ಜನ ಸಂಪರ್ಕಕ್ಕೆ ಸಿದ್ದರಾಮಯ್ಯರಿಂದ ಹೊಸ ಆ್ಯಪ್
Recommended Video

ಬೆಂಗಳೂರು, ಅಕ್ಟೋಬರ್ 31: ಜನಸಂಪರ್ಕ ವಿಚಾರದಲ್ಲಿ ಫೇಸ್ಬುಕ್, ಟ್ವಿಟ್ಟರ್ ನೆಚ್ಚಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಆ್ಯಪ್ ಕ್ಷೇತ್ರಕ್ಕೂ ಕಾಲಿಡಲಿದ್ದಾರೆ.
ಸಾರ್ವಜನಿಕರ ಜತೆ ಸಂಪರ್ಕದಲ್ಲಿರಲು ಸಹಾಯಕವಾಗುವ 'ದಿ ಸಿಟಿಜೆನ್ ಕನೆಕ್ಟ್ ಆ್ಯಪ್'ಗೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಇದರ ಜತೆಗೆ ರೈತರ ಬೆಳೆ ಸಮೀಕ್ಷೆ ನಡೆಸುವ ಆ್ಯಪ್ ಗೂ ಅವರು ಚಾಲನೆ ನೀಡಲಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

'ದಿ ಸಿಟಿಜೆನ್ ಕನೆಕ್ಟ್ ಆ್ಯಪ್' ಮೂಲಕ ಸರಕಾರದ ಕಾರ್ಯಕ್ರಮಗಳು, ಸಾಧನೆಗಳ ಕುರಿತು ತಾಜಾ ಮಾಹಿತಿ ಪಡೆಯಬಹುದು. ಜತೆಗೆ ಕುಂದುಕೊರತೆಗಳಿಗೆ ಪರಿಹಾರವನ್ನೂ ಕಂಡುಕೊಳ್ಳಬಹುದು. ಜತೆಗೆ ಮುಖ್ಯಮಂತ್ರಿಯವರು ನಡೆದು ಬಂದ ದಾರಿ, ನವ ಕರ್ನಾಟಕವನ್ನು ನಿರ್ಮಿಸುವ ಕುರಿತ ಅವರ ವಿಚಾರಗಳನ್ನು ಸಹ ತಿಳಿದುಕೊಳ್ಳಬಹುದು.
ಈ ಆ್ಯಪ್ನಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಕ್ಷಣ ಕ್ಷಣದ ಸುದ್ದಿಗಳು, ಮುಖ್ಯಮಂತ್ರಿಗಳ ಬ್ಲಾಗ್, ಅವರ ಭಾಷಣ, ಸಂದರ್ಶನಗಳ ಮಾಹಿತಿ, ಲಿಂಕ್ ಲಭ್ಯವಾಗಲಿದೆ. ಬಳಕೆದಾರರು ಇಲಾಖಾವಾರು ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸುವುದು ಮತ್ತು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಆ್ಯಪ್ ಸಹಕಾರಿಯಾಗಲಿದೆ ಎಂದುಕೊಳ್ಳಲಾಗಿದೆ.
ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್
ಸರ್ಕಾರವು ರಾಜ್ಯದ ಪ್ರತಿ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. 2017-18ರ ಖಾರಿಫ್ ಹಂಗಾಮಿನಲ್ಲಿ ಬೆಳೆದ ಬೆಳೆಗಳಿಗೆ ಈ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.
ಈ ಕಾರ್ಯಕ್ಕಾಗಿ ಸುಮಾರು 15 ಸಾವಿರ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು ಜಿಪಿಎಸ್ ಕೋ-ಆರ್ಡಿನೇಟ್ಗಳೊಂದಿಗೆ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ಸಂಗ್ರಹಿಸುವರಲ್ಲದೆ ಮಾಲೀಕರ ಆಧಾರ್ ವಿವರಗಳನ್ನು ಸಹ ಸಂಗ್ರಹಿಸುವರು.
ಈ ದತ್ತಾಂಶ ಸಂಗ್ರಹಿಸುವ ಕೆಲಸ ಬೃಹತ್ ಪ್ರಮಾಣದಲ್ಲಿ ಆಗಬೇಕಾಗಿರುವುದರಿಂದ ಇದು ನಿಧಾನವಾಗುವ ಸಾಧ್ಯತೆ ಇದೆ. ಇದನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ.
ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ವಿತರಣೆ, ರೈತರಿಗೆ ನೆರೆ ಅಥವಾ ಬರದಂತಹ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಪರಿಹಾರ ಒದಗಿಸಲು ಹಾಗೂ ಈ ಪರಿಹಾರದ ಮೊತ್ತವನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲು ಇದರಿಂದ ಸಹಾಯಕವಾಗಲಿದೆ.
ಬೆಳೆಗಳನ್ನು ಆರ್ಟಿಸಿಯಲ್ಲಿ ದಾಖಲಿಸುವುದರಿಂದ ಬೆಳೆಸಾಲ ಸುಗಮವಾಗಿ ದೊರೆಯಲೂ ರೈತರಿಗೆ ಅನುಕೂಲವಾಗುತ್ತದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications