂದ ಉಪಚರಿಸಬೇಕು.
ಹೊಸದುರ್ಗ ತಾಲ್ಲೂಕಿನಲ್ಲಿ ಕಪ್ಪು ಮಣ್ಣಿನಲ್ಲಿ ಈರುಳ್ಳಿ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಜಿಟಿಜಿಟಿ ಮಳೆಯಿಂದಾಗಿ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ನೇರಳೆ ಎಲೆ ಮಚ್ಚೆರೋಗ ಕಾಣಿಸಿಕೊಂಡಿದ್ದು ನೀರು ಇಂಗಲು ಸರಿಯಾದ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದು. 2ರಿಂದ 3 ವರ್ಷಕ್ಕೊಮ್ಮೆ ಬೆಳೆ ಬದಲಾವಣೆ ಮಾಡುವುದು.
ಸಿಸ್ಟೆಮ್ಯಾಟಿಕ್ ಶಿಲೀಂದ್ರ ನಾಶಕಗಳಾದ ಪ್ರೋಪಿಕೋನೋಜೋಲ್ 25 ಇ.ಸಿ 1 ಮಿ.ಲೀ. ಅಥವಾ ಹೆಕ್ಸಕೋನೋಜೋಲ್ 1 ಮಿ.ಲೀ. ಪ್ರತಿ ಲೀಟರ್ ನೀರಿನಲ್ಲಿ ಕರಗಿಸಿ ಜೊತೆಗೆ ಅಂಟು ದ್ರಾವಣ 0.25 ಮಿ.ಲೀ ಪ್ರತಿ ಲೀಟರ್ ನೀರಿಗ ಬೆರೆಸಿ 10 ದಿನಗಳಿಗೊಮ್ಮೆಯಾದರು ಶಿಲೀಂಧ್ರ ನಾಶಕಗಳನ್ನು ಸಿಂಪಡಿಸಬೇಕು.
ಈರುಳ್ಳಿ ಬೆಳೆಯ ರೋಗ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿರುವ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಕರೆ ನೀಡಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications