ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ; ರೈತರು ಇದನ್ನು ತಿಳಿಯಿರಿ
ಕೊಪ್ಪಳ, ಡಿಸೆಂಬರ್ 09 : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಕರ್ನಾಟಕ ಸರ್ಕಾರ ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.
2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಣೆ ಮಾಡಲಾಗಿದೆ. ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಠ 75 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುತ್ತದೆ.
ಕರ್ನಾಟಕ: ಭತ್ತ, ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
ಈ ಹಿಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್ನಂತೆ, ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿತ್ತು.
ಮಂಡ್ಯದಲ್ಲಿ ಭತ್ತ ಬೆಳೆಗೆ ಕಂದು ಜಿಗಿಹುಳು ಕಾಟ; ನಿಯಂತ್ರಣ ಹೇಗೆ?
ಬೆಂಬಲ ಬೆಲೆಯನ್ನು ಸಾಮಾನ್ಯ ಭತ್ತಕ್ಕೆ ರೂ.1868 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.1888 ಗಳನ್ನು ಮೊದಲಿನ ಆದೇಶದಂತೆ ನಿಗದಿಪಡಿಸಲಾಗಿದೆ. ಆಸಕ್ತ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.
ಹವಾಮಾನ ಬದಲಾವಣೆ; ಭತ್ತ ಬೆಳೆಯುವ ರೈತರಿಗೆ ಸಲಹೆ
ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ, ಗಂಗಾವತಿ, ಕಾರಟಗಿ, ಶ್ರೀರಾಮನಗರ ಹಾಗೂ ಸಿದ್ದಾಪುರಗಳಲ್ಲಿ 5 ಭತ್ತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್