ನವಲಗುಂದ ಬಂದ್: ತೆರೆಯದ ದುಕಾನು, ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ನವಲಗುಂದ, ಜನವರಿ 23: ಮಹದಾಯಿ ಹೋರಾಟದಲ್ಲಿ ಭಾಗವಹಿಸಿದ್ದವರಿಗೆ ಪೊಲೀಸರು ನೀಡುತ್ತಿರುವ ಕಿರುಕುಳ ನಿಲ್ಲಿಸಬೇಕು, ಹೋರಾಟಗಾರರ ಮೇಲೆ ಹಾಕಿದ್ದ ಮೊಕದ್ದಮೆ ವಾಪಸ್ ಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಕಾರಣಗಳಿಗಾಗಿ ಧಾರವಾಡ ಜಿಲ್ಲೆಯ ನವಲಗುಂದ ಬಂದ್ ಗೆ ಸೋಮವಾರ ಕರೆ ನೀಡಲಾಗಿದೆ.
ರೈತರ ಬೇಡಿಕೆಗಳ ಈಡೇರಿಕೆಗಾಗಿ ವ್ಯಾಪಾರಸ್ಥರು ಕೂಡ ಬೆಂಬಲ ಸೂಚಿಸಿ, ವ್ಯಾಪಾರ-ವಹಿವಾಟು ಬಂದ್ ಮಾಡಿದ್ದಾರೆ. ಈ ಹಿಂದೆ ಮಹದಾಯಿ ಹೋರಾಟದ ವೇಳೆ ಗಲಭೆ ಪ್ರಕರಣದಲ್ಲಿ ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.[ಕಂಬಳ, ಕಾವೇರಿ, ಮಹದಾಯಿ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ]

ಮುಂಜಾಗ್ರತಾ ಕ್ರಮವಾಗಿ ರಾಜ್ಯ ಹಾಗೂ ಕೇಂದ್ರ ಸರಕಾರು ಕಚೇರಿ, ನ್ಯಾಯಾಲಯ, ಪುರಸಬೆ ಕಚೇರಿ, ಬ್ಯಾಂಕ್ ಗಳಿಗೆ ಭದ್ರತೆ ಒದಗಿಸಲಾಗಿದೆ. ಪಟ್ಟಣದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆಯಾಗಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ.
ಮಹದಾಯಿ ಗಲಭೆ ಪ್ರಕರಣದಲ್ಲಿನ ಬಹುತೇಕ ರೈತರು ಪೊಲೀಸರಿಗೆ ಹೆದರಿ ಗ್ರಾಮ ತೊರೆದಿದ್ದಾರೆ. ಪರೀಕ್ಷೆಗಳು ಇರುವುದರಿಂದ ಎಂದಿನಂತೆ ಶಾಲಾ- ಕಾಲೇಜುಗಳು ನಡೆದಿವೆ. ಬಸ್ ಸಂಚಾರಕ್ಕೂ ಯಾವುದೇ ಅಡೆತಡೆ ಆಗಿಲ್ಲ. ಆದರೆ ಬೇರೆ ಊರಿನಿಂದ ಬರುವ ವಾಹನಗಳ ಪೈಕಿ ಸಂಶಯಾಸ್ಪದ ಎನಿಸುವಂಥದ್ದನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.[ಮಹದಾಯಿ ಬಗ್ಗೆ ನವಲಗುಂದ ಶಾಸಕ ಕೋನರಡ್ಡಿ ಲೇಖನ]
"ನಿಮ್ಮೊಂದಿಗೆ ನಾವಿದ್ದೇವೆ' ಎಂಬ ಘೋಷಣೆಯೊಂದಿಗೆ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಆದರೆ ಹೋರಾಟಗಾರರು ಜೈಲ್ ಭರೋ ಹಾಗೂ ಗಡೀಪಾರು ಚಳವಳಿ ನಡೆಸಲು ನಿರ್ಧರಿಸಿದ್ದಾರೆ. ಹೋರಾಟಗಾರರಿಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications