ದೆಹಲಿ ಚಲೋಗೆ ಹೊರಟಿದ್ದ ರಾಜ್ಯದ ನೂರಾರು ರೈತರು ಭೋಪಾಲ್ನಲ್ಲಿ ಪೊಲೀಸರ ವಶಕ್ಕೆ-ಮುಂದಾಗಿದ್ದೇನು?
ಚಾಮರಾಜನಗರ, ಫೆಬ್ರವರಿ, 12: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದ್ದ ಫೆಬ್ರವರಿ 13ರ ದೆಹಲಿ ಚಲೋ ಪ್ರತಿಭಟನೆಗೆ ತೆರಳಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನವದೆಹಲಿಗೆ ಪ್ರಯಾಣ ಬೆಳೆಸಿದ್ದ 130ಕ್ಕೂ ಅಧಿಕ ರೈತ ಹೋರಾಟಗಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಫೆಬ್ರವರಿ 12) ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರದಿಂದ ಕಬ್ಬು ಬೆಳೆಗಾರರ ಸಂಘದ ಮೂಕಹಳ್ಳಿ ಮಹಾದೇವಸ್ವಾಮಿ, ಮೂಡ್ಲುಪುರ ಶಿವಮೂರ್ತಿ, ರೇವಣ್ಣ, ಉಡಿಗಾಲ ಲೋಕೇಶ್, ಬಸವಣ್ಣ, ಶೀಲಾ, ಪುಷ್ಪಾ, ಕಲಾವತಿ ಸೇರಿದಂತೆ 30ಕ್ಕೂ ಅಧಿಕ ಮಂದಿ ತೆರಳಿದ್ದರು. ಮೈಸೂರಿನಿಂದಲೂ 70ಕ್ಕೂ ಹೆಚ್ಚು ಮಂದಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದರು. ಇವರೆಲ್ಲರನ್ನೂ ಇಂದು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರೈತರ ಸಾಲಮನ್ನಾ ಮಾಡಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ಎಂಎಸ್ಪಿ ನಿಗದಿಯಾಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶದ ಬಹುಪಾಲು ರೈತ ಸಂಘಟನೆಗಳು ರಾಷ್ಟ್ರೀಯ ಕಿಸಾನ್ ಒಕ್ಕೂಟ ರಚನೆ ಮಾಡಿಕೊಂಡು ಫೆಬ್ರವರಿ 13ರಂದು ಹೋರಾಟಕ್ಕೆ ಕರೆ ಕೊಟ್ಟಿದ್ದವು.
ಇನ್ನು, ಚಾಮರಾಜನಗರ ಕಬ್ಬು ಬೆಳೆಗಾರ ಸಂಘದ ಕಾರ್ಯದರ್ಶಿ ಎಚ್.ಮೂಕಹಳ್ಳಿ ಮಹದೇವಸ್ವಾಮಿ ಈ ಕುರಿತು ಪ್ರತಿಕ್ರಿಯಿಸಿದ್ದು, ಮುಂಜಾನೆ ಮಲಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮಾ ಶಾಂತಕುಮಾರ್ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ರೈಲಿನಲ್ಲಿದ್ದ 150ಕ್ಕೂ ಅಧಿಕ ಮಂದಿಯನ್ನು ಛತ್ರವೊಂದರಲ್ಲಿ ಇಟ್ಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications