ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ; ರೈತರು ಇದನ್ನು ತಿಳಿಯಿರಿ

|
Google Oneindia Kannada News

ಕೊಪ್ಪಳ, ಡಿಸೆಂಬರ್ 09 : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಕರ್ನಾಟಕ ಸರ್ಕಾರ ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.

2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಣೆ ಮಾಡಲಾಗಿದೆ. ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 75 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುತ್ತದೆ.

ಕರ್ನಾಟಕ: ಭತ್ತ, ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಕರ್ನಾಟಕ: ಭತ್ತ, ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ಈ ಹಿಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನಂತೆ, ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿತ್ತು.

 ಮಂಡ್ಯದಲ್ಲಿ ಭತ್ತ ಬೆಳೆಗೆ ಕಂದು ಜಿಗಿಹುಳು ಕಾಟ; ನಿಯಂತ್ರಣ ಹೇಗೆ? ಮಂಡ್ಯದಲ್ಲಿ ಭತ್ತ ಬೆಳೆಗೆ ಕಂದು ಜಿಗಿಹುಳು ಕಾಟ; ನಿಯಂತ್ರಣ ಹೇಗೆ?

MSP For Paddy Crop Farmers Should Know

ಬೆಂಬಲ ಬೆಲೆಯನ್ನು ಸಾಮಾನ್ಯ ಭತ್ತಕ್ಕೆ ರೂ.1868 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.1888 ಗಳನ್ನು ಮೊದಲಿನ ಆದೇಶದಂತೆ ನಿಗದಿಪಡಿಸಲಾಗಿದೆ. ಆಸಕ್ತ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಹವಾಮಾನ ಬದಲಾವಣೆ; ಭತ್ತ ಬೆಳೆಯುವ ರೈತರಿಗೆ ಸಲಹೆ ಹವಾಮಾನ ಬದಲಾವಣೆ; ಭತ್ತ ಬೆಳೆಯುವ ರೈತರಿಗೆ ಸಲಹೆ

ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ, ಗಂಗಾವತಿ, ಕಾರಟಗಿ, ಶ್ರೀರಾಮನಗರ ಹಾಗೂ ಸಿದ್ದಾಪುರಗಳಲ್ಲಿ 5 ಭತ್ತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.

ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್

English summary
Karnataka government announced MSP for Paddy crop. Farmers should know about MSP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X