ಮಳೆ ಆರಂಭ; ಕುಸಿತ ಕಂಡ ಟೊಮೆಟೋ ಬೆಲೆ, ರೈತ ಕಂಗಾಲು
ಬೆಂಗಳೂರು, ಜುಲೈ 04; ನೈಋತ್ಯ ಮುಂಗಾರು ಅಬ್ಬರ ವಿವಿಧ ಜಿಲ್ಲೆಗಳಲ್ಲಿ ಆರಂಭವಾಗಿದೆ. ತರಕಾರಿಗಳ ಬೆಲೆಗಳಲ್ಲಿ ಏರಿಳಿತ ಆರಂಭವಾಗಿದೆ. 100 ರೂ. ಗಡಿ ದಾಟಿದ್ದ ಟೊಮೆಟೋ ಬೆಲೆ ಈಗ ಕೆ. ಜಿ. 10 ರಿಂದ 20 ರೂ. ತಲುಪಿದ್ದು, ರೈತ ಕಂಗಾಲಾಗಿದ್ದಾನೆ.
ಗಗನಕ್ಕೇರಿದ್ದ ಟೊಮೆಟೋ ಬೆಲೆ ಕಳೆದ ಒಂದು ವಾರದಿಂದ ಇಳಿಕೆ ಕಾಣಲು ಆರಂಭವಾಗಿತ್ತು. ಈಗ ಅದು ಭಾರೀ ಕುಸಿತ ಕಂಡಿದೆ. ದರ ಇಳಿಕೆಯಿಂದ ಜನರಿಗೆ ಅನುಕೂಲವಾದರೆ ರೈತರಿಗೆ ನಷ್ಟ ಉಂಟಾಗುತ್ತಿದೆ.
ಮುಂಗಾರು ಪೂರ್ವ ಅವಧಿಯಲ್ಲಿ ಸುರಿದ ಮಳೆ ಬೆಳೆ ನಷ್ಟಕ್ಕೆ ಕಾರಣವಾಗಿತ್ತು. ಇದರಿಂದಾಗಿ ಮಾರುಕಟ್ಟೆಗೆ ಟೊಮೆಟೋ ಬಾರದ ಹಿನ್ನಲೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೊಮೆಟೋ ಬೆಲೆ 100ರ ಗಡಿ ದಾಟಿತ್ತು.

ಈಗ ರೈತರು ಭಾರೀ ಪ್ರಮಾಣದಲ್ಲಿ ಟೊಮೆಟೋ ಬೆಳೆದಿದ್ದಾರೆ. ಮಾರುಕಟ್ಟೆಗೆ ಹೆಚ್ಚಿನ ಬೆಳೆ ಬರುತ್ತಿದೆ. ಆದರೆ ಬೆಲೆ ಕಡಿಮೆ ಆಗಿರುವುದು ರೈತರು ನಷ್ಟ ಅನುಭವಿಸುವಂತೆ ಮಾಡಿದೆ. ಮಳೆರಾಯ ಅಬ್ಬರಿಸುತ್ತಿರುವುದರಿಂದ ಬೆಲೆ ಇನ್ನೂ ಕಡಿಮೆಯಾಗಲಿದೆ ಎಂಬ ಆತಂಕ ರೈತರದ್ದು.
"ಹೊರ ರಾಜ್ಯಗಳು ಮತ್ತು ಹೊರ ಜಿಲ್ಲೆಗಳಿಂದ ಟೊಮೆಟೋ ಮಾರುಕಟ್ಟೆಗೆ ಬರುತ್ತಿದೆ. ಆದ್ದರಿಂದ ಬೆಲೆ ಇಳಿಕೆಯಾಗುತ್ತಿದೆ" ಎಂದು ತ್ಯಾಗರಾಜನಗರದ ತರಕಾರಿ ವ್ಯಾಪಾರಿ ಸತೀಶ್ ಅಭಿಪ್ರಾಯಪಟ್ಟಿದ್ದಾರೆ.

"ಕೋಲಾರದಲ್ಲಿ ಹೆಚ್ಚಾಗಿ ಟೊಮೆಟೋ ಬೆಳೆಯುತ್ತಾರೆ. ಮೇ ತಿಂಗಳಿನಿಂದ ಆಗಸ್ಟ್ ತನಕ ಅದು ಬೆಂಗಳೂರು ಮಾರುಕಟ್ಟೆಗೆ ಹೆಚ್ಚಾಗಿ ಬರುತ್ತದೆ. ಆದರೆ ಈ ಬಾರಿ ಬೇರೆ ಜಿಲ್ಲೆ ಮತ್ತು ಅಕ್ಕ-ಪಕ್ಕದ ರಾಜ್ಯಗಳ ಬೆಳೆ ಸಹ ಮಾರುಕಟ್ಟೆಗೆ ಬಂದಿದೆ. ಆದ್ದರಿಂದ ದರ ಇಳಿಕೆಯಾಗಿದೆ" ಎಂದು ಸತೀಶ್ ವಿಶ್ಲೇಷಿಸಿದರು.
ಏಪ್ರಿಲ್, ಮೇ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಭೂಮಿ ಹದವಾಗಿದ್ದು, ರೈತರು ಟೊಮೆಟೋ ಬೆಳೆದಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶ, ತೆಲಂಗಾಣದಲ್ಲಿಯೂ ಹೆಚ್ಚಿನ ಬೆಳೆ ಇದೆ. ಇದರಿಂದಾಗಿ ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ಟೊಮೆಟೋ ಬರುತ್ತಿದೆ ಎಂದು ಅಂದಾಜಿಸಲಾಗಿದೆ.
ರೈತರು ಕಂಗಾಲು; ಒಂದು ಕಡೆ ಭಾರೀ ಪ್ರಮಾಣದಲ್ಲಿನ ಬೆಳೆ, ಮತ್ತೊಂದು ಕಡೆ ಮಳೆ, ಮಗದೊಂದು ಕಡೆ ಆಷಾಢ ಮಾಸದ ಹಿನ್ನಲೆ ಒಂದು ತಿಂಗಳು ಶುಭ ಸಮಾರಂಭಗಳು ಕಡಿಮೆ. ಇದರಿಂದಾಗಿ ಟೊಮೆಟೋ ಬೆಲೆ ಸದ್ಯಕ್ಕೆ ಏರಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.
ಕರ್ನಾಟಕ ಮಾತ್ರವಲ್ಲ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಹೊಸ ಟೊಮೆಟೋ ಮಾರುಕಟ್ಟೆಗೆ ಬರಲು ಆರಂಭಿಸಿದ್ದು ಬೆಲೆ ಇಳಿಕೆ ಕಾಣುತ್ತಿದೆ. ಎರಡು ವಾರಗಳ ಹಿಂದೆ ಕೆ. ಜಿ. ಗೆ 60-70 ರೂ. ಇದ್ದ ಬೆಲೆ ಬಳಿಕ 30-40 ರೂ.ಗೆ ಕುಸಿದಿತ್ತು. ಈಗ ಅದು 10-20 ರೂ.ಗೆ ಬಂದಿದ್ದು, ಚಿಂತೆಗೆ ಕಾರಣವಾಗಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications