ಮಲ್ಟಿಪ್ಲೆಕ್ಸ್ ವಾಹಿನಿ: ಕೃಷಿ ಮಾಸಿಕ ಲೋಕಾರ್ಪಣೆ
ಬೆಂಗಳೂರು, ಫೆ.9: 'ಮಲ್ಟಿಪ್ಲೆಕ್ಸ್ ವಾಹಿನಿ' ಕೃಷಿ ಮಾಸಪತ್ರಿಕೆಯ ಚೊಚ್ಚಲ ಸಂಚಿಕೆ ಸೋಮವಾರ ಬಿಡುಗಡೆಯಾಗಿದೆ. ಪಶು ಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ಅವರು ತಮ್ಮ ಗೃಹ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆದ ಸರಳ ಸಮಾರಂಭದಲ್ಲಿ ಸಚಿವರು ಪತ್ರಿಕೆ ಲೋಕಾರ್ಪಣೆ ಮಾಡಿ ಶುಭ ಕೋರಿದರು.
1960 ರಿಂದ ಈಚೆಗೆ ಭಾರತದ ಕೃಷಿ ಕ್ಷೇತ್ರದಲ್ಲಿ ಆದ ಬದಲಾವಣೆಗಳಿಗೆ ಸಾಕ್ಷಿಯಾದ ನಮ್ಮ ತಂಡ ಕೃಷಿಯಲ್ಲಿ ಲಘು ಪೋಷಕಾಂಶಗಳ ಮಹತ್ವವನ್ನು ದೇಶದ ರೈತ ಸಮುದಾಯಕ್ಕೆ ತಿಳಿಸುವ ಪ್ರಯತ್ನ ಮಾಡಿತು. ಅದರಿಂದ ನಾಡಿನ ಕೃಷಿ ಉತ್ಪಾದಕತೆ ಹೆಚ್ಚಾದದ್ದು ಈಗ ಇತಿಹಾಸ ಎಂದು ಪತ್ರಿಕೆ ಸಂಪಾದಕ ಕೆ.ಎನ್ ನಾಗೇಶ್ ಹೇಳಿದರು.

1974 ರಲ್ಲಿ ಆರಂಭವಾದ ನಮ್ಮ ಕೃಷಿ ಕಾಯಕ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿಸಿಕೊಂಡಿದೆ. ಕಳೆದ ನಾಲ್ಕು ದಶಕಗಳಿಗೂ ಮೀರಿದ ನಮ್ಮ ಕೃಷಿ ಅನುಭವಗಳನ್ನು ರೈತ ಸಮುದಾಯದ ಜೊತೆ ಹಂಚಿಕೊಳ್ಳಲು ಈ ಪತ್ರಿಕೆ ರೂಪಿಸಿದ್ದೇವೆ.
ದೇಸಿ ಕೃಷಿ ಜ್ಞಾನ, ಆಧುನಿಕ ಬೇಸಾಯ ಪದ್ಧತಿಗಳು, ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ಪೋಷ್ಟಿಕಾಂಶಗಳ ನಿರ್ವಹಣೆ, ಸಮಗ್ರ ಕೀಟ ರೋಗಗಳ ನಿರ್ವಹಣೆ ಮುಂತಾದ ತಾಂತ್ರಿಕ ಮಾಹಿತಿಗಳನ್ನು ಹೊತ್ತು ತರುವ ಮಲ್ಟಿಪ್ಲೆಕ್ಸ್ ವಾಹಿನಿ ನಿಮ್ಮ ಕೃಷಿಮಾಹಿತಿ ದಾಹಕ್ಕೆ ಜೀವಜಲವಾಗಿ, ಪ್ರಶ್ನೆಗಳಿಗೆ ಉತ್ತರವಾಗಿ, ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರವಾಗಿ ಪ್ರತಿ ತಿಂಗಳು ನಿಮ್ಮ ಕೈಸೇರಲಿದೆ.
'ಮಲ್ಟಿಪ್ಲೆಕ್ಸ್ ವಾಹಿನಿ' ಈ ನಾಡಿನ ರೈತರ ಸರ್ವತೋಮುಖ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಪ್ರಕಟಗೊಳ್ಳುತ್ತಿರುವ ಸಂಪೂರ್ಣ ಕೃಷಿ ಮಾಸಿಕ. ಕೃಷಿ ಬದುಕು ಲಾಭದಾಯಕವಾಗಿಸಲು, ಕೃಷಿಕರ ಬದುಕು ಹಸನಾಗಿಸಲು ಗಾವುದ ಗಾವುದ ನಡೆಯುವ ಶಕ್ತಿ ಎಲ್ಲರಿಗೂ ಬರಲಿದೆ ಎಂಬ ವಿಶ್ವಾಸದೊಂದಿಗೆ ಪತ್ರಿಕೆ ನಿಮ್ಮ ಕೈಗಿಡುತ್ತಿದ್ದೇವೆ ಎಂದು ಪತ್ರಿಕೆ ಸಂಪಾದಕ ಕೆ.ಎನ್.ನಾಗೇಶ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications