ಮೋದಿಯ ಬುಲೆಟ್ ಟ್ರೇನ್ಗೆ ಕೆಂಪು ಬಾವುಟ ತೋರಿಸಿದ ರೈತರು
ನವದೆಹಲಿ, ಸೆಪ್ಟೆಂಬರ್ 20: ಕೇಂದ್ರ ಬಿಜೆಪಿ ಸರ್ಕಾರದ ಬಹು ನಿರೀಕ್ಷಿತ ಬುಲೆಟ್ ಟ್ರೇನ್ಗೆ ರೈತರು ಅಡ್ಡಗಾಲು ಹಾಕಿದ್ದಾರೆ. ಸಾವಿರಕ್ಕೂ ಹೆಚ್ಚು ರೈತರು ಬುಲೆಟ್ ಟ್ರೈನ್ ಯೋಜನೆ ವಿರುದ್ಧ ಗುಜರಾತ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಉದ್ದೇಶಿತ ಬುಲೆಟ್ ಟ್ರೇನ್ ಯೋಜನೆಗೆ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯದ 1400 ಹೆಕ್ಟೇರ್ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ 1200 ಹೆಕ್ಟೇರ್ ಜಮೀನು ಖಾಸಗಿಯದ್ದೇ ಆಗಿದೆ. ಸುಮಾರು 6000 ರೈತರು ಯೋಜನೆಗಾಗಿ ಭೂಮಿ ಬಿಟ್ಟುಕೊಡಬೇಕಾಗಿದೆ. ಇದಕ್ಕೆ ರೈತರು ತಕರಾರು ತೆಗೆದಿದ್ದಾರೆ.
ಬುಲೆಟ್ ರೈಲು ಯೋಜನೆಗೆ ಭೂಮಿ ನೀಡಲು ಒಪ್ಪದ ಸಾವಿರಕ್ಕೂ ಹೆಚ್ಚು ರೈತರು ಗುಜರಾತ್ ಹೈಕೋರ್ಟ್ಗೆ ಅಪೀಲು ಸಲ್ಲಿಸಿದ್ದು, ಹೈಕೋರ್ಟ್ ಈಗಾಗಲೇ ವಿಚಾರಣೆ ಮಾಡಲು ಒಪ್ಪಿಗೆ ಸೂಚಿಸಿದೆ. ತಮ್ಮ ಆಸರೆಯ ಭೂಮಿ ನುಂಗುವ ಬುಲೆಟ್ ರೈಲು ಯೋಜನೆಗೆ ತಡೆ ನೀಡಬೇಕು ಎಂಬುದು ರೈತರ ಆಗ್ರಹ.

1000 ಕ್ಕೂ ಹೆಚ್ಚು ರೈತರಿಗೆ ಆಕ್ಷೇಪ
ಪ್ರಸ್ತುತ ಸೂರತ್ನ ಐದು ಜನ ರೈತರು ಹಾಕಿರುವ ಪಿಟಿಶನ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 1000 ಕ್ಕೂ ಹೆಚ್ಚು ರೈತರು ಬುಲೆಟ್ ರೈಲಿನ ಯೋಜನೆಗೆ ಭೂಮಿ ನೀಡುವುದಿಲ್ಲ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಇದು ಕೇಂದ್ರ ಹಾಗೂ ಭೂಮಿ ಒತ್ತುವರಿ ಮಾಡಿಕೊಡಬೇಕಿದ್ದ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ.

ನಿಯಮ ಗಾಳಿಗೆ ತೂರಿದೆ ಗುಜರಾತ್ ಬಿಜೆಪಿ ಸರ್ಕಾರ
ಗುಜರಾತ್ ರಾಜ್ಯ ಬಿಜೆಪಿ ಸರ್ಕಾರವು ನಿಯಮಾವಳಿಗಳನ್ನು ಗಾಳಿಗೆ ತೂರಿ ಜಮೀನು ವಶಪಡಿಸಿಕೊಳ್ಳುತ್ತಿದೆ. ಅದು ಜೆಐಸಿಎ (ಜಪಾನ್ ಇಂಟರ್ನ್ಯಾಷನಲ್ ಕೋಪರೇಶನ್ ಏಜನ್ಸಿ) ನಿಯಮಾವಳಿಯಂತೆ ಭೂಮಿ ವಶಕ್ಕೆ ಮಾಡಿಕೊಳ್ಳುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಭೂ ಒತ್ತುವರಿ ನಿಯಮಗಳನ್ನು ತಿದ್ದಿರುವ ಆರೋಪ
ರೈತರು ಪ್ರಮುಖವಾಗಿ ಮೂರು ವಿಷಯಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಭೂಮಿ ಕಳೆದುಕೊಳ್ಳುವ ರೈತರ ಜೀವನದ ಮೇಲೆ ಆಗುವ ಪರಿಣಾಮದ ಲೆಕ್ಕಾಚಾರವನ್ನು ನಿರ್ಲಕ್ಷಿಸಲಾಗಿದೆ. ಭೂಮಿ ಒತ್ತುವರಿ ನಿಯಮಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಗಿದೆ, ಕಡಿಮೆ ಪರಿಹಾರ ಮೊತ್ತ ನೀಡಿ ರೈತರಿಂದ ಭೂಮಿ ವಶಪಡಿಸಿಕೊಳ್ಳಲಾಗುತ್ತಿದೆ.

ಮರಿಣಾಮದ ಪರಿಶೀಲನೆಗೆ ಸಮಿತಿಯನ್ನೇ ಮಾಡಿಲ್ಲ
ಜೆಐಸಿಎಯು ಪರಿಣಾಮದ ಅಂದಾಜಿಗೆ ಕಮಿಟಿ ಮಾಡಲು ಸೂಚಿಸಿತ್ತು. ಆದರೆ ಸರ್ಕಾರವು ಆ ರೀತಿಯ ಯಾವುದೇ ಸಮಿತಿಯನ್ನೇ ರಚಿಸಿಲ್ಲ ಎಂದು ಹೇಳಿದ್ದಾರೆ. ಜೆಐಸಿಎಯು ಮತ್ತೊಮ್ಮೆ ಯೋಜನೆಯಿಂದ ಇಲ್ಲಿ ಬದುಕುತ್ತಿರುವ ರೈತರ ಜವನದ ಮೇಲೆ ಆಗುವ ಪರಿಣಾಮದ ಬಗ್ಗೆ ವರದಿಯನ್ನು ತಯಾರು ಮಾಡಬೇಕು ಎಂದು ರೈತರು ಪತ್ರ ಬರೆದಿದ್ದಾರೆ.

ನಿಯಮಾವಳಿಗಳ ಬದಲಾವಣೆಗೆ ವಿರೋಧ
ಸರ್ಕಾರಿ ಯೋಜನೆಗಳಿಗೆ ಭೂಮಿ ವಶಪಡಿಸಿಕೊಳ್ಳುವ ನಿಯಮಾವಳಿಗಳನ್ನು ಬದಲಾಯಿಸಿರುವುದಕ್ಕೂ ರೈತರೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೋಜನೆಗೆ ಭೂಮಿ ವಶಪಡಿಸಿಕೊಳ್ಳುವ ಕಾರ್ಯದಲ್ಲಿ ಕೇಂದ್ರ ಮಧ್ಯ ಪ್ರವೇಶಿಸಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಭೂಮಿ ಒತ್ತುವರಿ ಆಗಬೇಕು ಎಂಬುದು ರೈತರ ಆಗ್ರಹ.

ಬುಲೆಟ್ ಟ್ರೈನ್ ಯೋಜನೆಯ ಮಾಹಿತಿ
ಬುಲೆಟ್ ಟ್ರೈನ್ ಯೋಜನೆಗೆ 2017ರಲ್ಲಿ ಜಪಾನ್ ಅಧ್ಯಕ್ಷ ಶಿಂಜೋ ಅಬೆ ಹಾಗೂ ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡಿದ್ದರು. 1.08 ಕೋಟಿ ಯ ಯೋಜನೆ ಇದಾಗಿದ್ದು, ಗುಜರಾತ್ನ ಅಹ್ಮದಾಬಾದ್ ನಿಂದ ಮುಂಬೈಗೆ ಬುಲೆಟ್ ಟ್ರೈನು ಸಂಪರ್ಕ ನೀಡಲಾಗುತ್ತದೆ. ಯೋಜನೆಗೆ ತಗುಲುವ ವೆಚ್ಚದ ಶೇ 80 ರಷ್ಟು ಹಣವನ್ನು ಜಪಾನ್ ಸರ್ಕಾರವು ದೀರ್ಘಾವದಿ ಸಾಲದ ರೂಪದಲ್ಲಿ ನೀಡುತ್ತಿದೆ. ಜೊತೆಗೆ ತಂತ್ರಜ್ಞಾನದ ನೆರವನ್ನೂ ನೀಡುತ್ತಿದೆ. 2022-2023 ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications