ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸರ್ಕಾರಕ್ಕೆ ನಂಜಾವಧೂತ ಶ್ರೀಗಳ ಆಗ್ರಹ
ಚಿತ್ರದುರ್ಗ, ಅಕ್ಟೋಬರ್ 28: "ಭದ್ರಾ ಮೇಲ್ದಂಡೆ ಕಾಮಗಾರಿ ಕುರಿತಂತೆ ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಅಂದು ಭದ್ರಾದಿಂದ ವಿವಿ ಸಾಗರಕ್ಕೆ 5 ಟಿಎಂಸಿ ನೀರು ಬಿಡುತ್ತೇವೆ ಎಂದು ಹೇಳಿದ್ದರು, ಈಗ ಅದು ಎರಡು ಟಿಎಂಸಿಗೆ ಬಂದಿದೆ. ಅಂದು ಯಡಿಯೂರಪ್ಪ ಸರ್ಕಾರ ಮಾತು ಕೊಟ್ಟಿತ್ತು. ಈಗಲೂ ಅವರದ್ದೇ ಸರ್ಕಾರ ಇದೆ. ಆ ಮಾತನ್ನು ಅವರು ಉಳಿಸಿಕೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ ಪಟ್ಟನಾಯಕನಹಳ್ಳಿ ನಂಜಾವಧೂತ ಶ್ರೀಗಳು.
ಹಿರಿಯೂರಿನಲ್ಲಿ ರೈತರೊಂದಿಗೆ ಸಭೆ ನಡೆಸಿದ ಶ್ರೀಗಳು, "10 ವರ್ಷಗಳ ಹಿಂದೆ ನಮ್ಮ ರೈತ ಸಂಘದ ನೇತೃತ್ವದಲ್ಲಿ ಹಿರಿಯೂರಿನಲ್ಲಿ ನಿರಂತರ ಹೋರಾಟ ಮಾಡಿದ್ದೆವು. ಹೋರಾಟಕ್ಕೆ ಮಣಿದ ಅಂದಿನ ಸರ್ಕಾರ ವಾಣಿವಿಲಾಸ ಜಲಾಶಯಕ್ಕೆ 5 ಟಿಎಂಸಿ ನೀರು ಕೊಡುವುದಾಗಿ ಘೋಷಿಸಿತ್ತು. ಆಗಿನ ನೀರಾವರಿ ಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಮಂಜೂರು ಮಾಡಿದ್ದರು. ಆದರೆ ಈಗ ಐದು ಟಿಎಂಸಿ ನೀರು 2 ಟಿಎಂಸಿ ನೀರಿಗೆ ಇಳಿದಿದೆ. ಈಗ ನೀರಾವರಿ ಅನುಷ್ಠಾನ ಮಾಡುವುದಕ್ಕೆ ಸರ್ಕಾರ ಹೊರಟಿದೆ. 3000 ಕೋಟಿಯಿಂದ ಸುಮಾರು 18000 ಕೋಟಿಗೆ ಯೋಜನೆಯನ್ನು ತಂದು ನಿಲ್ಲಿಸಿದ್ದಾರೆ, ಇವರು ನೀರು ಹರಿಸುತ್ತಿದ್ದಾರಾ, ದುಡ್ಡ ಹರಿಸುತ್ತಿದ್ದಾರಾ" ಎಂದು ದೂರಿದರು.

ಇದುವರಿಗೂ ಯೋಜನೆ ಪೂರ್ಣಗೊಳಿಸಿಲ್ಲ, ಏಳೆಂಟು ವರ್ಷಗಳ ಹಿಂದೆ ಖರೀದಿಸಿದ ವಸ್ತುಗಳು ತುಕ್ಕು ಹಿಡಿದಿವೆ. ನಾಲ್ಕು ನಾಲ್ಕು ಜನ ಮುಖ್ಯಮಂತ್ರಿಗಳು ಬಂದು ಶಿಲಾನ್ಯಾಸ ಮಾಡುವಂತಹ ಕೆಲಸ ಮಾಡಿದ್ದೀರಾ. ಸ್ವಾತಂತ್ರ್ಯ ಪೂರ್ವದಿಂದ ನಮಗೆ ನೀರಿನ ವಿಚಾರದಲ್ಲಿ ಅನ್ಯಾಯ ಮಾಡುತ್ತಾ ಬಂದಿದ್ದೀರಿ. ಕೊಟ್ಟ ಮಾತನ್ನು ಮೊದಲು ಉಳಿಸಿಕೊಳ್ಳಿ ಎಂದು ನಂಜವಧೂತ ಶ್ರೀಗಳು ಆಗ್ರಹಿಸಿದರು.
ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅನಿವಾರ್ಯವಾಗಿ ರೈತ ಸಂಘ ದೊಂದಿಗೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications