ಮುಂಗಾರು ಮಳೆ: ರೈತರಿಗೆ ಆತಂಕ ಬೇಡ, ರಸಗೂಬ್ಬರ ದಾಸ್ತಾನು ಸಾಕಷ್ಟಿದೆ
ಶಿವಮೊಗ್ಗ, ಜೂನ್ 18: ನೈಋತ್ಯ ಮುಂಗಾರು ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗೆ ಚಾಲನೆ ಸಿಕ್ಕಿದೆ. ಆದರೆ ರೈತರು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ. ಕೃಷಿ ಇಲಾಖೆ ಈ ಕುರಿತು ನಿರಂತರವಾಗಿ ಗಮನವನ್ನು ಹರಿಸುತ್ತಿದೆ.
ಶಿವಮೊಗ್ಗ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿ. ಮೀ. ಆಗಿದೆ. ಜೂನ್ 15ರ ತನಕ ಜಿಲ್ಲೆಯಲ್ಲಿ ಸರಾಸರಿ 107.79 ಮಿ. ಮೀ. ಮಳೆ ದಾಖಲಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರು, ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ದಾಸ್ತಾನುಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
ರೈತರಿಗೆ ಕೃಷಿ ಇಲಾಖೆ ಅಭಯ: ಶಿವಮೊಗ್ಗ ಜಿಲ್ಲೆಯ ರೈತರು ಬೆಳೆಗಳಿಗೆ ಸಾಮಾನ್ಯವಾಗಿ ಸಾರಜನಕ ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರವನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆದರೆ ಈ ರಸಗೂಬ್ಬರದಲ್ಲಿ ಪೊಟ್ಯಾಷ್ ಅಂಶ ಇರುವುದಿಲ್ಲ.
ಪೊಟ್ಯಾಷ್ ಪೋಷಕಾಂಶಗಳು ಬೆಳೆಗಳ ಇಳುವರಿಯು ಹೆಚ್ಚಾಗುವಂತೆ ಮಾಡುತ್ತವೆ. ಈ ಕಾರಣಕ್ಕೆ ರೈತರು ಬಿತ್ತನೆ ಸಮಯದಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಅಂಶಗಳನ್ನು ಹೊಂದಿರುವ ರಸಗೂಬ್ಬರಗಳಾದ 10:26:26, 15:15:15, 12:36:16, 14:35:14, 17:17:17, 14:28:14, 19:19:19, 20:10:10 ಬಳಸುವುದು ಸೂಕ್ತ ಎಂದು ಕೃಷಿ ಇಲಾಖೆ ಹೇಳಿದೆ.
ರೈತರು ಬೆಳೆಗಳಿಗೆ ಸಾರಜನಕ ಹೆಚ್ಚು ಬಳಕೆ ಮಾಡುತ್ತಿದ್ದು. ಇದರಿಂದ ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆಗಳು ಹೆಚ್ಚು ಆಗುವ ಸಾಧ್ಯತೆ ಇರುವ ಕಾರಣ ಹವಾಮಾನ ಆಧರಿಸಿ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿ ಸಾರಜನಕ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಲಾಗಿದೆ.
ರೈತರು ಅಧಿಕೃತ ಮಾರಾಟಗಾರರಿಂದ ಬಿಲ್ ಪಡೆದು ಕೃಷಿ ಪರಿಕರಗಳನ್ನು ಖರೀದಿಸಬೇಕು ಹಾಗೂ ನಕಲಿ ಬಿತ್ತನೆ ಬೀಜ, ರಸಗೂಬ್ಬರ ಹಾಗೂ ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ದೂರು ಸಲ್ಲಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲಾಡಳಿತ ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುವವರ ಜೊತೆ ಸಭೆಯನ್ನು ನಡೆಸಿದೆ. ಸರಕಾರದಿಂದ ನಿಗದಿ ಮಾಡಿರುವ ದರವನ್ನು ಪಡೆಯಬೇಕು. ಹೆಚ್ಚುವರಿ ದರ ವಸೂಲಿ, ಕೃತಕ ಅಭಾವ ಸೃಷ್ಟಿಸಿದರೆ ಸಂಬಂದಿಸಿದ ಮಾರಾಟಗಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಲೈಸನ್ಸ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿಯೂ ಬರ ಆವರಿಸಿತ್ತು. ಆದರೆ ತಾಲೂಕುಗಳಲ್ಲಿ ಮೇ ತಿಂಗಳಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ರೈತರಲ್ಲಿ ಸಂತಸ ಮೂಡಿಸಿದೆ. ಉತ್ತಮವಾಗಿ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದಾದ ಕೀಟ/ ರೋಗ ಬಾಧೆ, ಅವಶ್ಯವಾದ ಕೀಟನಾಶಕಗಳನ್ನು ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿರುತ್ತದೆ. ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications