ಮಾಗಿ ಉತ್ಸವಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ ಮೈಸೂರು
ಮೈಸೂರು, ಡಿಸೆಂಬರ್ 20: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ದಸರಾ ನಂತರ ಪ್ರವಾಸಿಗರನ್ನು ಹಾಗೂ ಸ್ಥಳೀಯರನ್ನು ಹೆಚ್ಚು ಆಕರ್ಷಿಸಲು ವರ್ಷಾಂತ್ಯದಲ್ಲಿ ಆಯೋಜಿಸುವ ಮಾಗಿ ಉತ್ಸವ' ಈ ಬಾರಿ ಡಿ.22ರಿಂದ ಆರಂಭವಾಗಲಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕೇಕ್ ಉತ್ಸವ, ಮುಕ್ತ ಚಲನಚಿತ್ರೋತ್ಸವ, ಚಿತ್ರಸಂತೆ ಮಾದರಿಯಲ್ಲಿ ಕಲಾಉತ್ಸವ, ಹಸಿರು ಸಂತೆ, ಪಕ್ಷಿ ಹಬ್ಬ, ಗೊಂಬೆಯಾಟ ಪ್ರದರ್ಶನ ಹೀಗೆ ಹತ್ತು ಹಲವು ಕಾರ್ಯಕಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ವಿವರಿಸಿದ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರು, ಈ ಬಾರಿ ಕಾರ್ಯಕ್ರಮಗಳನ್ನು ವಿಭಿನ್ನವಾಗಿ ಆಯೋಜಿಸಿದ್ದು, ಹೊಸ ಆಯಾಮ ನೀಡಲಾಗಿದೆ.
ಕೃಷ್ಣರಾಜ ಬುಲೆವಾರ್ಡ್ ರಸ್ತೆ (ನ್ಯಾಯಾಲಯದ ಮುಂಭಾಗದ ರಸ್ತೆ)ಯಲ್ಲಿ ಡಿ.30ರಂದು ಮೈಸೂರು ಕಲಾ ಉತ್ಸವ ಹಾಗೂ ಸಾವಯವ ಕೃಷಿಯ ಹಸಿರು ಸಂತೆಯನ್ನು ಆಯೋಜಿಸಲಾಗಿದೆ. ಇಲ್ಲಿ ಒಂದು ರಸ್ತೆಯಲ್ಲಿ ಕಲಾ ಉತ್ಸವ ನಡೆಯಲಿದ್ದು, ಮತ್ತೊಂದು ರಸ್ತೆಯಲ್ಲಿ ಹಸಿರು ಸಂತೆ ನಡೆಯಲಿದೆ.

ಕಲಾ ಉತ್ಸವದಲ್ಲಿ ಮೈಸೂರು ಶೈಲಿಯ ಚಿತ್ರಕಲೆಗಳು, ಗಂಜೀಫಾ, ವರ್ಣಚಿತ್ರಗಳು, ಛಾಯಾ ಚಿತ್ರಗಳು, ಕಾಷ್ಟ ಶಿಲ್ಪ, ಶಿಲ್ಪ ಕಲಾಕೃತಿಗಳು, ಮರದ ಕೆತ್ತನೆ, ಲೋಹದ ಕುಸುರಿ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಇರುತ್ತದೆ. ಹಸಿರು ಸಂತೆಯಲ್ಲಿ ಸಾವಯವ ಕೃಷಿಯ ಉತ್ಪನ್ನಗಳ ಪ್ರದರ್ಶನ, ಮಾರಾಟ, ತಿಂಡಿ,ತಿನಿಸುಗಳು ಲಭ್ಯವಿರಲಿದೆ. ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಪ್ರದರ್ಶನ ಇದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಡಿ.26ರಿಂದ 28ರವರೆಗೆ ನಗರದ ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಕೇಕ್ ಉತ್ಸವವನ್ನು ಆಯೋಜಿಸಲಾಗಿದೆ. ಡಿ 26ರಿಂದ 28ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಮುಕ್ತ ಚಲನ ಚಿತ್ರೋತ್ಸವ (ಓಪನ್ ಫಿಲಂ ಫೆಸ್ಟಿವಲ್) ನಡೆಯಲಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಹಾಗೂ ಅಂಬಿ ನಿಂಗ್ ವಯಸ್ಸಾಯ್ತು' ಮತ್ತು ಇಂಗ್ಲಿಷ್ ಚಿತ್ರ ಜಂಗಲ್ ಬುಕ್ ಅಥವಾ ಅವೆಂಜರ್ಸ್ ಎಂಡ್ಗೇಮ್ ಚಿತ್ರ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.
ಕಲಾಮಂದಿರದ ಆವರಣದಲ್ಲಿರುವ ರಂಗಾಯಣದ ವನರಂಗದಲ್ಲಿ ಡಿ.29ರಂದು ಮಕ್ಕಳಿಗಾಗಿ ಗೊಂಬೆಯಾಟ (ಪಪ್ಪೆಟ್ ಶೋ) ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇದಲ್ಲದೆ, ರಾಜ್ಯಮಟ್ಟದಲ್ಲಿ ನಡೆಯುವ ಬರ್ಡ್ ಫೆಸ್ಟಿವಲ್ ಈ ಬಾರಿ ಮೈಸೂರಿನಲ್ಲಿ ಡಿ.28 ಮತ್ತು 29ರಂದು ನಡೆಸಲಿದ್ದು ಇಲ್ಲಿನ ಜೀವ ವೈವಿಧ್ಯಗಳ ಬಗ್ಗೆ ಪರಿಚಯ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಡಿ.22ರಿಂದ ನಗರದ ಮಾನಸ ಗಂಗೋತ್ರಿಯಲ್ಲಿರುವ ಕ್ರಿಕೆಟ್ ಮೈದಾನದಿಂದ ದಸರಾದಲ್ಲಿ ಆಯೋಜಿಸಿದ್ದ ಪ್ಯಾರಾ ಸ್ಕೈಲಿಂಗ್ ಅನ್ನು ಮಾಗಿ ಉತ್ಸವದಲ್ಲೂ ಪರಿಚಯಿಸಲಾಗುತ್ತಿದೆ. ದಸರಾದಲ್ಲಿ ಇದ್ದ ದರವೇ ಈಗಲೂ ಇರಲಿದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications