ಧಾರವಾಡದ ಕೆಐಎಡಿಬಿಯಲ್ಲಿ ಬಹುಕೋಟಿ ಹಗರಣ: ತನಿಖೆ ಚುರುಕುಗೊಳಿಸಿದ ಸಿಐಡಿ, ಇದುವರೆಗೂ ಬಂಧನಕೊಳ್ಳಗಾದ ಖದೀಮರ ವಿವರ
ಹುಬ್ಬಳ್ಳಿ, ಮೇ, 19: ಧಾರವಾಡದ ಕೆಐಎಡಿಬಿಯಲ್ಲಿ ನಡೆದಿದ್ದ ಬಹುಕೋಟಿ ಹಗರಣದ ತನಿಖೆ ಸಾಕಷ್ಟು ಚುರುಕು ಪಡೆದುಕೊಂಡಿದೆ. ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಕೋಟಿಗಟ್ಟಲೇ ಹಣವನ್ನು ನುಂಗಿ ಹಾಕಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಕೆಐಎಡಿಬಿಯಲ್ಲಿ ಏಜೆಂಟ್ ಆಗಿದ್ದ ಅಷ್ಪಾಕ್ ಎಂಬುವವನನ್ನು ಬಂಧಿಸಿದ್ದಾರೆ. ಅಷ್ಫಾಕ್ ಸೇರಿದಂತೆ ಇಲ್ಲಿಯವರೆಗೂ ಎಂಟು ಜನರನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ರೈತರ ಹೆಸರಿನಲ್ಲಿ ಕೋಟಿಗಟ್ಟಲೇ ಹಣ ನುಂಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದ ಭೂಪರನ್ನು ಮಟ್ಟ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸುಮಾರು 20ಕ್ಕೂ ಹೆಚ್ಚು ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ಸುಮಾರು 22 ಕೋಟಿ ಲಪಟಾಯಿಸಿದ್ದರು. ನಕಲಿ ದಾಖಲೆ ಸೃಷ್ಟಿಸಿ ಒಂದೇ ಭೂಮಿಗೆ ಎರಡು ಬಾರಿ ಪರಿಹಾರ ಪಡೆದಿದ್ದರು. ಈ ಬಗ್ಗೆ ರೈತರು ಹೋರಾಟ ನಡೆಸಿದ್ದರು. ಹೋರಾಟಕ್ಕೆ ಮಣಿದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.
ಹಲವು ದಿನಗಳಿಂದ ಧಾರವಾಡದಲ್ಲಿಯೇ ಬೀಡು ಬಿಟ್ಟಿರುವ ಸಿಐಡಿ ಅಧಿಕಾರಿಗಳ ತಂಡ 14 ಜನರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ಘಟನೆ ನಡೆದ ಬಳಿಕ ಕೆಲವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲು ಸಹ ಏರಿದ್ದರು. ಅರ್ಜಿದಾರರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದರು.
ಅಲ್ಲದೆ, ತಕರಾರು ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನು ಮನ್ನಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದ್ದಾರೆ. ಹೀಗಾಗಿ, ಇದೀಗ ಒಬ್ಬೊಬ್ಬರನ್ನೆ ಸಿಐಡಿ ಅಧಿಕಾರಿಗಳು ಕಂಬಿ ಹಿಂದೆ ಕಳುಹಿಸುತ್ತಿದ್ದಾರೆ.
ಒಟ್ಟಿನಲ್ಲಿ ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿರುವ ಕೈಗಳಿವೆ ಕೋಳ ತೊಡಿಸುವ ಕಾರ್ಯಕ್ಕೆ ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಅದೆಷ್ಟು ಕಾಣದ ಕೈಗಳು ಆಟ ಆಡಿವೆ ಎನ್ನುವಂತಹ ಮಾಹಿತಿ ಸಿಐಡಿ ತನಿಖೆಯಿಂದಲೇ ಬಯಲಿಗೆ ಬರಬೇಕಿದೆ. ಅದು ಯಾರೇ ಇದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ರೈತರಿಗೆ ನ್ಯಾಯ ಸಿಗಬೇಕು ಎಂಬುವುದು ಪ್ರಜ್ಞಾವಂತ ನಾಗರಿಕರ ಒತ್ತಾಸೆ ಆಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications