ಬೀರು ತರುವವರ ಮನೆಗೆ ನೀರಾ ತರುವಾ!

ಮಂಗಳೂರಿನಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ಜ್ಯೂಸ್ ತಯಾರಿಕಾ ಘಟಕಾ ಅಸ್ತಿತ್ವಕ್ಕೆ ಬರಲಿದೆ. ನೀರಾ ತಯಾರಿಕೆಗೆ ಬಳಸಲಾಗುವ ತಂತ್ರಜ್ಞಾನವನ್ನು ಸುರಕ್ಷಿತ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್ಆರ್ಎಲ್) ಮತ್ತು ಮೈಸೂರಿನ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಅಭಿವೃದ್ಧಿ (ಸಿಎಫ್ ಟಿಆರ್ಐ) ಪಡೆಸಿದೆ. ಈ ತಂತ್ರಜ್ಞಾನದಿಂದ ದಿನವೊಂದಕ್ಕೆ 1,000 ಲೀಟರ್ ನೀರಾ (ಜ್ಯೂಸ್) ತಯಾರಿಸುವ ಸಾಮರ್ಥ್ಯವಿದೆ ಎಂದು ರಾಜ್ಯ ಕೃಷಿ ನಿರ್ದೇಶಕ ಎನ್ ಜಯರಾಮ್ ಹೇಳುತ್ತಾರೆ.
ನೀರಾಗೆ ಇಲ್ಲ ಅಧಿಕೃತ ಮಾನ್ಯತೆ: ರಾಜ್ಯ ಸರ್ಕಾರ ಅಬಕಾರಿ ಕಾಯ್ದೆಯಲ್ಲಿ ನೀರಾ ಕುರಿತಾದ ತಿದ್ದುಪಡಿ ಇನ್ನೂ ಆಗಿಲ್ಲ. ಕಾಯಿದೆಯಲ್ಲಿ ತಿದ್ದುಪಡಿ ಆದ ನಂತರವಷ್ಟೆ ಇಲಾಖೆ ಘಟಕಕ್ಕಾಗಿ ಟೆಂಡರು ಕರೆಯಲು ಸಾಧ್ಯ. ಸದ್ಯದ ಅಬಕಾರಿ ಕಾಯ್ದೆಯಂತೆ ಹುಳಿ ಬರಿಸಿದ ನೀರಾವನ್ನು ಸಾರಾಯಿ ಎಂದೇ ಪರಿಗಣಿಸಲಾಗಿದೆ. ಜೊತೆಗೆ ಇದನ್ನು ಸಾರ್ವಜನಿಕವಾಗಿ ಮಾರುವಂತಿಲ್ಲ ಎಂದು ಸೂಚಿಸಿದೆ.
ನಾವು ಪ್ರಾರಂಭದಲ್ಲಿ ಮಂಗಳೂರು ಸಮೀಪ 29 ಎಕರೆ ಭೂ ಪ್ರದೇಶದಲ್ಲಿ ಬೆಳೆದಿರುವ 400 ತೆಂಗಿನ ಮರಗಳನ್ನು ನೀರಾಕ್ಕಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದೇವೆ. ಈ ತೆಂಗಿನ ಮರದ ಸುಳಿಯ ಭಾಗದಲ್ಲಿ ಮಾಡಲಾಗುವ ರಂಧ್ರಗಳಿಂದ ಸೂರ್ಯ ಉದಯಿಸುವ ಮುನ್ನ ರಸ ಸುರಿಯುತ್ತದೆ. ಪ್ರತಿಯೊಂದು ಮರದಿಂದ ದಿನವೊಂದಕ್ಕೆ 2 ರಿಂದ 3 ಲೀಟರ್ ನೀರು ಸಂಗ್ರಹಿಸಬಹುದಾಗಿದೆ.
ಇದನ್ನು ಸಂಗ್ರಹಿಸಿ ತಂತ್ರಜ್ಞಾನದ ಮೂಲಕ ಜ್ಯೂಸ್ ತಯಾರಿಸಲಾಗುವುದು. 6 ರಿಂದ 9 ತಿಂಗಳಲ್ಲಿ ಜ್ಯೂಸ್ ಸಿದ್ಧಗೊಳ್ಳುವುದು. ಈ ಜ್ಯೂಸ್ ಸಕ್ಕರೆ ಅಂಶ ರಹಿತವಾದುದು ಮಾತ್ರವಲ್ಲ ದೇಹಕ್ಕೆ ಆರೋಗ್ಯಕರವಾದುದು ಎಂದು ಜಯರಾಮ್ ಹೇಳಿದ್ದಾರೆ.
ನೀರಾ ನೀತಿಗೆ ಒತ್ತಾಯ: ಈ ಮಧ್ಯೆ ರಾಜ್ಯ ರೈತ ಸಂಘ ಕೂಡ "ನೀರಾ ನೀತಿ" ಶೀಘ್ರವಾಗಿ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಸುಮಾರು ಹತ್ತು ವರ್ಷಗಳಿಂದಲೂ ನೀರಾ ನೀತಿಯನ್ನು ಘೋಷಿಸುವಂತೆ ಒತ್ತಾಯಿಸುತ್ತಿದ್ದೇವೆ. ತೆಂಗಿನ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ವಿವಿಧ ರೋಗಗಳಿಂದ ರೈತರು ಕೃಷಿ ಬಗ್ಗೆ ಆಸಕ್ತಿಯನ್ನೇ ಕಳೆದುಕೊಳ್ಳುತ್ತಿದ್ದಾರೆ. ಆದರೆ, ಕಾಡು ಪ್ರಾಣಗಳಿಂದ, ಕೀಟಗಳಿಂದ ತೆಂಗಿನ ಕಾಯಿ ನಷ್ಟವಾದರೂ ನೀರಾ ತೆಗೆಯುವ ಮೂಲಕ ರೈತನಿಗೆ ಲಾಭವಾಗಲಿದೆ' ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎ ಎಂ ಮಹೇಶ್ ಪ್ರಭು ಹೇಳಿದ್ದಾರೆ. [ರೈತ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications