ಮುಧೋಳ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ
ಬಾಗಲಕೋಟೆ, ನವೆಂಬರ್, 17: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಹಾಗೆಯೇ ರೈತರು ಮುಧೋಳ ತಾಲೂಕಿನ ಗದ್ದನಕೇರಿ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕಾರ್ಖಾನೆ ಮಾಲಿಕರು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ಬಂದ್ ಮಾಡಿದ್ದರಿಂದ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಯಿತು.
ಕಬ್ಬಿಗೆ ಬೆಲೆ ನಗದಿ ಮಾಡುವಂತೆ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಧಿಡೀರ್ ರಾಷ್ಟ್ರೀಯ ಹೆದ್ದಾರಿ 218 ಅನ್ನು ಬಂದ್ ಮಾಡಿದ್ದು, ಜನತೆ, ವಿದ್ಯಾರ್ಥಿಗಳು, ವಾಹನ ಸವಾರರು ಪರದಾಡುವಂತಾಯಿತು. ಆಗ ಆಕ್ರೋಶಗೊಂಡ ರೈತರ ಮನವೊಲಿಸುವುದಕ್ಕೆ ಪೊಲೀಸರು, ತಹಶೀಲ್ದಾರರು ಮುಂದಾಗಿದ್ದರು. ಮುಧೋಳ ತಾಲೂಕಿನ ರೈತರು ಧಿಡಿರ್ ಅಂತಾ ಗದ್ದನಕೇರಿ ಕ್ರಾಸ್ನಲ್ಲಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಮುಧೋಳ ಯಶಸ್ವಿ ಬಂದ್ ನಡೆಸಿದ್ದ ರೈತರು, ಎರಡನೇ ದಿನದ ಬಂದ್ ಮುಂದುವರೆಸುವುದಾಗು ಘೋಷಣೆ ಮಾಡಿದ್ದರು.

ರಾಷ್ಟ್ರೀಯ ಹೆದ್ದಾರಿ 218 ಬಂದ್
ಅದರಂತೆಯೇ ಮುಧೋಳದಲ್ಲೇ ಎರಡನೇ ದಿನದ ಬಂದ್ ಮುಂದುವರಿಯಬಹುದು ಅಂತಾ ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಮುಧೋಳ ರೈತ ಮುಖಂಡರು ಗದ್ದನಕೇರಿ ಕ್ರಾಸ್ನಲ್ಲಿ ರಸ್ತೆ ನಡೆಸಿ ಆಕ್ರೋಶ ಹೊರಹಾಕಿದರು. ರಾಷ್ಟ್ರೀಯ ಹೆದ್ದಾರಿ 218 ಅನ್ನು ಬಂದ್ ಮಾಡಿದ್ದಕ್ಕೆ ಹುಬ್ಬಳ್ಳಿ-ಸೊಲ್ಹಾಪುರ ಹಾಗೂ ರಾಯಚೂರು-ಬೆಳಗಾವಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಇದೇ ಸರ್ಕಲ್ನಲ್ಲಿ ಜವಾವಣೆಗೊಂಡವು. ಅಲ್ಲದೇ ಕಿಲೋ ಮೀಟರ್ಗಟ್ಟಲೇ ಲಾರಿ, ಬಸ್, ಬೈಕ್ ಸೇರಿದಂತ ಸಾವಿರಾರು ವಾಹನಗಳು ಮೂರ್ನಾಲ್ಕು ಗಂಟೆ ನಿಂತಲ್ಲೇ ನಿಂತಿದ್ದವು.

ಸರ್ಕಾರಕ್ಕೆ ಅನ್ನದಾತರಿಂದ ಗಡುವು
"ರೈತರು ಸರ್ಕಾರಕ್ಕೆ ಕೊಟ್ಟಿದ್ದ ಎರಡು ದಿನದ ಗಡವು ಮುಗಿಯುತ್ತಾ ಬಂದಿದೆ. ಆದರೆ ಇದುವರೆಗೂ ಕಬ್ಬಿಗೆ ನಿಗದಿತ ಬೆಲೆಯನ್ನು ಘೋಷಣೆ ಮಾಡುತ್ತಿಲ್ಲ. ನಾವು ಕಾರ್ಖಾನೆ ಮಾಲಿಕರ ಜೊತೆ ಹೇಗೋ ನ್ಯಾಯಯುತ ಬೆಲೆಯನ್ನು ತೆಗೆದುಕೊಳ್ಳುತ್ತಿದ್ದೆವು. ಆದರೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಎರಡು ದಿನ ಕಾಲಾವಕಾಶ ಕೇಳಿತ್ತು. ಎರಡು ದಿನ ಕಳೆಯುತ್ತಾ ಬಂದರೂ ಕೂಡ ಯಾವುದೇ ಘೋಷಣೆ ಮಾಡಿಲ್ಲ. ಸಿಎಂ ಬೊಮ್ಮಾಯಿಯವರು ಧಮ್ಮು, ತಾಕತ್ತು ಅಂತಾ ಹೇಳುತ್ತಾರೆ. ಅವರಿಗೆ ತಾಕತ್ತನ್ನು ರೈತರ ಬೇಡಿಕೆ ಇಡೇರಿಸುವುದರಲ್ಲಿ ತೋರಿಸಲಿ," ಅಂತಾ ರೈತರು ಆಕ್ರೋಶ ಹೊರಹಾಕಿದರು.

ಕಬ್ಬು ಬೆಳೆಗಾರರ ಗೋಳು ಆಲಿಸದ ಸರ್ಕಾರ
ಇನ್ನು ಬೆಳಗ್ಗೆ 9 ಗಂಟೆಗೆ ಗದ್ದನಕೇರಿ ಕ್ರಾಸ್ಗೆ ಆಗಮಿಸಿದ ರೈತರು, ನೋಡ ನೋಡುತ್ತಿದ್ದಂತೆ ವಾಹನಗಳನ್ನು ಅಡ್ಡಗಟ್ಟಿ ರಸ್ತೆ ಬಂದ್ ಮಾಡಿಸಿದ್ದರು. ಸುಮಾರು 2 ಗಂಟೆಯವರೆಗೂ ರಸ್ತೆ ಬಂದ್ ಮಾಡಿದ್ದ ರೈತರನ್ನು ತಹಶೀಲ್ದಾರ್ ವಿನಯಕುಮಾರ್ ಪ್ರತಿಭಟನೆ ಕೈಬಿಡುವಂತೆ ಮನವರಿಕೆ ಮಾಡಿದ್ದರು. ಆದರೂ ರೈತರು ತಹಶೀಲ್ದಾರರ ಮನವೊಲಿಕೆಗೂ ಜಗ್ಗದೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ನಂತರ ಪ್ರತಿಭಟನಾ ಸ್ಥಳಕ್ಕೆ ಎಡಿಸಿ ಮುರುಗಿ ಆಗಮಿಸಿ, ರೈತರ ಮನವೊಲಿಸುವಲ್ಲಿ ಯಶಸ್ವಿಯಾದರು. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಬ್ಬಿಗೆ ಸೂಕ್ತ ಬೆಲೆ ಘೋಷಣೆ ಆಗುತ್ತದೆ. ತಮ್ಮ ಹೋರಾಟದ ಬಗ್ಗೆ ಮೇಲಾಧಿಕಾರಿಳ ಗಮನಕ್ಕೆ ತರುವುದಾಗಿ ಹೇಳಿದ ನಂತರ ರೈತರು ಪ್ರತಿಭಟನೆಯಿಂದ ಹಿಂದೆ ಸರಿದರು.

ಒಡೆದಾಳುವ ನೀತಿ, ಅನ್ನದಾತನ ಆರೋಪ
ಅಲ್ಲದೇ "ಜಿಲ್ಲೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಒಡೆತನದ 5 ಶುಗರ್ ಕಾರ್ಖಾನೆಗಳಿವೆ. ಅದರಲ್ಲಿ ಮುಧೋಳ ವ್ಯಾಪ್ತಿಯಲ್ಲಿರುವ ಎರಡು ಕಾರ್ಖಾನೆಗಳು ಬಂದ್ ಆಗಿವೆ. ಆದರೆ ಬಾದಾಮಿ ತಾಲೂಕಿನಲ್ಲಿರುವ ಮೂರು ಕಾರ್ಖಾನೆಗಳು ಒಂದು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿವೆ. ನ್ಯಾಯಯುತ ಬೆಲೆ ನೀಡದೇ, ಅಲ್ಲಿ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ನಿರಣಿ ಅವರ ಈ ನೀತಿಯಿಂದಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದೆ. ಅದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ನ್ಯಾಯಯುತ ಬೆಲೆ ನೀಡಿ ಕಾರ್ಖಾನೆ ಆರಂಭ ಮಾಡಿ. ರೈತರನ್ನು ಹೆದರಿಸಿ ಮೂರು ಕಾರ್ಖಾನೆಗಳನ್ನು ಆರಂಭ ಮಾಡಿದ್ದೀರಿ," ಎಂದು ಸಚಿವ ನಿರಾಣಿ ವಿರುದ್ದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications