ಸಾವಯವ ಕೃಷಿಕ, ನಾಡೋಜ ಎಲ್ ನಾರಾಯಣ ರೆಡ್ಡಿ ನಿಧನ
ಬೆಂಗಳೂರು, ಜನವರಿ 14: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿ ನಿವಾಸಿ, ಸಾವಯವ ಕೃಷಿಕ, ನಾಡೋಜ ಎಲ್ ನಾರಾಯಣ ರೆಡ್ಡಿ(80) ಅವರು ನಿಧನರಾಗಿದ್ದಾರೆ.
ಜಪಾನಿನ ಮಸನವೋ ಫುಕುವೋಕಾ ಅವರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿದ್ದ ನಾರಾಯಣ ರೆಡ್ಡಿ ಅವರು ನಾಡಿನ ರೈತರಿಗೆ ಮಾರ್ಗದರ್ಶಿಯಾಗಿದ್ದರು.

ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಮೇಲು ಫುಕುವೋಕಾ ಪ್ರಭಾವ ಬೀರಿದ್ದರು. ತೇಜಸ್ವಿ ಅವರ ಸಹಜ ಕೃಷಿ ಪುಸ್ತಕದಲ್ಲಿ ನಾರಾಯಣ ರೆಡ್ಡಿ ಅವರ ಸಾವಯಮ ಕೃಷಿ ಬಗ್ಗೆ ಪ್ರಸ್ತಾಪವಿದೆ.
ಪ್ರಜಾವಾಣಿಯಲ್ಲಿ ಕೃಷಿ ಸಂಬಂಧಿತ ಪ್ರಶ್ನೋತ್ತರ ಅಂಕಣದಲ್ಲಿ ರೈತರ ಸಮಸ್ಯೆಗಳಿಗೆ ಸರಳ ಪರಿಹಾರ ನೀಡುತ್ತಿದ್ದರು. ನಾರಾಯಣ ರೆಡ್ಡಿ ಅವರು ಮೂವರು ಗಂಡು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಸೋಮವಾರ ಮಧ್ಯಾಹ್ನದ ನಂತರ ವರ್ತೂರಿನಲ್ಲಿ ನಾರಾಯಣ ರೆಡ್ಡಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.












Click it and Unblock the Notifications