Get Updates
Get notified of breaking news, exclusive insights, and must-see stories!

ಮುಂಗಾರು ಮಳೆ: ರೈತರಿಗೆ ಆತಂಕ ಬೇಡ, ರಸಗೂಬ್ಬರ ದಾಸ್ತಾನು ಸಾಕಷ್ಟಿದೆ

ಶಿವಮೊಗ್ಗ, ಜೂನ್ 18: ನೈಋತ್ಯ ಮುಂಗಾರು ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗೆ ಚಾಲನೆ ಸಿಕ್ಕಿದೆ. ಆದರೆ ರೈತರು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ. ಕೃಷಿ ಇಲಾಖೆ ಈ ಕುರಿತು ನಿರಂತರವಾಗಿ ಗಮನವನ್ನು ಹರಿಸುತ್ತಿದೆ.

ಶಿವಮೊಗ್ಗ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿ. ಮೀ. ಆಗಿದೆ. ಜೂನ್‌ 15ರ ತನಕ ಜಿಲ್ಲೆಯಲ್ಲಿ ಸರಾಸರಿ 107.79 ಮಿ. ಮೀ. ಮಳೆ ದಾಖಲಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.

Monsoon Rains Enough Fertilizer Stock At Shivamogga

ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರು, ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ದಾಸ್ತಾನುಗೊಳಿಸಲಾಗಿದೆ" ಎಂದು ಹೇಳಿದ್ದಾರೆ.

ರೈತರಿಗೆ ಕೃಷಿ ಇಲಾಖೆ ಅಭಯ: ಶಿವಮೊಗ್ಗ ಜಿಲ್ಲೆಯ ರೈತರು ಬೆಳೆಗಳಿಗೆ ಸಾಮಾನ್ಯವಾಗಿ ಸಾರಜನಕ ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರವನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆದರೆ ಈ ರಸಗೂಬ್ಬರದಲ್ಲಿ ಪೊಟ್ಯಾಷ್ ಅಂಶ ಇರುವುದಿಲ್ಲ.

ಪೊಟ್ಯಾಷ್ ಪೋಷಕಾಂಶಗಳು ಬೆಳೆಗಳ ಇಳುವರಿಯು ಹೆಚ್ಚಾಗುವಂತೆ ಮಾಡುತ್ತವೆ. ಈ ಕಾರಣಕ್ಕೆ ರೈತರು ಬಿತ್ತನೆ ಸಮಯದಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಅಂಶಗಳನ್ನು ಹೊಂದಿರುವ ರಸಗೂಬ್ಬರಗಳಾದ 10:26:26, 15:15:15, 12:36:16, 14:35:14, 17:17:17, 14:28:14, 19:19:19, 20:10:10 ಬಳಸುವುದು ಸೂಕ್ತ ಎಂದು ಕೃಷಿ ಇಲಾಖೆ ಹೇಳಿದೆ.

ರೈತರು ಬೆಳೆಗಳಿಗೆ ಸಾರಜನಕ ಹೆಚ್ಚು ಬಳಕೆ ಮಾಡುತ್ತಿದ್ದು. ಇದರಿಂದ ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆಗಳು ಹೆಚ್ಚು ಆಗುವ ಸಾಧ್ಯತೆ ಇರುವ ಕಾರಣ ಹವಾಮಾನ ಆಧರಿಸಿ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿ ಸಾರಜನಕ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಲಾಗಿದೆ.

ರೈತರು ಅಧಿಕೃತ ಮಾರಾಟಗಾರರಿಂದ ಬಿಲ್ ಪಡೆದು ಕೃಷಿ ಪರಿಕರಗಳನ್ನು ಖರೀದಿಸಬೇಕು ಹಾಗೂ ನಕಲಿ ಬಿತ್ತನೆ ಬೀಜ, ರಸಗೂಬ್ಬರ ಹಾಗೂ ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ದೂರು ಸಲ್ಲಿಸುವಂತೆ ಮನವಿ ಮಾಡಲಾಗಿದೆ.

ಜಿಲ್ಲಾಡಳಿತ ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುವವರ ಜೊತೆ ಸಭೆಯನ್ನು ನಡೆಸಿದೆ. ಸರಕಾರದಿಂದ ನಿಗದಿ ಮಾಡಿರುವ ದರವನ್ನು ಪಡೆಯಬೇಕು. ಹೆಚ್ಚುವರಿ ದರ ವಸೂಲಿ, ಕೃತಕ ಅಭಾವ ಸೃಷ್ಟಿಸಿದರೆ ಸಂಬಂದಿಸಿದ ಮಾರಾಟಗಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಲೈಸನ್ಸ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿಯೂ ಬರ ಆವರಿಸಿತ್ತು. ಆದರೆ ತಾಲೂಕುಗಳಲ್ಲಿ ಮೇ ತಿಂಗಳಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ರೈತರಲ್ಲಿ ಸಂತಸ ಮೂಡಿಸಿದೆ. ಉತ್ತಮವಾಗಿ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದಾದ ಕೀಟ/ ರೋಗ ಬಾಧೆ, ಅವಶ್ಯವಾದ ಕೀಟನಾಶಕಗಳನ್ನು ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿರುತ್ತದೆ. ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+