ಮಳೆ ಆರಂಭ; ಕುಸಿತ ಕಂಡ ಟೊಮೆಟೋ ಬೆಲೆ, ರೈತ ಕಂಗಾಲು
ಬೆಂಗಳೂರು, ಜುಲೈ 04; ನೈಋತ್ಯ ಮುಂಗಾರು ಅಬ್ಬರ ವಿವಿಧ ಜಿಲ್ಲೆಗಳಲ್ಲಿ ಆರಂಭವಾಗಿದೆ. ತರಕಾರಿಗಳ ಬೆಲೆಗಳಲ್ಲಿ ಏರಿಳಿತ ಆರಂಭವಾಗಿದೆ. 100 ರೂ. ಗಡಿ ದಾಟಿದ್ದ ಟೊಮೆಟೋ ಬೆಲೆ ಈಗ ಕೆ. ಜಿ. 10 ರಿಂದ 20 ರೂ. ತಲುಪಿದ್ದು, ರೈತ ಕಂಗಾಲಾಗಿದ್ದಾನೆ.
ಗಗನಕ್ಕೇರಿದ್ದ ಟೊಮೆಟೋ ಬೆಲೆ ಕಳೆದ ಒಂದು ವಾರದಿಂದ ಇಳಿಕೆ ಕಾಣಲು ಆರಂಭವಾಗಿತ್ತು. ಈಗ ಅದು ಭಾರೀ ಕುಸಿತ ಕಂಡಿದೆ. ದರ ಇಳಿಕೆಯಿಂದ ಜನರಿಗೆ ಅನುಕೂಲವಾದರೆ ರೈತರಿಗೆ ನಷ್ಟ ಉಂಟಾಗುತ್ತಿದೆ.
ಮುಂಗಾರು ಪೂರ್ವ ಅವಧಿಯಲ್ಲಿ ಸುರಿದ ಮಳೆ ಬೆಳೆ ನಷ್ಟಕ್ಕೆ ಕಾರಣವಾಗಿತ್ತು. ಇದರಿಂದಾಗಿ ಮಾರುಕಟ್ಟೆಗೆ ಟೊಮೆಟೋ ಬಾರದ ಹಿನ್ನಲೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೊಮೆಟೋ ಬೆಲೆ 100ರ ಗಡಿ ದಾಟಿತ್ತು.

ಈಗ ರೈತರು ಭಾರೀ ಪ್ರಮಾಣದಲ್ಲಿ ಟೊಮೆಟೋ ಬೆಳೆದಿದ್ದಾರೆ. ಮಾರುಕಟ್ಟೆಗೆ ಹೆಚ್ಚಿನ ಬೆಳೆ ಬರುತ್ತಿದೆ. ಆದರೆ ಬೆಲೆ ಕಡಿಮೆ ಆಗಿರುವುದು ರೈತರು ನಷ್ಟ ಅನುಭವಿಸುವಂತೆ ಮಾಡಿದೆ. ಮಳೆರಾಯ ಅಬ್ಬರಿಸುತ್ತಿರುವುದರಿಂದ ಬೆಲೆ ಇನ್ನೂ ಕಡಿಮೆಯಾಗಲಿದೆ ಎಂಬ ಆತಂಕ ರೈತರದ್ದು.
"ಹೊರ ರಾಜ್ಯಗಳು ಮತ್ತು ಹೊರ ಜಿಲ್ಲೆಗಳಿಂದ ಟೊಮೆಟೋ ಮಾರುಕಟ್ಟೆಗೆ ಬರುತ್ತಿದೆ. ಆದ್ದರಿಂದ ಬೆಲೆ ಇಳಿಕೆಯಾಗುತ್ತಿದೆ" ಎಂದು ತ್ಯಾಗರಾಜನಗರದ ತರಕಾರಿ ವ್ಯಾಪಾರಿ ಸತೀಶ್ ಅಭಿಪ್ರಾಯಪಟ್ಟಿದ್ದಾರೆ.

"ಕೋಲಾರದಲ್ಲಿ ಹೆಚ್ಚಾಗಿ ಟೊಮೆಟೋ ಬೆಳೆಯುತ್ತಾರೆ. ಮೇ ತಿಂಗಳಿನಿಂದ ಆಗಸ್ಟ್ ತನಕ ಅದು ಬೆಂಗಳೂರು ಮಾರುಕಟ್ಟೆಗೆ ಹೆಚ್ಚಾಗಿ ಬರುತ್ತದೆ. ಆದರೆ ಈ ಬಾರಿ ಬೇರೆ ಜಿಲ್ಲೆ ಮತ್ತು ಅಕ್ಕ-ಪಕ್ಕದ ರಾಜ್ಯಗಳ ಬೆಳೆ ಸಹ ಮಾರುಕಟ್ಟೆಗೆ ಬಂದಿದೆ. ಆದ್ದರಿಂದ ದರ ಇಳಿಕೆಯಾಗಿದೆ" ಎಂದು ಸತೀಶ್ ವಿಶ್ಲೇಷಿಸಿದರು.
ಏಪ್ರಿಲ್, ಮೇ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಭೂಮಿ ಹದವಾಗಿದ್ದು, ರೈತರು ಟೊಮೆಟೋ ಬೆಳೆದಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶ, ತೆಲಂಗಾಣದಲ್ಲಿಯೂ ಹೆಚ್ಚಿನ ಬೆಳೆ ಇದೆ. ಇದರಿಂದಾಗಿ ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ಟೊಮೆಟೋ ಬರುತ್ತಿದೆ ಎಂದು ಅಂದಾಜಿಸಲಾಗಿದೆ.
ರೈತರು ಕಂಗಾಲು; ಒಂದು ಕಡೆ ಭಾರೀ ಪ್ರಮಾಣದಲ್ಲಿನ ಬೆಳೆ, ಮತ್ತೊಂದು ಕಡೆ ಮಳೆ, ಮಗದೊಂದು ಕಡೆ ಆಷಾಢ ಮಾಸದ ಹಿನ್ನಲೆ ಒಂದು ತಿಂಗಳು ಶುಭ ಸಮಾರಂಭಗಳು ಕಡಿಮೆ. ಇದರಿಂದಾಗಿ ಟೊಮೆಟೋ ಬೆಲೆ ಸದ್ಯಕ್ಕೆ ಏರಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.
ಕರ್ನಾಟಕ ಮಾತ್ರವಲ್ಲ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಹೊಸ ಟೊಮೆಟೋ ಮಾರುಕಟ್ಟೆಗೆ ಬರಲು ಆರಂಭಿಸಿದ್ದು ಬೆಲೆ ಇಳಿಕೆ ಕಾಣುತ್ತಿದೆ. ಎರಡು ವಾರಗಳ ಹಿಂದೆ ಕೆ. ಜಿ. ಗೆ 60-70 ರೂ. ಇದ್ದ ಬೆಲೆ ಬಳಿಕ 30-40 ರೂ.ಗೆ ಕುಸಿದಿತ್ತು. ಈಗ ಅದು 10-20 ರೂ.ಗೆ ಬಂದಿದ್ದು, ಚಿಂತೆಗೆ ಕಾರಣವಾಗಿದೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications